ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022

April 24, 2022
9:26 AM

ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 ರ ನಾಲ್ಕನೇ ದಿನದ ಕಾರ್ಯಕ್ರಮ ನೆರವೇರಿತು. ನಾಲ್ಕನೇ ದಿನದ ಮೊದಲ ಅವಧಿಯನ್ನು ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಎಚ್. ಕೆ. ಪ್ರಕಾಶ್ ನಡೆಸಿಕೊಟ್ಟರು.

Advertisement
Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿಯಲ್ಲಿರುವ ಹಲವು ಜೀವರಾಶಿಗಳು, ಅವುಗಳ ಬದುಕು, ಪ್ರಕೃತಿಗೆ ಆ ಜೀವಿಗಳ ಕೊಡುಗೆ, ಮಾನವ ಹಾಗೂ ಜೀವ ಸಂಕುಲದ ಕೊಂಡಿ ಹೇಗೆ ಇರಬೇಕು, ಪರಿಸರದಲ್ಲಿ ಈ ಜೀವಿಗಳ ಅವಶ್ಯಕತೆ ಎಷ್ಟಿವೆ, ಅವುಗಳ ಬಗ್ಗೆ ನಾವೆಷ್ಟು ಅರಿತುಕೊಂಡಿದ್ದೇವೆ ಇತ್ಯಾದಿ ವಿಷಯಗಳ ಕುರಿತು ಮಾತನಾಡುತ್ತಾ ಈ ಜೀವಸಂಕುಲದ ಕುರಿತು ಸಂಪೂರ್ಣವಾಗಿ ಅರಿಯಬೇಕಾದರೆ ಜೀವಶಾಸ್ತ್ರದ ಅಧ್ಯಯನ ಅವಶ್ಯಕ ಎಂದರು. ಜೀವಶಾಸ್ತ್ರದ ವಿಸ್ಮಯಗಳು, ವಿಷಯದ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.

ಎರಡನೇ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಿತಶಾಸ್ತ್ರದ ಜಟಿಲ ಸಮಸ್ಯೆಗಳನ್ನು ಅಲ್ಪಸಮಯದಲ್ಲಿ ಹೇಗೆ ಪರಿಹರಿಸಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆಗಳ ಮೂಲಕ ಗಣಿತಶಾಸ್ತ್ರದ ಪರಿಣಿತ ಉಪನ್ಯಾಸಕಿ  ಕವಿತಾ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೊನೆಯ ಅವಧಿಯಲ್ಲಿ ಜೀವಶಾಸ್ತ್ರದ ಉಪನ್ಯಾಸಕಿ ಡಾ. ಶ್ರುತಿ ಇವರು ಪ್ರಾಣಿ ಜಗತ್ತಿನ ವೈವಿಧ್ಯತೆ ವಿಷಯದ ಬಗ್ಗೆ ಸಂವಾದ ನಡೆಸಿದರು. ಈ ಶಿಬಿರ 12 ದಿನಗಳ ಕಾಲ ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror