ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…