Advertisement
ಸುದ್ದಿಗಳು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಎನ್ಇಪಿ ಕಾರ್ಯಾಗಾರ

Share

ಒಂದು ಪ್ರಸಂಗದ ಪಾತ್ರವನ್ನು ವಿಭಿನ್ನರೀತಿಯಲ್ಲಿ ಪ್ರದರ್ಶನ ಮಾಡಬಹುದು. ಆದರೆ ಆ ಪಾತ್ರವನ್ನು ಅರ್ಥೈಸಿಕೊಂಡು ಜೀವತುಂಬುವ ಸಾಮಥ್ರ್ಯ ನಮ್ಮಲ್ಲಿರಬೇಕು.ಎಂದು ಮಂಗಳೂರು ವಿಶ್ವವಿದ್ಯಾಲಯದ ಐಕ್ಯೂಎಸಿ ನಿರ್ದೇಶಕ ಮತ್ತು ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಪ್ರೊ. ಮಂಜುನಾಥ್ ಪಟ್ಟಾಭಿ ಹೇಳಿದರು.

ಅವರು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದಲ್ಲಿ ಮಂಗಳೂರು ವಿಶ್ವವಿದ್ಯಾಲಯದಆಶ್ರಯದಲ್ಲಿಆಯೋಜಿಸಲಾದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಕುರಿತಾದಒಂದು ದಿನದಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶನಿವಾರ ಮಾತನಾಡಿದರು. ಈಗಿನ ಆಧುನಿಕಯುಗದಲ್ಲಿ ವಿದ್ಯಾರ್ಥಿಗಳು ಮಾಹಿತಿಯನ್ನು ತಿಳಿದುಕೊಳ್ಳುವುದರಲ್ಲಿ ಬಹಳಷ್ಟು ಮುಂದುವರೆದಿದ್ದಾರೆಆದರೆಅದನ್ನುಜೀವನಕ್ಕೆ ತೊಡಗಿಸಿಕೊಳ್ಳುವ ಅರಿವುಇನ್ನು ತಿಳಿದಿಲ್ಲ. ಶಿಕ್ಷಕರು ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಮೊದಲಿನಿಂದಲೇಕಲ್ಪಿಸುತ್ತ ಬಂದಿದ್ದರುಅದನ್ನು ಉಪಯೋಗಿಸಿಕೊಳ್ಳಬೇಕು ಎಂಬ ಕಟ್ಟುನಿಟ್ಟಿನ ನಿಯಮಇರಲಿಲ್ಲ ಆದರೆ ಈಗಿನ ಹೊಸ ಶಿಕ್ಷಣ ನೀತಿ ಅವಕಾಶಗಳನ್ನು ಕಲ್ಪಿಸುತ್ತವುದರಜೊತೆಗೆ ಅವುಗಳನ್ನು ಸದುಪಯೋಗ ಮಾಡಲೇಬೇಕಾದ ನಿಯಮಗಳನ್ನು ತಂದಿದೆ ಎಂದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಮಂಗಳೂರು ವಿಶ್ವವಿದ್ಯಾಲಯದ ಎನ್ ಇ ಪಿಯ ನೋಡಲ್‍ ಅಧಿಕಾರಿಪ್ರೊ. ರವೀಂದ್ರಾಚಾರಿ ಮಾತನಾಡಿ, ಬದಲಾವಣೆಜಗದ ನಿಯಮ, ಬದಲಾವಣೆ ಬಹಳ ಔಚಿತ್ಯಪೂರ್ಣ ವಾಗಿರಬೇಕು ಹಾಗಿದ್ದರೆ ಮಾತ್ರಅದುಅರ್ಥಪೂರ್ಣವಾಗುವುದು. ಶಿಕ್ಷಣ ಕೇವಲ ಮೂರು ಗಂಟೆಗಳಲ್ಲಿ ಬರೆಯುವಂತಹ ಪರೀಕ್ಷೆಗೆ ಸೀಮಿತವಾಗಿರದೆ ಸಮಾಜದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವ ಮಾದರಿಯುತ್ತ ಶಿಕ್ಷಣ ವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕಿನ ವಿವಿಧ ಪದವಿ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು.

ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಹೆಚ್.ಜಿ. ಶ್ರೀಧರ್ ವಂದಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಭಟ್‍ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

3 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

4 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago