Advertisement
ಅನುಕ್ರಮ

ಗಾಂಧಿಯ ಉಪವಾಸದಿಂದ ಗ್ಯಾಸ್ಟ್ರಿಕ್‌ ಬಂತೆ ಹೊರತು ಸ್ವಾತಂತ್ರ್ಯ ಬರಲಿಲ್ಲ…..! | ಮನಸ್ಸಿನ ಕನ್ನಡಿಯಲ್ಲಿ ಗಾಂಧಿಯವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತಾರೆ ವಿವೇಕಾನಂದ ಎಚ್‌ ಕೆ |

Share

“ಗಾಂಧಿಯ ಉಪವಾಸದಿಂದ ಗ್ಯಾಸ್ಟ್ರಿಕ್‌ ಬಂತೆ ಹೊರತು ಸ್ವಾತಂತ್ರ್ಯ ಬರಲಿಲ್ಲ ….!”,   ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಒಂದು ಪೋಸ್ಟ್ ನೋಡಿದೆ‌. ಅದನ್ನು ಸಾಕಷ್ಟು ಜನ ಬೆಂಬಲಿಸಿದರು ಸಹ……. 

ಎಲ್ಲಿಗೆ ಇಳಿಯಿತು ನೋಡಿ ಗಾಂಧಿಯ ಅವಹೇಳನ…..

Advertisement

ಬೇಡ ಗಾಂಧಿ ಬೇಡ, ನೀನಿನ್ನು ಹೊರಡು ಗಾಂಧಿ ಬುದ್ದನಂತೆ ಬೇರೆ ದೇಶಗಳಲ್ಲಿ ಸಂಚರಿಸುತ್ತಾ, ಜಪಾನ್ ವಿಯೆಟ್ನಾಂ ಕೊರಿಯಾ ಭೂತಾನ್ ದಾಟಿ ಮತ್ತೆ ದಕ್ಷಿಣ ಆಫ್ರಿಕಾದತ್ತಾ…… ನಿನಗಿನ್ನು ಇಲ್ಲಿ ಜಾಗವಿಲ್ಲ. ಭಾರತ ಬದಲಾಗುತ್ತಿದೆ……

ದೇಶ ಹಾಳಾದರೂ ಬಲಪಂಥ ಉಳಿಯಬೇಕು…
ಜನ ಹಾಳಾದರು ಎಡಪಂಥ ಬೆಳೆಯಬೇಕು…
ಮಾನವೀಯ ಪಂಥ ಯಾರಿಗೂ ಬೇಕಾಗಿಲ್ಲ….

Advertisement

ಅವರನ್ನು ಇವರು ಇವರನ್ನು ಅವರು ಒಬ್ಬರಿಗೊಬ್ಬರು ದ್ವೇಷಿಸುತ್ತಾ ನಾವು ಜೀವಪರ ನಾವು ದೇಶಪರ ಎಂದು ಕಚ್ಚಾಡುತ್ತಾ ಜನ ಮತ್ತು ದೇಶ ಎರಡನ್ನೂ ವಿನಾಶದ ಅಂಚಿನಲ್ಲಿ ನಿಲ್ಲಿಸಿದ್ದಾರೆ.

ಗಾಂಧಿ ನೀನು ಎಡಪಂಥವೋ ಬಲಪಂಥವೋ……

Advertisement

ಗಾಂಧಿ ನಿನ್ನ ನೈತಿಕತೆಯನ್ನು ಹಣ ಅಧಿಕಾರ ಪ್ರಚಾರ ನುಂಗಿ ಹಾಕಿದೆ. ಜನರ ಬುದ್ಧಿಶಕ್ತಿಗೆ ಮಂಕು ಕವಿದಿದೆ. ಯೋಚನಾ ಶಕ್ತಿ ಸಂಕುಚಿತಗೊಂಡಿದೆ. ಜಾತಿ ಧರ್ಮ ಪಂಥಗಳ ಅಮಲು ಆವರಿಸಿಕೊಂಡಿದೆ.

75 ವರ್ಷಗಳ ನಂತರ ಇದು ಸಹಜವೇ ಇರಬೇಕು…..

Advertisement

ಯಾರಿಗೆ ಬೇಕಿದೆ ಗಾಂಧಿ ನಿನ್ನ ನೈತಿಕತೆ.
ನೋಡು ಒಮ್ಮೆ ಈಗ ಬರುತ್ತಿರುವ ಧಾರವಾಹಿಗಳನ್ನು ಅವರಿಗೆ ಅನೈತಿಕತೆಯೇ ನೈತಿಕವಾಗಿದೆ,
ನೋಡು ಒಮ್ಮೆ ‌ಶಾಲೆ ಆಸ್ಪತ್ರೆಗಳನ್ನು ಅವರಿಗೆ ಹಣವೇ ನೈತಿಕವಾಗಿದೆ,
ನೋಡು ಒಮ್ಮೆ ‌ಸಾಹಿತಿಗಳು ಸಮಾಜ ಸೇವಕರನ್ನು ಅವರಿಗೆ ಪ್ರಶಸ್ತಿಗಳೇ ನೈತಿಕವಾಗಿದೆ,
ನೋಡು ಒಮ್ಮೆ ರಾಜಕಾರಣಿ ಅಧಿಕಾರಿಗಳನ್ನು ಅವರಿಗೆ ಲಂಚವೇ ನೈತಿಕವಾಗಿದೆ.
ನೋಡು ಒಮ್ಮೆ ‌ಆಧ್ಯಾತ್ಮಿಕ ಗುರುಗಳನ್ನು ಅವರಿಗೆ, ಆಡಂಬರದ ಪ್ರದರ್ಶನವೇ ನೈತಿಕವಾಗಿದೆ.
ನೋಡು ಒಮ್ಮೆ ‌ನಮ್ಮ ಯುವಕರನ್ನು ಅವರಿಗೆ ಮೋಜು ಮಸ್ತಿಯೇ ನೈತಿಕವಾಗಿದೆ.

