ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯವಾದುದು, ಶಿಕ್ಷಣ ವ್ಯವಸ್ಥೆಯು ಅಂಕಗಳನ್ನು ಗಳಿಸುವುದಕ್ಕೆ ಮಾತ್ರ ಮಹತ್ವ ನೀಡುತ್ತಿರುವ ಈ ಕಾಲಘಟ್ಟದಲ್ಲಿ ಮೌಲ್ಯಾಧಾರಿತ ಹಾಗೂ ಸಂಸ್ಕಾರಭರಿತ ಶಿಕ್ಷಣ ನೀಡುವ ವಿವೇಕಾನಂದ ವಿದ್ಯಾಸಂಸ್ಥೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪುರೋಹಿತ ಕಾರ್ತಿಕ್ ಶಾಸ್ತ್ರಿ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ಗಣ ಹೋಮ ಹಾಗೂ ಸರಸ್ವತಿ ಪೂಜೆ ನೆರವೇರಿತು. ಪುರೋಹಿತರಾದ ಕಾರ್ತಿಕ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಆದಿತ್ಯ ಕೃಷ್ಣ ಹಾಗೂ ರಾಘವೇಂದ್ರ ಅವರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ಸಂಚಾಲಕರಾದ ಕೃಷ್ಣ ಪ್ರಸಾದ್ ನಡ್ಸಾರ್, ಸದಸ್ಯರಾದ ಡಾ. ಮುರಳಿಕೃಷ್ಣ ರೈ, ಡಾ. ಕೃಷ್ಣಪ್ರಸನ್ನ ಕೆ., ಕಾಲೇಜು ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಪ್ರಾಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…