Advertisement
ಅನುಕ್ರಮ

ಗಾಂಧಿಯ ಉಪವಾಸದಿಂದ ಗ್ಯಾಸ್ಟ್ರಿಕ್‌ ಬಂತೆ ಹೊರತು ಸ್ವಾತಂತ್ರ್ಯ ಬರಲಿಲ್ಲ…..! | ಮನಸ್ಸಿನ ಕನ್ನಡಿಯಲ್ಲಿ ಗಾಂಧಿಯವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತಾರೆ ವಿವೇಕಾನಂದ ಎಚ್‌ ಕೆ |

Share

“ಗಾಂಧಿಯ ಉಪವಾಸದಿಂದ ಗ್ಯಾಸ್ಟ್ರಿಕ್‌ ಬಂತೆ ಹೊರತು ಸ್ವಾತಂತ್ರ್ಯ ಬರಲಿಲ್ಲ ….!”,   ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಒಂದು ಪೋಸ್ಟ್ ನೋಡಿದೆ‌. ಅದನ್ನು ಸಾಕಷ್ಟು ಜನ ಬೆಂಬಲಿಸಿದರು ಸಹ……. 

ಎಲ್ಲಿಗೆ ಇಳಿಯಿತು ನೋಡಿ ಗಾಂಧಿಯ ಅವಹೇಳನ…..

ಬೇಡ ಗಾಂಧಿ ಬೇಡ, ನೀನಿನ್ನು ಹೊರಡು ಗಾಂಧಿ ಬುದ್ದನಂತೆ ಬೇರೆ ದೇಶಗಳಲ್ಲಿ ಸಂಚರಿಸುತ್ತಾ, ಜಪಾನ್ ವಿಯೆಟ್ನಾಂ ಕೊರಿಯಾ ಭೂತಾನ್ ದಾಟಿ ಮತ್ತೆ ದಕ್ಷಿಣ ಆಫ್ರಿಕಾದತ್ತಾ…… ನಿನಗಿನ್ನು ಇಲ್ಲಿ ಜಾಗವಿಲ್ಲ. ಭಾರತ ಬದಲಾಗುತ್ತಿದೆ……

ದೇಶ ಹಾಳಾದರೂ ಬಲಪಂಥ ಉಳಿಯಬೇಕು…
ಜನ ಹಾಳಾದರು ಎಡಪಂಥ ಬೆಳೆಯಬೇಕು…
ಮಾನವೀಯ ಪಂಥ ಯಾರಿಗೂ ಬೇಕಾಗಿಲ್ಲ….

ಅವರನ್ನು ಇವರು ಇವರನ್ನು ಅವರು ಒಬ್ಬರಿಗೊಬ್ಬರು ದ್ವೇಷಿಸುತ್ತಾ ನಾವು ಜೀವಪರ ನಾವು ದೇಶಪರ ಎಂದು ಕಚ್ಚಾಡುತ್ತಾ ಜನ ಮತ್ತು ದೇಶ ಎರಡನ್ನೂ ವಿನಾಶದ ಅಂಚಿನಲ್ಲಿ ನಿಲ್ಲಿಸಿದ್ದಾರೆ.

ಗಾಂಧಿ ನೀನು ಎಡಪಂಥವೋ ಬಲಪಂಥವೋ……

ಗಾಂಧಿ ನಿನ್ನ ನೈತಿಕತೆಯನ್ನು ಹಣ ಅಧಿಕಾರ ಪ್ರಚಾರ ನುಂಗಿ ಹಾಕಿದೆ. ಜನರ ಬುದ್ಧಿಶಕ್ತಿಗೆ ಮಂಕು ಕವಿದಿದೆ. ಯೋಚನಾ ಶಕ್ತಿ ಸಂಕುಚಿತಗೊಂಡಿದೆ. ಜಾತಿ ಧರ್ಮ ಪಂಥಗಳ ಅಮಲು ಆವರಿಸಿಕೊಂಡಿದೆ.

75 ವರ್ಷಗಳ ನಂತರ ಇದು ಸಹಜವೇ ಇರಬೇಕು…..

ಯಾರಿಗೆ ಬೇಕಿದೆ ಗಾಂಧಿ ನಿನ್ನ ನೈತಿಕತೆ.
ನೋಡು ಒಮ್ಮೆ ಈಗ ಬರುತ್ತಿರುವ ಧಾರವಾಹಿಗಳನ್ನು ಅವರಿಗೆ ಅನೈತಿಕತೆಯೇ ನೈತಿಕವಾಗಿದೆ,
ನೋಡು ಒಮ್ಮೆ ‌ಶಾಲೆ ಆಸ್ಪತ್ರೆಗಳನ್ನು ಅವರಿಗೆ ಹಣವೇ ನೈತಿಕವಾಗಿದೆ,
ನೋಡು ಒಮ್ಮೆ ‌ಸಾಹಿತಿಗಳು ಸಮಾಜ ಸೇವಕರನ್ನು ಅವರಿಗೆ ಪ್ರಶಸ್ತಿಗಳೇ ನೈತಿಕವಾಗಿದೆ,
ನೋಡು ಒಮ್ಮೆ ರಾಜಕಾರಣಿ ಅಧಿಕಾರಿಗಳನ್ನು ಅವರಿಗೆ ಲಂಚವೇ ನೈತಿಕವಾಗಿದೆ.
ನೋಡು ಒಮ್ಮೆ ‌ಆಧ್ಯಾತ್ಮಿಕ ಗುರುಗಳನ್ನು ಅವರಿಗೆ, ಆಡಂಬರದ ಪ್ರದರ್ಶನವೇ ನೈತಿಕವಾಗಿದೆ.
ನೋಡು ಒಮ್ಮೆ ‌ನಮ್ಮ ಯುವಕರನ್ನು ಅವರಿಗೆ ಮೋಜು ಮಸ್ತಿಯೇ ನೈತಿಕವಾಗಿದೆ.

ಬಹುತೇಕ ಎಲ್ಲರೂ ಹೇಳುತ್ತಾರೆ, ಈಗಿನ ಪರಿಸ್ಥಿತಿಯಲ್ಲಿ ಎಷ್ಟೇ ಗಾಂಧಿ ಬಂದರು ಪರಿಸ್ಥಿತಿ ಬದಲಾಗುವುದಿಲ್ಲ ಎಂದು. ಇಷ್ಟೇ ಗಾಂಧಿ ನಿನ್ನೆ ನೈತಿಕತೆ ನಿನ್ನೆ ಪ್ರಾಮಾಣಿಕತೆ ನಿನ್ನ ದೂರದೃಷ್ಟಿ ಈ ಜನರಿಗೆ ಅರ್ಥವಾಗಿರುವುದು.

ಎಲ್ಲಿದ್ದಾರೆ ಈಗ ಆ ಸತ್ಯ ನಿಷ್ಠ ವ್ಯಕ್ತಿ,
ಎಲ್ಲಿದ್ದಾರೆ ಈಗ ಆ ಪಾರದರ್ಶಕ ವ್ಯಕ್ತಿ,
ಎಲ್ಲಿದ್ದಾರೆ ಈಗ ನಿಷ್ಕಲ್ಮಶ ಹೃದಯದ ವ್ಯಕ್ತಿ,
ಎಲ್ಲಿದ್ದಾರೆ ಈಗ ಆ ದೂರದೃಷ್ಟಿಯ ವ್ಯಕ್ತಿ,
ನನ್ನ ಬದುಕೇ ನನ್ನ ಸಂದೇಶ ಎಂದು ಸಾರುವ ಧೈರ್ಯ ಈಗ ಯಾರಿಗಿದೆ….

ಹೊರಟು ಹೋಗು ಗಾಂಧಿ ಈ ದೇಶ ಬಿಟ್ಟು. ಈ ದೇಶದಲ್ಲಿ ಸದ್ಯಕ್ಕೆ ನೀನಿರಲು ಅರ್ಹನಲ್ಲ.

ಸರಳತೆಯ ವ್ಯಾಖ್ಯಾನವೇ ಬದಲಾಗಿದೆ,
ಸತ್ಯದ ವ್ಯಾಖ್ಯಾನವೇ ಬದಲಾಗಿದೆ,
ಅಹಿಂಸೆಯ ವ್ಯಾಖ್ಯಾನವೇ ಬದಲಾಗಿದೆ,
ಹೋರಾಟ ಉಪವಾಸ ಚಳವಳಿಗಳ ವ್ಯಾಖ್ಯಾನವೇ ಬದಲಾಗಿದೆ…….

ಎಲ್ಲವೂ ಹಣ ಕೇಂದ್ರಿತ,
ಎಲ್ಲವೂ ಅಧಿಕಾರ ಕೇಂದ್ರಿತ,
ಎಲ್ಲವೂ ಪ್ರಚಾರ ಕೇಂದ್ರಿತ,
ಎಲ್ಲವೂ ಅಹಂಕಾರ ಕೇಂದ್ರಿತ…..

ಇರಬಹುದು ಗಾಂಧಿ ನೀನು ಸಹ ಪರಿಪೂರ್ಣ ಅಲ್ಲ,
ಒಂದಷ್ಟು ಗೊಂದಲ ಮತ್ತೊಂದಿಷ್ಟು ತಪ್ಪು ನಿರ್ಧಾರಗಳು ಆಗಿರಬಹುದು. ಅದು ಮಾನವ ಸಹಜ ಗುಣ.
ಆದರೆ ನಿನ್ನ ಪಾರದರ್ಶಕತೆ – ನಿನ್ನ ನೈತಿಕತೆಗೆ ನೀನೇ ಸಾಟಿ……

ಏನೇ ಆಗಲಿ ಮೋಹನ್ ದಾಸ್ ಕರಮಚಂದ್ ಗಾಂಧಿಯನ್ನು ಹಿನ್ನೆಲೆಗೆ ಸರಿಸಿದ ದೇಶ ಮೇಲ್ನೋಟಕ್ಕೆ ಅಭಿವೃದ್ಧಿ ಹೊಂದುತ್ತಿರುವಂತೆ ಕಂಡರೂ ಒಳಗೊಳಗೆ ತನಗರಿವಿಲ್ಲದಂತೆ ಕುಸಿಯುತ್ತಿರುತ್ತದೆ…….

ಒಂದು ದೇಶದ ನಿಜವಾದ ಆತ್ಮಶಕ್ತಿಯನ್ನೇ ಮರೆಮಾಚಿ
ಮತ್ತೇನೋ ಸ್ವಾರ್ಥದ ಪರಿಧಿಯೊಳಗೆ ದೇಶ ಕಟ್ಟುವ ಕನಸನ್ನು ಜನರಲ್ಲಿ ಬಿತ್ತಿ ದೇಶವನ್ನು ಆಂತರ್ಯದಲ್ಲಿ ಕುಸಿಯುವಂತೆ ಮಾಡುತ್ತಿರುವ ಶಕ್ತಿಗಳ ಬಗ್ಗೆ ಎಚ್ಚರಿಸುತ್ತಾ……….

ನಾಳಿನ ಮಹಾತ್ಮ ಗಾಂಧಿಯವರ ಹುಟ್ಟುಹಬ್ಬಕ್ಕೆ ಶುಭಾಶಯಗಳು

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

7 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

14 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

14 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

14 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago