ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

November 26, 2022
7:47 PM

ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror