Advertisement
ಸುದ್ದಿಗಳು

ಪುತ್ತೂರು | ಡಾ. ನಾ. ಸೋಮೇಶ್ವರ ಜೊತೆ ವಿವೇಕಾನಂದದಲ್ಲಿ ವಿಶೇಷ ಸಂವಾದ

Share

ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತುಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ  ಮಗುವಿಗೆ ಇರುತ್ತದೆ.ವಿದ್ಯಾರ್ಥಿಗಳು ತಮ್ಮಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನ ಚಂದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್‍ ಅಂತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.

ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ಕನಸುಗಳು-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹುಟ್ಟಿನಿಂದಲೇ ನಾವು ಬುದ್ದಿವಂತರು.ಆದರೆ ನಾವು ಬೆಳೆಯುವ ಪರಿಸರದ ಆಧಾರದ ಮೇಲೆ ನಮ್ಮಗುಣ, ನಡತೆ ಮತ್ತು ವರ್ತನೆ  ಬದಲಾವಣೆಯಾಗುತ್ತದೆ. ಜಂಕ್ ಫುಡ್ ಗಳನ್ನು ತ್ಯಜಿಸಿ, ಆರೋಗ್ಯಕ್ಕೆ ಹಿತಕರವಾದ ಆಹಾರವನ್ನು ಸೇವಿಸಬೇಕು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಇನ್ನಿತರ ಚಟುವಟಿಕೆಯನ್ನು ರೂಢಿಸಿಕೊಳ್ಳಬೇಕು. ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು. ವಿದ್ಯಾರ್ಜನೆ ವಿದ್ಯಾರ್ಥಿಯ ಬದುಕಿನ ಏಕೈಕ ನಿರ್ಧಾರವಾಗಬೇಕೆಂದು ಎಂದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‍ ರೈ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಭಾಗ್ಯಶ್ರೀ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

13 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

17 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago