Advertisement
ಅನುಕ್ರಮ

ಯಾವುದನ್ನೂ ಪ್ರಶ್ನೆ ಮಾಡಲೇ ಬಾರದು……..! , ತಾಳ್ಮೆಯಿಂದ ಯೋಚಿಸಿ ಎಂದು ಮನಸ್ಸಿನ ಕನ್ನಡಿಯಲ್ಲಿ ಹೇಳುತ್ತಾರೆ ವಿವೇಕಾನಂದ ಎಚ್‌ ಕೆ |

Share

ಯಾವುದನ್ನೂ ಪ್ರಶ್ನೆ ಮಾಡಲೇ ಬಾರದು……..!!

ನೀನು ಹಿಂದು ಹೀಗೆಯೇ ಇರಬೇಕು…. , ನೀನು ಮುಸ್ಲಿಂ ಹೀಗೆಯೇ ಇರಬೇಕು…., ನೀನು ಕ್ರಿಶ್ಚಿಯನ್ ಹೀಗೆಯೇ ಇರಬೇಕು……

ನಮ್ಮ ವೇದಗಳು, ಖುರಾನ್, ಬೈಬಲ್ ಹೀಗೆಯೇ ಹೇಳಿದೆ….., ಅದಕ್ಕೆ ಅಪಚಾರ ಮಾಡಿದರೆ ನೀನು ಧರ್ಮ ವಿರೋಧಿ….

ಎಂತೆಂತ ಮಹಾಮಹಿಮರು ಎಷ್ಟೆಷ್ಟು ಅನುಭವದಲ್ಲಿ ಏನೇನು ಹೇಳಿರುವರೋ ಅದೇ ಸತ್ಯ…… , ನೀನು ಪ್ರಶ್ನಿಸಲು ಯೋಚಿಸಲು ಏನೂ ಉಳಿದಿಲ್ಲ……

ಮೊಹರಮ್ ಹಿಂದಿನ ಕಥೆ ಗೊತ್ತೆ……, ಕ್ರಿಸ್ಮಸ್ ಹಿಂದಿನ ಸತ್ಯ ಗೊತ್ತೆ…….., ಗಣೇಶನ ಸೃಷ್ಟಿಯ ಸಾಂಕೇತಿಕತೆ ಗೊತ್ತೆ…..

ನೀನು ಗಂಡು….., ನೀನು ಹೆಣ್ಣು……, ನೀನು ಮಗ…., ನೀನು ಸೊಸೆ….., ನೀನು ಅಳಿಯ…., ನೀನು ಗುಜರಾತಿ…, ನೀನು ತಮಿಳಿಗ…, ನೀನು ಆಫ್ರಿಕಾದವ.., ನೀನು ದಲಿತ….., ನೀನು ಬ್ರಾಹ್ಮಣ…

ನೀನು ಜೀಸಸ್ ಗಿಂತ ದೊಡ್ಡವನೇ……., ನೀನು ಪೈಗಂಬರ್ ಗಿಂತ ತಿಳಿದವನೇ….., ನೀನು ಕೃಷ್ಣನಿಗಿಂತ ಬುದ್ದಿವಂತನೇ……., ನಿನ್ನದು ಏನೂ ಇಲ್ಲ. ಎಲ್ಲವೂ ಪೂರ್ವ ನಿರ್ಧಾರಿತ.

ಕುಂಕುಮದ ಮಹತ್ವ ಗೊತ್ತೆ……, ಟೋಪಿಯ ಪ್ರಾಮುಖ್ಯತೆ ಗೊತ್ತೆ….., ಮೇಣದ ಬತ್ತಿಯ ಪಾವಿತ್ರ್ಯತೆ ಗೊತ್ತೆ……, ಗೊತ್ತಿಲ್ಲದಿದ್ದರೆ ತಿಳಿದಿಕೋ….., ಓದು ಓದು ಓದು ಗ್ರಂಥಗಳನ್ನು…., ಕೇಳು ಕೇಳು ಕೇಳು ಪ್ರವಚನಗಳನ್ನು….., ಮಾಡು ಮಾಡು ಮಾಡು ಆಚರಣೆಗಳನ್ನು……, ನಿನಗೆ ಮೋಕ್ಷ ಸದ್ಗತಿ ಸ್ವರ್ಗ ಎಲ್ಲವೂ ಸಿಗುತ್ತದೆ…….., ಇಲ್ಲದಿದ್ದರೆ ನಿನಗೆ ಅತ್ಯಂತ ಕ್ರೂರ ಶಿಕ್ಷೆಯ ನರಕವೇ ಗತಿ……….

ಇದು ನಿಜವೇ ??????

ಹಾಗಾದರೆ ಈಗ ಒಂದು ಜೀವಿಯಾಗಿ ಮೆದುಳಿನ ಸಮೇತ ಹುಟ್ಟಿರುವ ನಾವು ಈ ಜೀವನದಲ್ಲಿ ಕೇವಲ ಹಿಂದಿನ ನಿಯಮಗಳ ಪ್ರಕಾರ ಬದುಕುವುದಷ್ಟೇ ನಮ್ಮ ಕೆಲಸವೇ ??????

ನಮಗೆ ಸರಿ ಎನ್ನಿಸದ, ನಮಗೆ ಅನಾನುಕೂಲವಾಗುವ, ನಮ್ಮ ಮನಸ್ಸಿಗೆ ಹೊಳೆಯುವ, ವಿಚಾರಗಳನ್ನು ಕಾನೂನಿನ ವ್ಯಾಪ್ತಿ ಮೀರದಂತೆ ಹೇಳಬಾರದೆ ???????

ಸಮಾಜ ಬೆಳೆದಿದೆ ನಿಜ, ಆದುನಿಕತೆ ಅಭಿವೃದ್ಧಿಯಾಗಿದೆ ನಿಜ, ಕಾನೂನು ಕಟ್ಟಲೆ ಇದೆ ನಿಜ, ನೈತಿಕತೆಯೂ ಅನುಭವದಿಂದ ಬೆಳೆದು ಬಂದಿದೆ ನಿಜ……… ಇದಕ್ಕೆ ಧಕ್ಕೆಯಾಗದೆ, ನಮ್ಮ ಗ್ರಹಿಕೆಯ ಮುಖಾಂತರ ಇನ್ನೊಂದಿಷ್ಟು ಹೊಸ ವಿಚಾರಗಳನ್ನು ಹಂಚಿಕೊಂಡರೆ ತಪ್ಪೇನು ????? ಅಲೋಚನಾ ಶಕ್ತಿಯನ್ನು ಇನ್ನೊಬ್ಬರಿಗೆ ಅಡವಿಡಲು ಒತ್ತಾಯಿಸುವುದೇಕೆ ?????

ಹಾಗೆಂದು ಹಳೆಯದು ಕೆಟ್ಟದ್ದು ಹೊಸದು ಒಳ್ಳೆಯದು ಎಂದಲ್ಲ, ಅಥವಾ ಹೊಸದು ಕೆಟ್ಟದ್ದು ಹಳೆಯದು ಒಳ್ಳೆಯದು ಎಂಬುದೂ ಅಲ್ಲ….., ಇನ್ನೂ ಇನ್ನೂ ಹೊಸ ಹೊಸ ಆಲೋಚನೆಗಳಿಗೆ ನಮ್ಮನ್ನು ತೆರೆದುಕೊಳ್ಳೋಣ…., ತಂತ್ರಜ್ಞಾನ ವಿಷಯದಲ್ಲಿ ಹೊಸ ಆವಿಷ್ಕಾರಗಳನ್ನು ಸ್ವಾಗತಿಸಿ ಬಹುಬೇಗ ಸ್ವೀಕರಿಸುವ ನಾವು, ಮಾನವೀಯ ಮೌಲ್ಯಗಳ,
ವಿಚಾರ ತತ್ವ ಸಿದ್ದಾಂತಗಳ, ಹಳೆಯ ಮರಕ್ಕೇ ಇನ್ನೂ ನೇತಾಡುತ್ತಿರುವುದು ಏಕೆ ?????

ಇನ್ನೊಬ್ಬ ಆಧುನಿಕ ಕೃಷ್ಣನೋ ಜೀಸಸ್ಸೋ ಪೈಗಂಬರೋ ಸೃಷ್ಟಿಯಾಗಲೇ ಇಲ್ಲ……

ನಾಗರಿಕ ಸಮಾಜದ ವೇಗಕ್ಕೆ, ಭಾರತದ ಬುದ್ದ ಮಹಾವೀರ ಶಂಕರ ಬಸವ ವಿವೇಕಾನಂದ. ಗಾಂಧಿ ಅಂಬೇಡ್ಕರ್ ಮುಂತಾದವರುಗಳು ದೇವರುಗಳಾಗಿ, ಮೂರ್ತಿಗಳಾಗಿ, ಸಂಕೇತಗಳಾಗಿ, ಧರ್ಮಗಳಾಗಿ, ಸಂಘಟನೆಗಳಾಗಿ, ಚಳವಳಿಗಳಾಗಿ,
ರಾಜಕಾರಣಿಗಳಾಗಿ, ಮತಗಳಾಗಿ, ಕಲಹಗಳಾಗಿ, ಬದುಕಿನ ಸಾಧನವಾಗಿ,  ಹೊಟ್ಟೆ ಪಾಡಾಗಿ, ರೂಪಾಂತರ ಹೊಂದಿದ್ದಾರೆ.

ಭಾರತದ ಮಟ್ಟಿಗೆ ಈಗ ಹೊಸ ಆವಿಷ್ಕಾರದ ಸಮಯ…. ಹೊಸದೆಂದರೆ ಎಲ್ಲವೂ ಹೊಸದಾದ ಪುನರ್ ಸೃಷ್ಟಿಯಲ್ಲ……

ಜನರ ಜೀವನಮಟ್ಟ ಸುಧಾರಣೆಯ ಮೂಲ ಆಶಯದೊಂದಿಗೆ…..

ಒಂದಷ್ಟು ಸಭ್ಯತೆ, ಒಂದಷ್ಟು ಪ್ರೀತಿ, ಒಂದಷ್ಟು ಸ್ನೇಹ, ಒಂದಷ್ಟು ಕರುಣೆ,  ಒಂದಷ್ಟು ಸಮಾನತೆ,  ಒಂದಷ್ಟು ಮಾನವೀಯತೆ,
ಒಂದಷ್ಟು ನೆಮ್ಮದಿಗಾಗಿ…….

ಒಂದು ಅಭಿಪ್ರಾಯಕ್ಕೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದಾಗ ಅದಕ್ಕೆ ಧರ್ಮದ ಸ್ವಯಂ ವಕ್ತಾರರು ಎಷ್ಟು ಕೆಟ್ಟದ್ದಾಗಿ ಪ್ರತಿಕ್ರಿಯಿಸುವರು ಗೊತ್ತೆ.

ಇಲ್ಲದ ರಾಮ ಕೃಷ್ಣ ಅಲ್ಲಾ ಅವರಿಗೆ ಸತ್ಯ. ಅವರ ಜೀವಂತ ಜೊತೆಗಾರ ಮಿಥ್ಯ. ರಾಮನಿಗೆ ನೋವಾಗಬಾರದು. ಒಂದು ಗುಂಪಿನ ಅವರ ಗೆಳೆಯನನ್ನು ಬಾಯಿಗೆ ಬಂದಂತೆ ಬಯ್ಯಬಹುದು. ಇದು ಸರಿಯೇ ??????

ಹಾಲು ಕುಡಿಯದ ಹಾವಿನ ಹುತ್ತಕ್ಕೆ ಹಾಲು ಸುರಿಯುವರು,….. ಬಡ ಮಗುವಿನ ಹಸಿವಿಗೆ ನಿರ್ಲಕ್ಷ್ಯ ತೋರುವರು…. ಇದನ್ನು ಪ್ರಶ್ನಿಸಬಾರದೆ ??????

ಹಣದ ಆಮಿಷ ಒಡ್ಡಿ ಜನರನ್ನು ಮತಾಂತರ ಮಾಡುವರು….. ಇದನ್ನು ಕೇಳಬಾರದೆ ??????

ದೇಶಕ್ಕಿಂತ ಧರ್ಮವೇ ಮುಖ್ಯವೆನ್ನುವರು…….. ಇದನ್ನು ಖಂಡಿಸಬಾರದೆ ???????

ಗೆಳೆಯ/ ಗೆಳತಿಯರೇ,

ಇದನ್ನು ಸಹ ಒಪ್ಪುವ ತಿರಸ್ಕರಿಸುವ ನಿರ್ಲಕ್ಷಿಸುವ ಟೀಕಿಸುವ ಸ್ವಾತಂತ್ರ್ಯ ನಿಮಗಿದೆ. ಅದಕ್ಕೆ ಮುನ್ನ ಒಮ್ಮೆ ತಾಳ್ಮೆಯಿಂದ ಯೋಚಿಸಿ ಎಂಬುದಷ್ಟೇ ನನ್ನ ಮನವಿ………

# ವಿವೇಕಾನಂದ ಎಚ್‌ ಕೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

18 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago