ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜು | ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಒಪ್ಪಂದ |

September 26, 2022
11:47 AM

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವುಗಳ ನಡುವೆ ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವವನ್ನು ನೀಡುವ ತಿಳುವಳಿಕೆಯ ಒಪ್ಪಂದಕ್ಕೆ (MOU) ಸಹಿ ಹಾಕಲಾಯಿತು.

Advertisement
ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಮಾಡಬಯಸುವ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡುವುದು, ವಿವಿಧ ದೇಶಗಳ ವಿಶ್ವವಿದ್ಯಾನಿಲಯಗಳ ಮಾಹಿತಿ ನೀಡುವುದು, ಅಲ್ಲಿ ಪ್ರವೇಶ ಪಡೆಯುವುದಕ್ಕೆ ಬೇಕಾದ ತರಬೇತಿಯನ್ನು ನೀಡುವುದು ಮುಂತಾದ ವಿಷಯಗಳಲ್ಲಿ ಸಹಭಾಗಿತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲದೆ ಅಂತಾರಾಷ್ಟ್ರೀಯ ಸಮ್ಮೇಳನಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಒದಗಿಸುವುದು, ಉಪನ್ಯಾಸಕರಿಗೆ ತರಬೇತಿಗಳನ್ನು ನೀಡುವುದೂ ಇದರಲ್ಲಿ ಸೇರಿದೆ.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಎಂಬಿಎ ವಿಭಾಗದ ಪ್ರೊ.ರೋಬಿನ್ ಶಿಂಧೆ, ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ವಿಭಾಗ ಪ್ರಬಂಧಕ ಅಜಯ್ ಚಂದ್ರನ್.ಬಿ, ಸಹಾಯಕ ವ್ಯವಸ್ಥಾಪಕ ಶಿಜೋ ಮೊನ್ ಯೇಸುದಾಸ್ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಸಂಪನ್ಮೂಲ ವ್ಯಕ್ತಿಗಳು ಉನ್ನತ ಶಿಕ್ಷಣ ಮತ್ತು ಔದ್ಯೋಗಿಕ ಅವಕಾಶಗಳು ಎನ್ನುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ
ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | ದೆಹಲಿಗೆ ಎಲ್ಲೋ ಅಲರ್ಟ್‌ – ಮಳೆ ಎಲ್ಲೆಲ್ಲಿ…?
July 9, 2025
7:06 AM
by: ದ ರೂರಲ್ ಮಿರರ್.ಕಾಂ
ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ
July 9, 2025
6:57 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group