ಸುದ್ದಿಗಳು

ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ವಿಭಾಗಕ್ಕೆ ದಶಮಾನೋತ್ಸವ | ಪ್ರಬುದ್ಧ ಯೋಚನೆಗಳು ವಿದ್ಯಾರ್ಥಿಗಳಲ್ಲಿರಬೇಕು : ಎಸ್. ಆರ್. ಸತೀಶ್ಚಂದ್ರ

Share

ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನದ ಆಗರವನ್ನು ಹೆಚ್ಚಿಸುವ ಕಾರ್ಯವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪುಸ್ತಕಗಳನ್ನು ಓದುವುದರ ಜೊತೆಗೆ ವಿಮರ್ಶಿಸುವುದು ಬಹುಮುಖ್ಯ, ಪ್ರಬುದ್ಧ ಯೋಚನೆಗಳು ವಿದ್ಯಾರ್ಥಿಗಳಲ್ಲಿರಬೇಕು ಎಂದು ಕ್ಯಾಂಪ್ಕೋ ನಿರ್ದೇಶಕ ಮತ್ತು ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಇದರ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು.

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ವರ್ಷದ ಲೋಗೋ ಅನಾವರಣಗೊಳಿಸಿ ಮಾತನಾಡಿದ ಅವರು, ನಮ್ಮ ದೇಶ ಸಶಕ್ತವಾಗಿದೆ. ಇದಕ್ಕೆ ವಿವೇಕಾನಂದರ ಕೊಡುಗೆ ಅಪಾರವಾದುದು. ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಷ್ಟೇ ಅಲ್ಲದೆ ವಿಶ್ವ ಕಂಡ ಶ್ರೇಷ್ಠ ಸನ್ಯಾಸಿಯ ಆದರ್ಶ, ನಿಷ್ಠೆ ಹಾಗೂ ದೇಶ ಪ್ರೇಮ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅಳವಡಿಸಿಕೊಂಡಿರುವುದು ಬಹಳ ಹೆಮ್ಮೆಯ ವಿಚಾರ ಎಂದು ಎಸ್. ಆರ್. ಸತೀಶ್ಚಂದ್ರ ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ವಿಶ್ರಾಂತ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರು ಪ್ರೊ.ಸಂಪತ್ತಿಲ ಈಶ್ವರ ಭಟ್, ನಮ್ಮ ನಡುವೆ ಇರುವ ವಿಪುಲವಾದ ಅವಕಾಶಗಳನ್ನು ಸದುಪಯೋಗಪಡಿಸಲು ವಿದ್ಯಾರ್ಥಿಗಳು ತಮ್ಮಲ್ಲಿ ಕ್ರಿಯಾಶೀಲತೆ ಮತ್ತು ಸೃಜನಶೀಲತೆಯನ್ನು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ವಿದ್ಯಾಸಂಸ್ಥೆ ಅತ್ಯಂತ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸಂಯಮ, ಶಿಸ್ತು ಹಾಗೂ ಆಚಾರ – ವಿಚಾರಗಳನ್ನು ವಿದ್ಯಾರ್ಥಿ ನೆಲೆಯಲ್ಲಿಯೇ ನೀಡಿ ಒಬ್ಬ ಉತ್ತಮ ಪ್ರಜೆಯನ್ನಾಗಿ ನಿರ್ಮಾಣ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಸ್ನಾತಕೋತ್ತರ ಪದವಿಯ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿಯಾಗಿದ್ದು, ಈ ವೇಳೆಯಲ್ಲಿ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಹಾಗೆಯೇ ಪ್ರತಿಯೊಬ್ಬ ಸ್ನಾತಕೋತ್ತರ ವಿದ್ಯಾರ್ಥಿಯಲ್ಲಿಯೂ ಗುರಿ ಇರಬೇಕು, ಅದನ್ನು ಸಾಧಿಸುವ ಛಲದ ಜೊತೆಗೆ ತುಡಿತವೂ ಬೆಳೆಸಿಕೊಂಡಲ್ಲಿ ಮಾತ್ರ ಜೀವನದಲ್ಲಿ ಗೆಲ್ಲುವುದಕ್ಕೆ ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಹಿರಿಯರ ವಿಚಾರಧಾರೆಗಳು ನಮಗೆ ಪ್ರೇರಣೆಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ ಎನ್, ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ. ಎಚ್. ಜಿ. ಶ್ರೀಧರ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

6 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

6 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

21 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

21 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

21 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

21 hours ago