ದಕ್ಷಿಣಕನ್ನಡ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಇದರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ಬಾಲಕರತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿದೆ. ಅದೇ ರೀತಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್ ಪಿ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ,ವಿಘ್ನೇಶ್ ಚಂದ್ರಕಾಂತ್ ಯಾದವ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಲವಿತ್ ಎಂ ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ ಪಿ.ಎನ್, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರಾವ್ಯ ಮತ್ತು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ, ನೇಹಾಲ್ ಎಸ್ ಎಂ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…