Advertisement
ಅಂಕಣ

ಮತ್ತೊಮ್ಮೆ ನಾವು ಬದುಕಿನ ಶೈಲಿಯ ಆತ್ಮ ವಿಮರ್ಶೆಗೆ ಒಳಪಡಿಸಬೇಕಾಗಿದೆ ಎನ್ನುತ್ತಾರೆ ವಿವೇಕಾನಂದ ಎಚ್‌ ಕೆ |

Share

ಸುಮಾರು ನೂರು ವರುಷಗಳು ಉರುಳಿವೆ. 7 ಮಿಲಿಯನ್ ನಾಗರಿಕರು, 10 ಮಿಲಿಯನ್ ಸೈನಿಕರು ಸತ್ತು ಅಥವಾ ಕೊಲೆಯಾಗಿ ಮತ್ತು 37 ಮಿಲಿಯನ್ ಜನರು ಗಾಯಾಳುಗಳಾಗಿ……., ಅದೇ ಮೊದಲನೇ ಮಹಾಯುದ್ಧದ ಅಂತ್ಯ ಮತ್ತು ಎರಡನೇ ಮಹಾಯುದ್ಧದ ಅಡಿಗಲ್ಲು.

Advertisement
Advertisement
Advertisement
Advertisement

ಬಹುಶಃ ಈಗಿನ ವಿಶ್ವ ಜನಸಂಖ್ಯೆಯ ಸುಮಾರು ಶೇಕಡಾ 30% / 35 % ರಷ್ಟು ಇದ್ದ ದಿನಗಳಲ್ಲೇ ಇಷ್ಟೊಂದು ಸಾವು ನೋವುಗಳು, ಅತ್ಯಂತ ಭೀಕರ ಮತ್ತು ಮನುಷ್ಯ ಪ್ರಾಣಿಯ ಅಜ್ಞಾನಕ್ಕೆ ಉದಾಹರಣೆ. ಇದು ನಡೆದು ಸುಮಾರು 25  ವರ್ಷಗಳ ನಂತರ ಮತ್ತೊಂದು ಮಹಾಯುದ್ಧ ಆಗಿ ಇನ್ನೂ ಹೆಚ್ಚಿನ ಅನಾಹುತಗಳು ಸಂಭವಿಸಿದವು. ಹಿರೋಷಿಮಾ ಮತ್ತು ನಾಗಸಾಕಿಯ ಅಣುಬಾಂಬಿನ ಹತ್ಯೆಗಳು ಇದರಲ್ಲಿ ಸೇರಿದೆ.

Advertisement

ಅಲ್ಲಿಂದ ಈ ಕ್ಷಣ 2021 ರ ನವೆಂಬರ್ ವರೆಗೆ ಮಹಾಯುದ್ಧ ನಡೆದಿಲ್ಲವಾದರೂ ಅದಕ್ಕಿಂತ ಹೆಚ್ಚಿನ ದ್ವಿರಾಷ್ಟ್ರ ಯುದ್ಧ ಮತ್ತು ಭಯೋತ್ಪಾದನೆಯಿಂದ ಜನರು ಸಾಯುತ್ತಿದ್ದಾರೆ.

ಭೂಕಂಪ ಸುನಾಮಿ ಜ್ವಾಲಾಮುಖಿ ಕಾಡ್ಗಿಚ್ಚು ಚಂಡಮಾರುತ ಮುಂತಾದ ನೈಸರ್ಗಿಕ ವಿಕೋಪದಿಂದ ಜೀವಿಗಳು ಸತ್ತರೆ ಅದು ಪ್ರಕೃತಿಯ ನಿರ್ಧಾರ. ಖಾಯಿಲೆ ಅಪಘಾತ ಆತ್ಮಹತ್ಯೆ ಮುಂತಾದ ಕಾರಣಗಳಿಂದ ಸತ್ತರೆ ಅದು ಆಕಸ್ಮಿಕ, ನಿರ್ಲಕ್ಷ್ಯ , ದುರಾದೃಷ್ಟ ಎನ್ನಬಹುದು.

Advertisement

ಆದರೆ ಈ ಯುದ್ಧ ಮತ್ತು ಭಯೋತ್ಪಾದನೆ ಇದೆಯಲ್ಲ ಇದು ಮನುಷ್ಯನ ಅಜ್ಞಾನ ದುರಾಸೆ ದುರಹಂಕಾರ ಮತ್ತು ರಾಕ್ಷಸೀ ಪ್ರವೃತ್ತಿಯ ಸ್ವಯಂಕೃತ ಅಪರಾಧ.

ಜಾಗಕ್ಕಾಗಿಯೋ, ಧರ್ಮಕ್ಕಾಗಿಯೋ, ದ್ವೇಷಕ್ಕಾಗಿಯೋ, ಮಾಡುವ ಯುದ್ದಗಳು ಯಾವ ಕಾರಣಕ್ಕೂ ಸಮರ್ಥನೀಯವಲ್ಲ. ಭಯೋತ್ಪಾದನೆಯಂತೂ ಇನ್ನೂ ಅಸಹ್ಯ.

Advertisement

ಹಿಟ್ಲರ್, ಸದ್ದಾಂ ಹುಸೇನ್‌, ಬಿನ್ ಲಾಡೆನ್, ಇದಿ ಅಮೀನ್ ಮುಂತಾದವರ ಕ್ರೌರ್ಯ ಮತ್ತು ಅಜ್ಞಾನಕ್ಕೆ ಬಲಿಯಾದವರು ಕೋಟಿಗಳ ಲೆಕ್ಕದಲ್ಲಿದ್ದಾರೆ.

ಭಾರತ – ಪಾಕಿಸ್ತಾನ,
ಇರಾನ್ – ಇರಾಕ್,
ಅಮೆರಿಕ – ವಿಯೆಟ್ನಾಂ,
ಚೀನಾ – ಭಾರತ,
ಅಮೆರಿಕಾ – ಇರಾಕ್,
ಅಮೆರಿಕಾ – ಆಪ್ಘಾನಿಸ್ತಾನ,
ಆಫ್ರಿಕಾದ ದೇಶಗಳು, ಕೋರಿಯನ್ ಯುದ್ಧ , ಸಿರಿಯಾದ ಆಂತರಿಕ ಕಲಹ ಹೀಗೆ ಆಧುನಿಕ ಕಾಲದಲ್ಲಿ ಸಹ ಯುದ್ದಗಳು ನಿರಂತರವಾಗಿ ನಡೆಯುತ್ತಲೇ ಇದೆ.

Advertisement

ಈಗಲೂ ಮೂರನೇ ಮಹಾಯುದ್ಧದ ಆ ಭಯ ಎಲ್ಲರನ್ನೂ ಕಾಡುತ್ತಲೇ ಇದೆ. ಶಸ್ತ್ರಾಸ್ತ್ರಗಳ ತಯಾರಿಕೆ ಮತ್ತು ಮಾರಾಟ ವಿಶ್ವದ ಬಹುದೊಡ್ಡ ವ್ಯಾಪಾರಗಳಲ್ಲಿ ಒಂದಾಗಿ ಮುನ್ನಡೆಯುತ್ತಿದೆ.

ಜನ ಸಾಮಾನ್ಯರಾದ ನಮ್ಮ ಅಭಿಪ್ರಾಯ ‌ಈ ವಿಷಯದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆಯುವುದಿಲ್ಲ. ವಿಕೃತ ಮನಸ್ಸುಗಳ ಮತ್ತು ಶಸ್ತ್ರಾಸ್ತ್ರ ವ್ಯಾಪಾರಿಗಳ ಕಿರಾತಕ ಮನಸ್ಥಿತಿ ಮತ್ತು ಮಹತ್ವಾಕಾಂಕ್ಷೆಯೇ ಯುದ್ದದ ಮೂಲ ಕಾರಣ.

Advertisement

ಆಂತರಿಕವಾಗಿ ನಾವು ಎಷ್ಟೇ ನಾಗರಿಕ ಪ್ರಜ್ಞೆ ಬೆಳೆಸಿಕೊಂಡರೂ ಒಂದೇ ಒಂದು ಮಹಾಯುದ್ಧ ಇಡೀ ವಿಶ್ವವನ್ನೇ ನಾಶಪಡಿಸುವುದು.ಇತಿಹಾಸದಿಂದ ನಾವು ಕಲಿಯಬೇಕಾದ ಪಾಠ ಇನ್ನೂ ಸಾಕಷ್ಟಿದೆ.

ಕೊರೋನಾ ನಂತರದ ಬದುಕು, ಪುನೀತ್ ರಾಜ್‍ಕುಮಾರ್ ಅನಿರೀಕ್ಷಿತ ಸಾವು, ಈ ಕ್ಷಣದ ಮಳೆಯೆಂಬ ಪ್ರಕೃತಿಯ ಮುನಿಸು,
ಇದೆಲ್ಲದರ ಪರಿಣಾಮ ಆರ್ಥಿಕ ಕುಸಿತ ಬಹುತೇಕ ಸಾಮಾನ್ಯ ಜನರ ಜೀವನೋತ್ಸಾಹವನ್ನೇ ಕುಸಿಯುವಂತೆ ಮಾಡಿದೆ.

Advertisement

ಇದು ವ್ಯಕ್ತಿಗತವಾಗಿರದೆ ಸಾಮೂಹಿಕ ಮನಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಹೊರಬರಲು ಮತ್ತೊಮ್ಮೆ ನಾವು ಬದುಕಿನ ಶೈಲಿಯ – ಆಡಳಿತ ವ್ಯವಸ್ಥೆಯ – ಮಾನಸಿಕ ದೃಷ್ಟಿಕೋನ ಎಲ್ಲವನ್ನೂ ಆತ್ಮ ವಿಮರ್ಶೆಗೆ ಒಳಪಡಿಸಬೇಕಾಗಿದೆ.

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

7 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

7 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

8 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

8 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

22 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

22 hours ago