Advertisement
ಸುದ್ದಿಗಳು

ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022

Share

ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 ರ ನಾಲ್ಕನೇ ದಿನದ ಕಾರ್ಯಕ್ರಮ ನೆರವೇರಿತು. ನಾಲ್ಕನೇ ದಿನದ ಮೊದಲ ಅವಧಿಯನ್ನು ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಎಚ್. ಕೆ. ಪ್ರಕಾಶ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿಯಲ್ಲಿರುವ ಹಲವು ಜೀವರಾಶಿಗಳು, ಅವುಗಳ ಬದುಕು, ಪ್ರಕೃತಿಗೆ ಆ ಜೀವಿಗಳ ಕೊಡುಗೆ, ಮಾನವ ಹಾಗೂ ಜೀವ ಸಂಕುಲದ ಕೊಂಡಿ ಹೇಗೆ ಇರಬೇಕು, ಪರಿಸರದಲ್ಲಿ ಈ ಜೀವಿಗಳ ಅವಶ್ಯಕತೆ ಎಷ್ಟಿವೆ, ಅವುಗಳ ಬಗ್ಗೆ ನಾವೆಷ್ಟು ಅರಿತುಕೊಂಡಿದ್ದೇವೆ ಇತ್ಯಾದಿ ವಿಷಯಗಳ ಕುರಿತು ಮಾತನಾಡುತ್ತಾ ಈ ಜೀವಸಂಕುಲದ ಕುರಿತು ಸಂಪೂರ್ಣವಾಗಿ ಅರಿಯಬೇಕಾದರೆ ಜೀವಶಾಸ್ತ್ರದ ಅಧ್ಯಯನ ಅವಶ್ಯಕ ಎಂದರು. ಜೀವಶಾಸ್ತ್ರದ ವಿಸ್ಮಯಗಳು, ವಿಷಯದ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.

ಎರಡನೇ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಿತಶಾಸ್ತ್ರದ ಜಟಿಲ ಸಮಸ್ಯೆಗಳನ್ನು ಅಲ್ಪಸಮಯದಲ್ಲಿ ಹೇಗೆ ಪರಿಹರಿಸಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆಗಳ ಮೂಲಕ ಗಣಿತಶಾಸ್ತ್ರದ ಪರಿಣಿತ ಉಪನ್ಯಾಸಕಿ  ಕವಿತಾ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೊನೆಯ ಅವಧಿಯಲ್ಲಿ ಜೀವಶಾಸ್ತ್ರದ ಉಪನ್ಯಾಸಕಿ ಡಾ. ಶ್ರುತಿ ಇವರು ಪ್ರಾಣಿ ಜಗತ್ತಿನ ವೈವಿಧ್ಯತೆ ವಿಷಯದ ಬಗ್ಗೆ ಸಂವಾದ ನಡೆಸಿದರು. ಈ ಶಿಬಿರ 12 ದಿನಗಳ ಕಾಲ ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 hour ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

1 hour ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

9 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

9 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago