ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯವಾದುದು, ಶಿಕ್ಷಣ ವ್ಯವಸ್ಥೆಯು ಅಂಕಗಳನ್ನು ಗಳಿಸುವುದಕ್ಕೆ ಮಾತ್ರ ಮಹತ್ವ ನೀಡುತ್ತಿರುವ ಈ ಕಾಲಘಟ್ಟದಲ್ಲಿ ಮೌಲ್ಯಾಧಾರಿತ ಹಾಗೂ ಸಂಸ್ಕಾರಭರಿತ ಶಿಕ್ಷಣ ನೀಡುವ ವಿವೇಕಾನಂದ ವಿದ್ಯಾಸಂಸ್ಥೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪುರೋಹಿತ ಕಾರ್ತಿಕ್ ಶಾಸ್ತ್ರಿ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ಗಣ ಹೋಮ ಹಾಗೂ ಸರಸ್ವತಿ ಪೂಜೆ ನೆರವೇರಿತು. ಪುರೋಹಿತರಾದ ಕಾರ್ತಿಕ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಆದಿತ್ಯ ಕೃಷ್ಣ ಹಾಗೂ ರಾಘವೇಂದ್ರ ಅವರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ಸಂಚಾಲಕರಾದ ಕೃಷ್ಣ ಪ್ರಸಾದ್ ನಡ್ಸಾರ್, ಸದಸ್ಯರಾದ ಡಾ. ಮುರಳಿಕೃಷ್ಣ ರೈ, ಡಾ. ಕೃಷ್ಣಪ್ರಸನ್ನ ಕೆ., ಕಾಲೇಜು ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಪ್ರಾಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…