ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…