ಬಹುತೇಕ ಎಲ್ಲರೂ ಹೇಳುತ್ತಾರೆ, ಈಗಿನ ಪರಿಸ್ಥಿತಿಯಲ್ಲಿ ಎಷ್ಟೇ ಗಾಂಧಿ ಬಂದರು ಪರಿಸ್ಥಿತಿ ಬದಲಾಗುವುದಿಲ್ಲ ಎಂದು. ಇಷ್ಟೇ ಗಾಂಧಿ ನಿನ್ನೆ ನೈತಿಕತೆ ನಿನ್ನೆ ಪ್ರಾಮಾಣಿಕತೆ ನಿನ್ನ ದೂರದೃಷ್ಟಿ ಈ ಜನರಿಗೆ ಅರ್ಥವಾಗಿರುವುದು.

Advertisement

ಎಲ್ಲಿದ್ದಾರೆ ಈಗ ಆ ಸತ್ಯ ನಿಷ್ಠ ವ್ಯಕ್ತಿ,
ಎಲ್ಲಿದ್ದಾರೆ ಈಗ ಆ ಪಾರದರ್ಶಕ ವ್ಯಕ್ತಿ,
ಎಲ್ಲಿದ್ದಾರೆ ಈಗ ನಿಷ್ಕಲ್ಮಶ ಹೃದಯದ ವ್ಯಕ್ತಿ,
ಎಲ್ಲಿದ್ದಾರೆ ಈಗ ಆ ದೂರದೃಷ್ಟಿಯ ವ್ಯಕ್ತಿ,
ನನ್ನ ಬದುಕೇ ನನ್ನ ಸಂದೇಶ ಎಂದು ಸಾರುವ ಧೈರ್ಯ ಈಗ ಯಾರಿಗಿದೆ….

ಹೊರಟು ಹೋಗು ಗಾಂಧಿ ಈ ದೇಶ ಬಿಟ್ಟು. ಈ ದೇಶದಲ್ಲಿ ಸದ್ಯಕ್ಕೆ ನೀನಿರಲು ಅರ್ಹನಲ್ಲ.

Advertisement

ಸರಳತೆಯ ವ್ಯಾಖ್ಯಾನವೇ ಬದಲಾಗಿದೆ,
ಸತ್ಯದ ವ್ಯಾಖ್ಯಾನವೇ ಬದಲಾಗಿದೆ,
ಅಹಿಂಸೆಯ ವ್ಯಾಖ್ಯಾನವೇ ಬದಲಾಗಿದೆ,
ಹೋರಾಟ ಉಪವಾಸ ಚಳವಳಿಗಳ ವ್ಯಾಖ್ಯಾನವೇ ಬದಲಾಗಿದೆ…….

ಎಲ್ಲವೂ ಹಣ ಕೇಂದ್ರಿತ,
ಎಲ್ಲವೂ ಅಧಿಕಾರ ಕೇಂದ್ರಿತ,
ಎಲ್ಲವೂ ಪ್ರಚಾರ ಕೇಂದ್ರಿತ,
ಎಲ್ಲವೂ ಅಹಂಕಾರ ಕೇಂದ್ರಿತ…..

Advertisement

ಇರಬಹುದು ಗಾಂಧಿ ನೀನು ಸಹ ಪರಿಪೂರ್ಣ ಅಲ್ಲ,
ಒಂದಷ್ಟು ಗೊಂದಲ ಮತ್ತೊಂದಿಷ್ಟು ತಪ್ಪು ನಿರ್ಧಾರಗಳು ಆಗಿರಬಹುದು. ಅದು ಮಾನವ ಸಹಜ ಗುಣ.
ಆದರೆ ನಿನ್ನ ಪಾರದರ್ಶಕತೆ – ನಿನ್ನ ನೈತಿಕತೆಗೆ ನೀನೇ ಸಾಟಿ……

ಏನೇ ಆಗಲಿ ಮೋಹನ್ ದಾಸ್ ಕರಮಚಂದ್ ಗಾಂಧಿಯನ್ನು ಹಿನ್ನೆಲೆಗೆ ಸರಿಸಿದ ದೇಶ ಮೇಲ್ನೋಟಕ್ಕೆ ಅಭಿವೃದ್ಧಿ ಹೊಂದುತ್ತಿರುವಂತೆ ಕಂಡರೂ ಒಳಗೊಳಗೆ ತನಗರಿವಿಲ್ಲದಂತೆ ಕುಸಿಯುತ್ತಿರುತ್ತದೆ…….

Advertisement

ಒಂದು ದೇಶದ ನಿಜವಾದ ಆತ್ಮಶಕ್ತಿಯನ್ನೇ ಮರೆಮಾಚಿ
ಮತ್ತೇನೋ ಸ್ವಾರ್ಥದ ಪರಿಧಿಯೊಳಗೆ ದೇಶ ಕಟ್ಟುವ ಕನಸನ್ನು ಜನರಲ್ಲಿ ಬಿತ್ತಿ ದೇಶವನ್ನು ಆಂತರ್ಯದಲ್ಲಿ ಕುಸಿಯುವಂತೆ ಮಾಡುತ್ತಿರುವ ಶಕ್ತಿಗಳ ಬಗ್ಗೆ ಎಚ್ಚರಿಸುತ್ತಾ……….

ನಾಳಿನ ಮಹಾತ್ಮ ಗಾಂಧಿಯವರ ಹುಟ್ಟುಹಬ್ಬಕ್ಕೆ ಶುಭಾಶಯಗಳು

Advertisement

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

8 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago