Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ | ಜಗತ್ತಿಗೆ ಅಸಂಖ್ಯಾತ ಸಂಶೋಧಕರನ್ನುಕೊಟ್ಟ ದೇಶ ಭಾರತ | ಡಾ. ಪ್ರಭಾಕರ್ ಭಟ್‍ ಕಲ್ಲಡ್ಕ

Share

ಮಾನವ ಕುತೂಹಲ ಜೀವಿ. ಹುಟ್ಟುತ್ತಲೇ ಸಂಶೋಧಕರಾಗುತ್ತಾರೆ. ಸಣ್ಣ ಸಣ್ಣ ವಿಷಯಗಳನ್ನು ಹಾಗೆ ಸುಮ್ಮನೆ ಬಿಡದೆ ಅದರ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡುತ್ತಾರೆ.ನಮ್ಮ ಹಿರಿಯರಲ್ಲಿ ವೈಜ್ಞಾನಿಕ ಮನೋಭಾವ ಆಗಲೇ ಇತ್ತು.ಅದು ಇಂದು ಸಂಶೋಧನಾ ರೂಪದಲ್ಲಿ ಜಗತ್ತಿನ ವೈಜ್ಞಾನಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ.ಭಾರತೀಯ ವಿಜ್ಞಾನಿಗಳ ವೈಜ್ಞಾನಿಕ ಸಂಶೋಧನೆ ಅದು ಜಗತ್ತಿನ ಹಿತಕ್ಕಾಗಿ  ಆಗಿರುತ್ತದೆ.ಅದರಿಂದ ವಿಜ್ಞಾನಿಗಳ ಮನಸ್ಸಿಗೆ ಸಂತೃಪ್ತತೆ ಸಿಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷಡಾ.ಪ್ರಭಾಕರ ಭಟ್‍ ಕಲ್ಲಡ್ಕ ಹೇಳಿದರು.

ಅವರು ಪ್ಲಾಸ್ಮಾ ಸಂಶೋಧನಾಕೇಂದ್ರ, ಅಹಮದಾಬಾದ್ ಮತ್ತು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ) ಪುತ್ತೂರು, ಐಕ್ಯುಎಸಿ ಮತ್ತು ವಿಜ್ಞಾನ ಸಂಘದ ಸಹಯೋಗದಲ್ಲಿ ನಡೆದ ಪ್ಲಾಸ್ಮಾ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿ.ಎಮ್.ಆರ್. ಟಿ ವೀಕ್ಷಣಾಲಯ, ಟಾಟಾ ಮೂಲಭೂತ ಸಂಶೋಧನಾ ಕೇಂದ್ರ ಪೂನಾ ಇದರ ಡೀನ್ ಪ್ರೊ.ಈಶ್ವರಚಂದ್ರ ಸಿ.ಎಚ್ ಪ್ಲಾಸ್ಮಾ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ತಂತ್ರಜ್ಞಾನ ಬೆಳವಣಿಗೆಗೊಳ್ಳುತ್ತಿರುವ ಈ ಸಂದರ್ಭದಲ್ಲಿ ನಮಗೆ ಸಂಶೋಧನೆ ನಡೆಸಲು ಹಲವಾರು ಅವಕಾಶಗಳಿವೆ. ನಾವು ಯಾವುದೇ ಸಂಶೋಧನೆಯನ್ನು ಪ್ರಾರಂಭಿಸಬೇಕಾದರೆ ಮೊದಲು ಅದರ ಮೂಲದಿಂದ ಆರಂಭಿಸಬೇಕು ಎಂದರು.

ಸಮುದಾಯ ಸಂಪರ್ಕ ವಿಭಾಗ, ಐ.ಪಿ.ಆರ್ ಅಹಮದಾಬಾದ್‍ ಇದರ ಮುಖ್ಯಸ್ಥ ಡಾ.ಎ.ವಿ. ರವಿಕುಮಾರ್ ದಿಕ್ಸೂಚಿ ಭಾಷಣ ಮಾಡಿದರು.

ಕುಮಾರಸ್ವಾಮಿ ಪದವಿಪೂರ್ವಕಾಲೇಜು ಸುಬ್ರಹ್ಮಣ್ಯಇದರ ಪ್ರಾಂಶುಪಾಲ ಮತ್ತುಐ.ಐ.ಎಸ್.ಸಿ ನ ಹಿರಿಯ ವಿದ್ಯಾರ್ಥಿ ಮತ್ತು ಬ್ರಿಟನ್ ನಾಟಿಂಗ್ ಹ್ಯಾಮ್ ವಿಶ್ವವಿದ್ಯಾನಿಲಯದ ಸಂಶೋಧಕ ಡಾ.ಸಂಕೀರ್ತನ್ ಹೆಬ್ಬಾರ್ ಪ್ಲಾಸ್ಮಾ ವಸ್ತುಪ್ರದರ್ಶನವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಮುದಾಯ ಸಂಪರ್ಕ ವಿಭಾಗ, ಐ.ಪಿ.ಆರ್‍ಅಹಮದಾಬಾದ್‍ಇದರ ಮುಖ್ಯಸ್ಥಡಾ. ಎ.ವಿರವಿಕುಮಾರ್  ಇವರನ್ನು ಸನ್ಮಾನಿಸಲಾಯಿತು. ಉದ್ಘಾಟನಾಕಾರ್ಯಕ್ರಮದ ನಂತರ ವಿಚಾರ ಸಂಕಿರಣ ನಡೆಯಿತು. ಮೂರು ದಿನ ನಡೆಯಲಿರುವ ಪ್ಲಾಸ್ಮಾ ಪ್ರದರ್ಶನಕ್ಕೆ 2000 ಹೆಚ್ಚು ವಿದ್ಯಾರ್ಥಿಗಳು ಆಗಮಿಸಲಿದ್ದಾರೆ.

ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಮತ್ತು ಹಿರಿಯ ವಿಜ್ಞಾನಿ  ಶಂಕರ ಜೋಯಿಸ, ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀನಿವಾಸ ಸಾಮಂತ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ, ಕಾಲೇಜಿನ ವಿಶೇಷಅಧಿಕಾರಿ ಮತ್ತು ಪ್ರಭಾರ ಪ್ರಾಂಶುಪಾಲ ಡಾ.ಶ್ರೀಧರ್ ನ್ಯಾಕ್ ಬಿ, ಐಕ್ಯುಎಸಿ ಘಟಕದ ಸಂಯೋಜಕ ಮತ್ತು ಭೌತಶಾಸ್ತ್ರ ವಿಭಾಗದಉಪನ್ಯಾಸಕ ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್‍ ಡಾ. ವಿಜಯ ಸರಸ್ವತಿ ಸ್ವಾಗತಿಸಿ, ಕಲಾ ವಿಭಾಗದ ಡೀನ್ ಮತ್ತು ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ.ಸಿ ವಂದಿಸಿ, ಸ್ನಾತಕೋತ್ತರ ವಿಭಾಗದ ಗಣಿತಶಾಸ್ತ್ರ ಉಪನ್ಯಾಸಕಿ ನಮೃತಾ ಕೆ.ಎನ್ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 hour ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

10 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

16 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

16 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago