Advertisement
ಸುದ್ದಿಗಳು

ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022

Share

ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 ರ ನಾಲ್ಕನೇ ದಿನದ ಕಾರ್ಯಕ್ರಮ ನೆರವೇರಿತು. ನಾಲ್ಕನೇ ದಿನದ ಮೊದಲ ಅವಧಿಯನ್ನು ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಎಚ್. ಕೆ. ಪ್ರಕಾಶ್ ನಡೆಸಿಕೊಟ್ಟರು.

Advertisement
Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿಯಲ್ಲಿರುವ ಹಲವು ಜೀವರಾಶಿಗಳು, ಅವುಗಳ ಬದುಕು, ಪ್ರಕೃತಿಗೆ ಆ ಜೀವಿಗಳ ಕೊಡುಗೆ, ಮಾನವ ಹಾಗೂ ಜೀವ ಸಂಕುಲದ ಕೊಂಡಿ ಹೇಗೆ ಇರಬೇಕು, ಪರಿಸರದಲ್ಲಿ ಈ ಜೀವಿಗಳ ಅವಶ್ಯಕತೆ ಎಷ್ಟಿವೆ, ಅವುಗಳ ಬಗ್ಗೆ ನಾವೆಷ್ಟು ಅರಿತುಕೊಂಡಿದ್ದೇವೆ ಇತ್ಯಾದಿ ವಿಷಯಗಳ ಕುರಿತು ಮಾತನಾಡುತ್ತಾ ಈ ಜೀವಸಂಕುಲದ ಕುರಿತು ಸಂಪೂರ್ಣವಾಗಿ ಅರಿಯಬೇಕಾದರೆ ಜೀವಶಾಸ್ತ್ರದ ಅಧ್ಯಯನ ಅವಶ್ಯಕ ಎಂದರು. ಜೀವಶಾಸ್ತ್ರದ ವಿಸ್ಮಯಗಳು, ವಿಷಯದ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.

Advertisement

ಎರಡನೇ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಿತಶಾಸ್ತ್ರದ ಜಟಿಲ ಸಮಸ್ಯೆಗಳನ್ನು ಅಲ್ಪಸಮಯದಲ್ಲಿ ಹೇಗೆ ಪರಿಹರಿಸಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆಗಳ ಮೂಲಕ ಗಣಿತಶಾಸ್ತ್ರದ ಪರಿಣಿತ ಉಪನ್ಯಾಸಕಿ  ಕವಿತಾ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೊನೆಯ ಅವಧಿಯಲ್ಲಿ ಜೀವಶಾಸ್ತ್ರದ ಉಪನ್ಯಾಸಕಿ ಡಾ. ಶ್ರುತಿ ಇವರು ಪ್ರಾಣಿ ಜಗತ್ತಿನ ವೈವಿಧ್ಯತೆ ವಿಷಯದ ಬಗ್ಗೆ ಸಂವಾದ ನಡೆಸಿದರು. ಈ ಶಿಬಿರ 12 ದಿನಗಳ ಕಾಲ ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

14 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

15 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago