Advertisement
ಅನುಕ್ರಮ

ಒಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು ಹುಡುಕುವ ಗುಣ ವರ್ಗಾಯಿಸಲ್ಪಡುತ್ತಿದೆ…! | ವಿವೇಕಾನಂದ ಎಚ್‌ ಕೆ ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ…|

Share

ಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು, ಕೆಟ್ಟ ಕೆಲಸಗಳಲ್ಲಿ ಒಳ್ಳೆಯದನ್ನು ಹುಡುಕುವ ಗುಣ ಜನರಿಂದ ರಾಜಕಾರಣಿಗಳಿಗೆ, ರಾಜಕಾರಣಿಗಳಿಂದ ಮಾಧ್ಯಮಗಳಿಗೆ ವರ್ಗಾಯಿಸಲ್ಪಟ್ಟಿದೆ.

ಪ್ರೀತಿಯಲ್ಲಿ ದ್ವೇಷವನ್ನು, ದ್ವೇಷದಲ್ಲಿ ಪ್ರೀತಿಯನ್ನು ಹುಡುಕುವ ಮನೋಭಾವ ಧಾರವಾಹಿ ಸಿನಿಮಾ ಕಥೆ ಕಾದಂಬರಿಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ನಾಜೂಕಿನ ವಂಚನೆಯನ್ನು,ಕಾನೂನಿನ ನೆರಳಲ್ಲಿ ಅಪರಾಧವನ್ನು, ಅಮಾಯಕರಿಗೆ ಹಿಂಸೆ ಕೊಡುವ ಉಪಾಯಗಳನ್ನು ನ್ಯಾಯಾಲಯಗಳು ಜನರಿಗೆ ವರ್ಗಾಯಿಸಿವೆ.

ಕಲೆಗಳಿಂದ ಜನಪ್ರಿಯತೆಯನ್ನು, ಜನಪ್ರಿಯತೆಯಿಂದ ಸನ್ಮಾನಗಳನ್ನು, ಸನ್ಮಾನಗಳಿಂದ ಪ್ರಶಸ್ತಿಗಳನ್ನು, ಪ್ರಶಸ್ತಿಗಳಿಂದ ಅಧಿಕಾರವನ್ನು, ಅಧಿಕಾರದಿಂದ ಹಣವನ್ನು ಪಡೆಯುವ ಮಾರ್ಗಗಳನ್ನು ಅಕ್ಷರ ಜ್ಞಾನ ಜನರಿಗೆ ವರ್ಗಾಯಿಸಿದೆ.

ತಪ್ಪುಗಳನ್ನು ಸರಿ ಎಂದು, ಸರಿಯನ್ನು ತಪ್ಪೆಂದು,  ನಿಜವನ್ನು ಸುಳ್ಳೆಂದು, ಸುಳ್ಳನ್ನು ನಿಜವೆಂದು, ವಾಸ್ತವವನ್ನು ಭ್ರಮೆ ಎಂದು
ಭ್ರಮೆಯನ್ನು ವಾಸ್ತವ ಎಂದು ನಿರೂಪಿಸುವ ಕಲೆಗಾರಿಕೆ ಸಮೂಹ ಸಂಪರ್ಕ ಮಾಧ್ಯಮಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಕಪಟ ಭಕ್ತಿಯಿಂದ, ಆಡಂಬರ ಪ್ರದರ್ಶನದ ಪೂಜೆಗಳಿಂದ ದೇವರನ್ನೇ ವಂಚಿಸುವ, ದೇವರಿಗೆ ಲಂಚ ಕೊಡುವ ಮನೋಭಾವ ಮಂದಿರ ಮಸೀದಿ ಚರ್ಚುಗಳ ಮುಖ್ಯಸ್ಥರಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಪಾಶ್ಚಾತ್ಯ ಸಂಸ್ಕೃತಿಗಳ ನಾಗರಿಕ ಪ್ರಜ್ಞೆಯನ್ನು ಮರೆಮಾಚಿ ಅವರ ಊಟ ಬಟ್ಟೆ ಕುಡಿತ ಜೂಜು ಅನೈತಿಕ ಸಂಬಂಧಗಳು ದುಂದು ವೆಚ್ಚ ಮುಂತಾದ ಬಾಹ್ಯ ನಡವಳಿಕೆಗಳು ಮಾತ್ರ ಮಾಧ್ಯಮಗಳ ಮುಖಾಂತರ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಹೀಗೆ ವರ್ಗಾಯಿಸಲ್ಪಟ್ಟ ಮನಸ್ಥಿತಿ ಇಡೀ ವ್ಯವಸ್ಥೆಯ ಮೂಲದ್ರವ್ಯವನ್ನೇ ನುಂಗಿ ಮೌಲ್ಯಗಳ ಅಧಃಪತನ ಹೊಂದಿ ಕೇವಲ ಮುಖವಾಡಗಳ ವ್ಯಾವಹಾರಿಕ ಜೀವನವೇ ನಮ್ಮ ಸಮಾಜವಾಗಿದೆ. ಇದನ್ನು ಬದಲಿಸುವುದೇ ನಮ್ಮೆಲ್ಲರ ಮೊದಲ ಆಧ್ಯತೆಯಾಗಿರಲಿ.

ಏಕೆಂದರೆ ಈಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸದೆ ಮೌನವಾಗಿ ಎಲ್ಲವನ್ನೂ ಸಹಿಸಿಕೊಂಡರೆ ಭವಿಷ್ಯದಲ್ಲಿ ನಮ್ಮ ಮಕ್ಕಳ ಬದುಕು ತುಂಬಾ ಕಷ್ಟದ ಹಾದಿಯಾಗುತ್ತದೆ. ಹಾಲು ಕುಡಿಯುವವರೇ ಬದುಕುವುದು ಕಷ್ಟವಾಗಿರುವಾಗ ವಿಷ ಕುಡಿಯುವವರು ಬದುಕಲು ಸಾಧ್ಯವೇ ?

ವೇಗದ ಆಧುನಿಕ ಬದುಕಿನಲ್ಲಿ ಎಲ್ಲವೂ ವ್ಯಾಪರೀಕರಣ ಆಗಿರುವಾಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸಲೇ ಬೇಕು. ಆ ಬಗ್ಗೆ ದಯವಿಟ್ಟು ಗಂಭೀರವಾಗಿ ಯೋಚಿಸಿ ಎಂದು ಮನವಿ ಮಾಡಿಕೊಳ್ಳುತ್ತಾ……,.

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

2 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

4 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

8 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

12 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

22 hours ago