ಅನುಕ್ರಮ

ಒಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು ಹುಡುಕುವ ಗುಣ ವರ್ಗಾಯಿಸಲ್ಪಡುತ್ತಿದೆ…! | ವಿವೇಕಾನಂದ ಎಚ್‌ ಕೆ ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ…|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು, ಕೆಟ್ಟ ಕೆಲಸಗಳಲ್ಲಿ ಒಳ್ಳೆಯದನ್ನು ಹುಡುಕುವ ಗುಣ ಜನರಿಂದ ರಾಜಕಾರಣಿಗಳಿಗೆ, ರಾಜಕಾರಣಿಗಳಿಂದ ಮಾಧ್ಯಮಗಳಿಗೆ ವರ್ಗಾಯಿಸಲ್ಪಟ್ಟಿದೆ.

Advertisement

ಪ್ರೀತಿಯಲ್ಲಿ ದ್ವೇಷವನ್ನು, ದ್ವೇಷದಲ್ಲಿ ಪ್ರೀತಿಯನ್ನು ಹುಡುಕುವ ಮನೋಭಾವ ಧಾರವಾಹಿ ಸಿನಿಮಾ ಕಥೆ ಕಾದಂಬರಿಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ನಾಜೂಕಿನ ವಂಚನೆಯನ್ನು,ಕಾನೂನಿನ ನೆರಳಲ್ಲಿ ಅಪರಾಧವನ್ನು, ಅಮಾಯಕರಿಗೆ ಹಿಂಸೆ ಕೊಡುವ ಉಪಾಯಗಳನ್ನು ನ್ಯಾಯಾಲಯಗಳು ಜನರಿಗೆ ವರ್ಗಾಯಿಸಿವೆ.

ಕಲೆಗಳಿಂದ ಜನಪ್ರಿಯತೆಯನ್ನು, ಜನಪ್ರಿಯತೆಯಿಂದ ಸನ್ಮಾನಗಳನ್ನು, ಸನ್ಮಾನಗಳಿಂದ ಪ್ರಶಸ್ತಿಗಳನ್ನು, ಪ್ರಶಸ್ತಿಗಳಿಂದ ಅಧಿಕಾರವನ್ನು, ಅಧಿಕಾರದಿಂದ ಹಣವನ್ನು ಪಡೆಯುವ ಮಾರ್ಗಗಳನ್ನು ಅಕ್ಷರ ಜ್ಞಾನ ಜನರಿಗೆ ವರ್ಗಾಯಿಸಿದೆ.

Advertisement

ತಪ್ಪುಗಳನ್ನು ಸರಿ ಎಂದು, ಸರಿಯನ್ನು ತಪ್ಪೆಂದು,  ನಿಜವನ್ನು ಸುಳ್ಳೆಂದು, ಸುಳ್ಳನ್ನು ನಿಜವೆಂದು, ವಾಸ್ತವವನ್ನು ಭ್ರಮೆ ಎಂದು
ಭ್ರಮೆಯನ್ನು ವಾಸ್ತವ ಎಂದು ನಿರೂಪಿಸುವ ಕಲೆಗಾರಿಕೆ ಸಮೂಹ ಸಂಪರ್ಕ ಮಾಧ್ಯಮಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

Advertisement

ಕಪಟ ಭಕ್ತಿಯಿಂದ, ಆಡಂಬರ ಪ್ರದರ್ಶನದ ಪೂಜೆಗಳಿಂದ ದೇವರನ್ನೇ ವಂಚಿಸುವ, ದೇವರಿಗೆ ಲಂಚ ಕೊಡುವ ಮನೋಭಾವ ಮಂದಿರ ಮಸೀದಿ ಚರ್ಚುಗಳ ಮುಖ್ಯಸ್ಥರಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಪಾಶ್ಚಾತ್ಯ ಸಂಸ್ಕೃತಿಗಳ ನಾಗರಿಕ ಪ್ರಜ್ಞೆಯನ್ನು ಮರೆಮಾಚಿ ಅವರ ಊಟ ಬಟ್ಟೆ ಕುಡಿತ ಜೂಜು ಅನೈತಿಕ ಸಂಬಂಧಗಳು ದುಂದು ವೆಚ್ಚ ಮುಂತಾದ ಬಾಹ್ಯ ನಡವಳಿಕೆಗಳು ಮಾತ್ರ ಮಾಧ್ಯಮಗಳ ಮುಖಾಂತರ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಹೀಗೆ ವರ್ಗಾಯಿಸಲ್ಪಟ್ಟ ಮನಸ್ಥಿತಿ ಇಡೀ ವ್ಯವಸ್ಥೆಯ ಮೂಲದ್ರವ್ಯವನ್ನೇ ನುಂಗಿ ಮೌಲ್ಯಗಳ ಅಧಃಪತನ ಹೊಂದಿ ಕೇವಲ ಮುಖವಾಡಗಳ ವ್ಯಾವಹಾರಿಕ ಜೀವನವೇ ನಮ್ಮ ಸಮಾಜವಾಗಿದೆ. ಇದನ್ನು ಬದಲಿಸುವುದೇ ನಮ್ಮೆಲ್ಲರ ಮೊದಲ ಆಧ್ಯತೆಯಾಗಿರಲಿ.

ಏಕೆಂದರೆ ಈಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸದೆ ಮೌನವಾಗಿ ಎಲ್ಲವನ್ನೂ ಸಹಿಸಿಕೊಂಡರೆ ಭವಿಷ್ಯದಲ್ಲಿ ನಮ್ಮ ಮಕ್ಕಳ ಬದುಕು ತುಂಬಾ ಕಷ್ಟದ ಹಾದಿಯಾಗುತ್ತದೆ. ಹಾಲು ಕುಡಿಯುವವರೇ ಬದುಕುವುದು ಕಷ್ಟವಾಗಿರುವಾಗ ವಿಷ ಕುಡಿಯುವವರು ಬದುಕಲು ಸಾಧ್ಯವೇ ?

ವೇಗದ ಆಧುನಿಕ ಬದುಕಿನಲ್ಲಿ ಎಲ್ಲವೂ ವ್ಯಾಪರೀಕರಣ ಆಗಿರುವಾಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸಲೇ ಬೇಕು. ಆ ಬಗ್ಗೆ ದಯವಿಟ್ಟು ಗಂಭೀರವಾಗಿ ಯೋಚಿಸಿ ಎಂದು ಮನವಿ ಮಾಡಿಕೊಳ್ಳುತ್ತಾ……,.

Advertisement

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

15 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

15 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

15 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

15 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

1 day ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

1 day ago