Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Share

ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

20 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

23 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

23 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago