ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎಂ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ಸ್ಪರ್ಧೆಯು ಸ್ವರಾಜ್ಯ ಆಂದೋಲನ ಮತ್ತು ರಾಷ್ಟ್ರಭಾವ ಜಾಗರಣ ವಿಷಯದ ಕುರಿತು ನಡೆದಿತ್ತು.
ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸೆ.24 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಈಸ್ಟ್ ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಭಾಂಗಣದಲ್ಲಿ ನಡೆಯಲಿದೆ. ಈಕೆ ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…