Advertisement
ಅನುಕ್ರಮ

ಚಿಂತನಾ ಶೈಲಿಯ ಭ್ರಷ್ಟತೆ…. | ಅಪಾಯಕಾರಿ ಬೆಳವಣಿಗೆ….. | ವಿವೇಕಾನಂದ ಎಚ್‌ ಕೆ ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ.. |

Share

ಚಿಂತನಾ ಶೈಲಿಯ ಭ್ರಷ್ಟತೆ……….!

ಧರ್ಮದ ಹುಳುಕುಗಳನ್ನು ಎತ್ತಿ ತೋರಿಸಿದರೆ ಧರ್ಮ ವಿರೋಧಿ ಎನ್ನುವಿರಿ…,

Advertisement

ಆರ್ಥಿಕ ಅಸಮಾನತೆಯನ್ನು ಒತ್ತಿ ಹೇಳಿದರೆ ಪ್ರಗತಿ ವಿರೋಧಿ ಎನ್ನುವಿರಿ…,

ಆಚರಣೆಗಳ ಮೌಡ್ಯಗಳನ್ನು ಬಿಚ್ಚಿ ತೋರಿಸಿದರೆ ಸಂಪ್ರದಾಯ ವಿರೋಧಿ ಎನ್ನುವಿರಿ…,

Advertisement

ವರದಕ್ಷಿಣೆ ಕಾನೂನಿನ ದುರುಪಯೋಗದ ಬಗೆಗೆ ಮಾತನಾಡಿದರೆ ಮಹಿಳಾ ವಿರೋಧಿ ಎನ್ನುವಿರಿ….,

ಅಸ್ಪೃಷ್ಯತಾ ಕಾನೂನಿನ ದುರ್ಬಳಕೆ ಬಗೆಗೆ ಮಾತನಾಡಿದರೆ ದಲಿತ ವಿರೋಧಿ ಎನ್ನುವಿರಿ…,

Advertisement

ಜಾತಿಯಿಂದಾಗುವ ಅವಮಾನಗಳನ್ನು ಪ್ರಶ್ನಿಸಿದರೆ ಜಾಣ ಕಿವುಡರಾಗಿ ಜಾತಿಯ ಅಮಾನವೀಯ ಸಮರ್ಥನೆಗೆ ಇಳಿಯುವಿರಿ….,

ದೇಶದೊಳಗಿನ ಬಡತನ ದಾರಿದ್ಯಗಳನ್ನು ಎತ್ತಿ ಹಿಡಿದರೆ ದೇಶದ್ರೋಹಿ ಎನ್ನುವಿರಿ…,

Advertisement

ಊಟ, ಬಟ್ಟೆಯ ಸ್ವಾತಂತ್ರ್ಯ ಪ್ರಶ್ನಿಸಿದರೆ ಸ್ವೇಚ್ಚಾಚಾರಿ ಎನ್ನುವಿರಿ….,

ಪ್ರಶ್ನಿಸದೆ ಏನನ್ನೂ ಒಪ್ಪಿಕೊಳ್ಳಬಾರದು ಎನ್ನುವಿರಿ….,

Advertisement

ಪ್ರಶ್ನಿಸಿದರೆ ಅಧಿಕ ಪ್ರಸಂಗಿ ಎನ್ನುವಿರಿ…,

ಸರ್ವಧರ್ಮ ಸಹಿಷ್ಣುತೆಯ ಬಗ್ಗೆ ಹೊಗಳುವಿರಿ ಮೇಲ್ನೋಟಕ್ಕೆ…,ಒಳಗೆ ಇತರೆ ಧರ್ಮಗಳನ್ನು ದ್ವೇಷಿಸುವಿರಿ…,

Advertisement

ಮಾತೃಭಾಷೆ ಶ್ರೇಷ್ಠ ಎನ್ನುವಿರಿ, ಅದು ನಿಜ…., ಆದರೆ ನಿಮ್ಮ ಭಾಷೆ ಅತಿ ಶ್ರೇಷ್ಠ ಎನ್ನುವಿರಿ…., ಅದು ಹೇಗೆ….?,

ಮುಕ್ತ ಸ್ವಾತಂತ್ರ್ಯದ, ಸಹಿಷ್ಣು ಸಮಾಜದಲ್ಲಿ ನಿಜವಾಗಿ ನಾವಿದ್ದೇವೆಯೇ, ನನಗೇನೂ ಆ ಬಗೆಗೆ ಸಾಕಷ್ಟು ಅನುಮಾನ ಗೊಂದಲಗಳಿವೆ.

Advertisement

ಭ್ರಮೆಗಳನ್ನು ಸೃಷ್ಟಿಸಿ, ವಾಸ್ತವತೆಯನ್ನು ಮರೆಮಾಚಿ, ಆತ್ಮವಂಚಕ ಸಮಾಜ ಸೃಷ್ಟಿಯಾಗಿದೆ ಎನಿಸುತ್ತಿದೆ.

ಈಗಲೂ ಕಾಲ ಮಿಂಚಿಲ್ಲ. ನಿಜ ಜ್ಞಾನದ ಹೆಬ್ಬಾಗಿಲು ತೆರೆದರೆ ವಾಸ್ತವಾಂಶ ಗೋಚರಿಸುತ್ತದೆ. ಆ ಕಾಲ ಬೇಗ ಬರಲಿ ಎಂಬ ನಿರೀಕ್ಷೆಯಲ್ಲಿ ನಿಮ್ಮೊಂದಿಗೆ ……..,

Advertisement

ಏಕೆಂದರೆ,

ಪ್ರತಿಯೊಂದು ಜೀವಿಗಳಲ್ಲೂ ಭಾವನೆಗಳ ಪ್ರವಾಹ ಸದಾ ಹರಿಯುತ್ತಿರುತ್ತದೆ. ಇನ್ನು ಮನುಷ್ಯರಲ್ಲಂತೂ ಗಂಡು ಹೆಣ್ಣಿನ ಬೇದಗಳಿಲ್ಲದೆ ಭಾವನೆಗಳದೇ ಸಾಮ್ರಾಜ್ಯ. ಹಿಂದೆ ಅಕ್ಷರ ಜ್ಞಾನವಿಲ್ಲದ ಜನರು ಜಾನಪದ ಹಾಡು ಕಥೆಗಳ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದರು. ಅಕ್ಷರ ಲಿಪಿಯ ಸಂಶೋದನೆಯೊಂದಿಗೆ ಓದು ಬರಹ ಸುಲಭವಾಯಿತು. ಭಾವನೆಗಳ ವ್ಯಕ್ತಪಡಿಸುವಿಕೆ ಕಥೆ, ಕವಿತೆ, ಕಾದಂಬರಿ ಇತ್ಯಾದಿ ಅನೇಕ ರೂಪಗಳಲ್ಲಿ ಹೊರ ಹೊಮ್ಮಲ್ಪಟ್ಟಿತು. ಸೃಷ್ಟಿಯ ಎಲ್ಲವೂ ಬರವಣಿಗೆಯ ವಸ್ತುವಾಯಿತು.

Advertisement

ಅನುಭವಗಳು, ಅನಿಸಿಕೆಗಳು, ವಾಸ್ತವಗಳು, ಆದರ್ಶಗಳು, ಕಲ್ಪನೆಗಳು ಎಲ್ಲವೂ ಬರಹರೂಪಕ್ಕಿಳಿಯಿತು ಮತ್ತು ಅದರಲ್ಲಿ ಅನುಸರಿಸಿದ್ದ, ಅನುಸರಿಸುತ್ತಿರುವ, ಅನುಸರಿಸಬೇಕಾದ ಎಲ್ಲಾ ಜೀವನ ವಿಧಾನಗಳು ಒಳಗೊಂಡಿರುತ್ತಿದ್ದವು. ಅದನ್ನು ಬರೆಯುತ್ತಿದ್ದವರು ತೀರಾ ಕಡಿಮೆ ಮತ್ತು ನುಡಿದಂತೆ ನಡೆಯುವ ಜನರೇ ಹೆಚ್ಚಿದ್ದರು. ಬದುಕು ಬರಹ ಸಾಮಾನ್ಯವಾಗಿ ಒಂದೇ ಆಗಿತ್ತು ಮತ್ತು ವಾಸ್ತವವು ಆಗಿದ್ದಿತು.

ಆದರೆ, ಆಧುನಿಕ ಶಿಕ್ಷಣ ಪದ್ಧತಿ ಪ್ರಾರಂಭವಾದ ಮೇಲೆ ಬದುಕು ಬರಹದ ಅಂತರ ಜಾಸ್ತಿಯಾಯಿತು. ಬದುಕಿದಂತೆ ಬರೆಯಬೇಕಿಲ್ಲ ಬರೆದಂತೆ ಬದುಕಬೇಕಿಲ್ಲ ಎಂಬ ಆತ್ಮವಂಚಕ ಮನಸ್ಸು ಬಹುತೇಕರಲ್ಲಿ ಮೂಡಿತು. ಬರಹಗಳ ದಂಧೆ ಶುರುವಾಯಿತು. ಅಕ್ಷರದ ಅಹಂಕಾರ ಹೆಚ್ಚಾಯಿತು. ಹೊಟ್ಟೆ ಪಾಡನ್ನೂ ಮೀರಿ ಬರಹ ಆತ್ಮತೃಪ್ತಿಗೆ, ಕ್ರಾಂತಿಗೆ, ಬದಲಾವಣೆಗೆ ನಾಂದಿ ಹಾಡಿ “ಖಡ್ಗ ಕ್ಕಿಂತ ಲೇಖನಿ ಹರಿತ ” ಎಂಬಂತಾದರೂ, ಮುಂದೆ ಅಧಿಕಾರ, ಅಂತಸ್ತು, ಭಟ್ಟಂಗಿತನ, ದುಷ್ಟತನ, ಚಾಕಚಕ್ಯತೆಯಿಂದ ಸಮಾಜವನ್ನು ಒಡೆಯುವ ಸಾಧನವೂ ಆಯಿತು.

Advertisement

ಇನ್ನು,  ಇತ್ತೀಚಿನ ಆಧುನಿಕ ಮಾಧ್ಯಮಗಳಂತೂ ಮನಸ್ಸಗಳನ್ನು ಹೊಡೆದು ಚೂರು ಚೂರು ಮಾಡಿ ಭಸ್ಮಾಸುರನಂತೆ ಜನರ ಭಾವನೆಗಳನ್ನೇ ನಿಯಂತ್ರಿಸುವ, ಪ್ರಚೋದಿಸುವ ಕೊನೆಗೆ ತಮ್ಮ ನಾಶಕ್ಕೆ ತಾವೇ ಕಾರಣವಾಗುವಂತೆ ಬೆಳೆದು ನಿಂತಿವೆ.

ಬದುಕು ಮತ್ತು ಬರಹಗಳು ಬೇರೆ ಬೇರೆಯಾಗಿ ಬಹಳ ಕಾಲವಾಗಿದೆ. ಅದನ್ನು ಸಮರ್ಥಿಸಲೂ ವಿಕೃತ ವಿಚಾರಧಾರೆಳು ಸೃಷ್ಟಿಯಾಗಿವೆ. ಇದು ತೀರಾ ಅಪಾಯಕಾರಿ ಬೆಳವಣಿಗೆ.

Advertisement

ಆತ್ಮೀಯರೆ, ಬದುಕು ಮತ್ತು ಬರಹ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರುವ ಇಂದಿನ ಸಮಯದಲ್ಲಿ ಅತ್ಯಂತ ತಾಳ್ಮೆಯಿಂದ ನಾವೆಲ್ಲರೂ ಅದನ್ನು ಸಾಧ್ಯವಾದ ಮಟ್ಟಿಗೆ ಹತ್ತಿರ ತರಲು ಪ್ರಯತ್ನಿಸಬೇಕಿದೆ, ನಮ್ಮ ಬರಹ ನಮ್ಮ ಬದುಕನ್ನು ಪ್ರತಿಬಿಂಬಿಸುವುದು ಬಹಳ ಕಷ್ಟವಾದರೂ ಆದಷ್ಟು ಹತ್ತಿರ ಇರಬೇಕಿದೆ. ವಾಸ್ತವದಿಂದ ದೂರವಾದ ಯಾವ ಬರಹಗಳೂ ದೀರ್ಘಕಾಲ ಉಳಿಯುವುದಿಲ್ಲ ಮತ್ತು ಆತ್ಮವಂಚಕ ಮನಸ್ಸುಗಳು ಸಮಾಜ ಕಂಟಕವೇ.

ಪ್ರೀತಿ, ಪ್ರೇಮ, ಕುಟುಂಬ, ದೇಶ, ಧರ್ಮ, ರಾಜಕೀಯ ಇತ್ಯಾದಿ ಯಾವ ವಿಷಯವೇ ಆಗಿರಲಿ ಬರಹ ಮತ್ತು ಬದುಕು ಹತ್ತಿವಾಗಿರಲಿ. ರಮ್ಯತೆ, ಮನರಂಜನೆ ,ಕಾಲ್ಪನಿಕತೆಗಳು ದಾರಿ ತಪ್ಪಿಸದಿರಲಿ.

Advertisement

ಇದಕ್ಕಾಗಿ ನಾವೆಲ್ಲಾ ಪ್ರಯತ್ನಿಸೋಣ………

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago