ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು

October 26, 2021
10:29 PM

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು ನೀಡಬೇಕು ಎಂದು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ದಿನೇಶ್ ಶೆಣೈ ಹೇಳಿದರು.

Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-22 ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ, ವಾಣಿಜ್ಯ, ಸಾಹಿತ್ಯ, ಕ್ರೀಡಾಸಂಘ ಮತ್ತು ಇಕೋ ಕ್ಲಬ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಮ್ಮತದಿಂದ ಕಾರ್ಯ ನಿರ್ವಹಿಸುವ ಮನೋಭಾವವನ್ನು ಬೆಳೆಸಿಕೊಂಡು ಪರಂಪರೆ, ಪರಿಸರ ಮತ್ತು ಕಠಿಣ ಪರಿಶ್ರಮದ ನೆಲೆಗಟ್ಟಿನಲ್ಲಿ ಮೌಲ್ಯಾಧರಿತ ಜೀವನವನ್ನು ರೂಢಿಸಿಕೊಂಡರೆ ಬದುಕು ಉತ್ತಮವಾಗುತ್ತದೆ. ಸೋಲು ಎದುರಾದಾಗ ಧೈರ್ಯದಿಂದ ಎದುರಿಸಿ ವಾಸ್ತವಕ್ಕೆ ಮುಖಮಾಡಿ ನಿಲ್ಲಬೇಕು. ಮಹತ್ವಾಕಾಂಕ್ಷೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿಮುಂಗ್ಲಿಮನೆ ಮಾತನಾಡಿ ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬೇಕು. ವಿದ್ಯಾರ್ಥಿಗಳು ಬದುಕನ್ನು ಗೌರವಿಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ದೊರೆತ ಅವಕಾಶಗಳನ್ನು ಉಪಯೋಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ಪಡೆದುಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುನೀತ್ ,ಕಾರ್ಯದರ್ಶಿ ಕುಲದೀಪ್‌ಸಿಂಗ್, ಜತೆ ಕಾರ್ಯದರ್ಶಿ ಧರಿತ್ರಿ , ಕ್ರೀಡಾ ಸಂಘದ ಕಾರ್ಯದರ್ಶಿ ಗುರುಪ್ರಸಾದ್ , ಜತೆಕಾರ್ಯದರ್ಶಿ ದೀಪಾಲಿ ಇವರಿಗೆ ಪ್ರಮಾಣ ವಚನವನ್ನು ಬೋಧಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಉಪನ್ಯಾಸಕ ದೇವಿಪ್ರಸಾದ್ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸ್ಥೂಲವಾಗಿ ವಿವರಿಸಿದರು. ಉಪನ್ಯಾಸಕಿ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಮಾಧವಿ ಪಟೇಲ್ ಸ್ವಾಗತಿಸಿ ಯಶವಂತಿ ವಂದಿಸಿದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿಕಸಿತ ಭಾರತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ
ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |
June 11, 2025
9:14 PM
by: ದ ರೂರಲ್ ಮಿರರ್.ಕಾಂ
ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!
June 11, 2025
3:30 PM
by: ವಿಶೇಷ ಪ್ರತಿನಿಧಿ
ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |
June 11, 2025
2:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group