Advertisement
ಸುದ್ದಿಗಳು

ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು

Share

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು ನೀಡಬೇಕು ಎಂದು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ದಿನೇಶ್ ಶೆಣೈ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-22 ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ, ವಾಣಿಜ್ಯ, ಸಾಹಿತ್ಯ, ಕ್ರೀಡಾಸಂಘ ಮತ್ತು ಇಕೋ ಕ್ಲಬ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಮ್ಮತದಿಂದ ಕಾರ್ಯ ನಿರ್ವಹಿಸುವ ಮನೋಭಾವವನ್ನು ಬೆಳೆಸಿಕೊಂಡು ಪರಂಪರೆ, ಪರಿಸರ ಮತ್ತು ಕಠಿಣ ಪರಿಶ್ರಮದ ನೆಲೆಗಟ್ಟಿನಲ್ಲಿ ಮೌಲ್ಯಾಧರಿತ ಜೀವನವನ್ನು ರೂಢಿಸಿಕೊಂಡರೆ ಬದುಕು ಉತ್ತಮವಾಗುತ್ತದೆ. ಸೋಲು ಎದುರಾದಾಗ ಧೈರ್ಯದಿಂದ ಎದುರಿಸಿ ವಾಸ್ತವಕ್ಕೆ ಮುಖಮಾಡಿ ನಿಲ್ಲಬೇಕು. ಮಹತ್ವಾಕಾಂಕ್ಷೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿಮುಂಗ್ಲಿಮನೆ ಮಾತನಾಡಿ ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬೇಕು. ವಿದ್ಯಾರ್ಥಿಗಳು ಬದುಕನ್ನು ಗೌರವಿಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ದೊರೆತ ಅವಕಾಶಗಳನ್ನು ಉಪಯೋಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ಪಡೆದುಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುನೀತ್ ,ಕಾರ್ಯದರ್ಶಿ ಕುಲದೀಪ್‌ಸಿಂಗ್, ಜತೆ ಕಾರ್ಯದರ್ಶಿ ಧರಿತ್ರಿ , ಕ್ರೀಡಾ ಸಂಘದ ಕಾರ್ಯದರ್ಶಿ ಗುರುಪ್ರಸಾದ್ , ಜತೆಕಾರ್ಯದರ್ಶಿ ದೀಪಾಲಿ ಇವರಿಗೆ ಪ್ರಮಾಣ ವಚನವನ್ನು ಬೋಧಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಉಪನ್ಯಾಸಕ ದೇವಿಪ್ರಸಾದ್ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸ್ಥೂಲವಾಗಿ ವಿವರಿಸಿದರು. ಉಪನ್ಯಾಸಕಿ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಮಾಧವಿ ಪಟೇಲ್ ಸ್ವಾಗತಿಸಿ ಯಶವಂತಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

3 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

3 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

10 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

11 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago