ಸುದ್ದಿಗಳು

ಶಿಕ್ಷಣವು ಬದುಕಿನ ಮೂಲಭೂತ ಪ್ರಶ್ನೆಗಳ ಅನ್ವೇಷಣೆಯ ತಾಣವಾಗಬೇಕು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ 12 ದಿನಗಳ ರಾಜ್ಯಮಟ್ಟದ ಯುರೇಕಾ ವಿಜ್ಞಾನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯಡಾ.ಕೆ.ಎನ್ ಸುಬ್ರಹ್ಮಣ್ಯ ಮಾತನಾಡಿಶಿಬಿರದಲ್ಲಿ ಕಲಿತ ವಿಚಾರಗಳು ವಿದ್ಯಾರ್ಥಿಗಳ ದೈನಂದಿನ ಬದುಕಿನಲ್ಲಿಉಪಯೋಗವಾಗುವಂತಾಗಬೇಕು.ಈ ಮೂಲಕ ಶಿಕ್ಷಣವು ಬದುಕಿನ ಮೂಲಭೂತ ಪ್ರಶ್ನೆಗಳ ಅನ್ವೇಷಣೆಯತಾಣವಾಗಬೇಕು ಎಂದರು.

ಅತಿಥಿಯಾಗಿದ್ದ ವೇಕಾನಂದಇಂಜಿನಿಯರಿಂಗ್‍ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ  ವಿದ್ಯಾರ್ಥಿಗಳಲ್ಲಿ ಚಿಂತನಶೀಲತೆಯನ್ನು ಬೆಳೆಸಿ, ಸೃಜನಶೀಲ ಅಭಿವ್ಯಕ್ತಿ ಮತ್ತುಜ್ಞಾನವನ್ನು ಜಾಗೃತಗೊಳಿಸುವಲ್ಲಿ ಯುರೇಕಾಶಿಬಿರದಿಂದ ಸಾಧ್ಯವಾಗುತ್ತದೆ.ಕ್ರಿಯಾಶೀಲತೆಯು ಬೆಳೆಯುವುದಕ್ಕೆ ಕಾರಣವಾಗುತ್ತದೆ.ಈ ಮೂಲಕ ಬದುಕಿಗೆ ಪೂರಕವಾದ ಶಿಕ್ಷಣ ದೊರೆತು ಮುಂದಿನ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದರು.

ಕಾರ್ಯಾಗಾರದಲ್ಲಿರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಶಿಬಿರದ ಕುರಿತು ಪುತ್ತೂರಿನರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಭೂಮಿಕಾ ಜಿ, ಕೃಷ್ಣಪ್ರಸಾದ್, ಪುಣಚದ ಶ್ರೀ ದೇವಿ ಪ್ರೌಢಶಾಲೆಯ ಈಶ ಕೃಷ್ಣ, ನೆಹರೂನಗರಸುದಾನ ಪ್ರೌಢಶಾಲೆಯಆದಿತ್ಯರಾಮ, ತೆಂಕಿಲ ವಿವೇಕಾನಂದಆಂಗ್ಲ ಮಾಧ್ಯಮ ಪ್ರೌಢಶಾಲೆಯಆತ್ಮೀಯ ಎಂ.ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಹರ್ಷಿತಾ, ಸುಳ್ಯದ ಸೈಂಟ್‍ಜೋಸೆಫ್ ಪ್ರೌಢಶಾಲೆಯ ನಿಶ್ಮಾ , ಪ್ರಗತಿ ಪ್ರೌಢಶಾಲೆಯ ಪ್ರಧಾನ್ ಎಂ. ಎನ್, ವೇಣೂರು ಸರಕಾರಿ ಪ್ರೌಢಶಾಲೆಯ ಸಂಪದ ಕೆ. ಎಸ್‍ತಮ್ಮಅಭಿಪ್ರಾಯವನ್ನುಹಂಚಿಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತುಸ್ಮರಣಿಕೆಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು.

ಯುರೇಕಾಕಾರ್ಯಾಗಾರದ ಮುಖ್ಯ ಸಂಯೋಜಕ ಹರೀಶ ಶಾಸ್ತ್ರೀ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಹನ್ನೆರಡು ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳ ಬಗ್ಗೆ ವರದಿಯನ್ನುಉಪನ್ಯಾಸಕಿ ಪಲ್ಲವಿ ಮಂಡಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಡಾ.ಶ್ರುತಿ ನಿರೂಪಿಸಿದರು. ಉಪನ್ಯಾಸಕಿಚೇತನಾ ಸ್ವಾಗತಿಸಿ ಶರ್ಮಿಳಾ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲೂ ಚೆಸ್‌ ಪ್ರತಿಭೆಗಳಿದ್ದಾರೆ | ಗ್ರಾಮೀಣ ಭಾಗದಲ್ಲೂ ಚೆಸ್‌ ಬೆಳೆಯಬೇಕು |”ಚೆಸ್‌ ಇನ್‌ ಸ್ಕೂಲ್”‌ ಆರಂಭವಾಗಲಿ |

ಪ್ರತೀ ಮಗುವಿಗೂ ಚೆಸ್‌ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಚೆಸ್‌ ತರಬೇತಿ…

22 minutes ago

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

7 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

14 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

15 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

1 day ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

1 day ago