ನಾನು ಕಣ್ರೀ , ನಿಮ್ಮ ದೇವರು,
ಅಯ್ಯೋ, ಹೌದುರೀ, ನಾನೇ,…..
ಅದೇ, ಪ್ರತಿದಿನ – ಪ್ರತಿಕ್ಷಣ ನೀವು ನೆನಪಿಸಿಕೊಳ್ಳೋದಿಲ್ವೇನ್ರೀ,
ಪೂಜೆ ಮಾಡೋದಿಲ್ವೇನ್ರೀ, ಅದೇ,
ಬ್ರಹ್ಮ – ವಿಷ್ಣು – ಮಹೇಶ್ವರ – ಅಲ್ಲಾ – ಜೀಸಸ್ – ಮಾರಮ್ಮ – ಬೀರಮ್ಮ – ಮಾಂಕಾಳಮ್ಮ ಇನ್ನೂ ಇನ್ನೂ ಹೇಳ್ತಾ ಹೋದ್ರೆ ಟೈಂ ಸಾಕಾಗಲ್ಲ…….
ಅಯ್ಯೋ , ನಿಮ್ಮ ವಿವೇಕ ಇದ್ದಾನಲ್ಲ, ಅದೇ Facebook – Watsapp ಗಳಲ್ಲಿ ಬರೆದು ತಲೆತಿಂತಿರ್ತಾನಲ್ಲ ಅವನು ಬಹಳ ಗೋಳಾಡಿ ಕಾಡಿ ಬಿಟ್ಟ. ನೀನು ಬಂದು ಜನಗಳಿಗೆ ಏನಾದರೂ ಹೇಳಿದ್ರೇ ಸರಿ. ಇಲ್ಲಾ ಅಂದ್ರೆ ನೀನು ಇಲ್ಲೇ ಇಲ್ಲ ಅಂತ ಪ್ರಚಾರ ಮಾಡ್ತೀನಿ ಅಂತ ಹೆದರಿಸಿಬಿಟ್ಟ. ಅದಕ್ಕೆ ನಿಮ್ಮ ಮುಂದೆ ಬರಲೇಬೇಕಾಯ್ತು…….
ರೀ, ಸ್ವಾಮಿ, ಮೊದಲು ಇಡೀ ವಿಶ್ವ – ಖಗೋಳ ಅಂದ್ರೆ ಈ ಭೂಮಿ – ಆಕಾಶ – ನಕ್ಷತ್ರಗಳು – ಸೂರ್ಯ – ಚಂದ್ರರು – ಎಲ್ಲಾ ಮೊದಲೇ ಇತ್ತು. ಅದು ಹೇಗೆ ಬಂತು ಅಂತ ನನಗೆ ಗೊತ್ತಿಲ್ಲ, ಅದನ್ನೇ ಸೃಷ್ಟಿ ಅಂತ ಕರೀತಿದ್ರು,
ಈ ಸೃಷ್ಟಿಯೇ ಭೂಮಿಯನ್ನು ಮುಖ್ಯ ಕೇಂದ್ರವಾಗಿಟ್ಟುಕೊಂಡು ಆಕಾಶಕಾಯಗಳನ್ನು ಅದಕ್ಕೆ ಪೂರಕವಾಗಿಟ್ಟು ನೀರು ಗಾಳಿ ಬೆಳಕುಗಳನ್ನು ಉತ್ಪಾದಿಸಿ ಅನೇಕ ರೀತಿಯ ಸಸ್ಯ ಮತ್ತು ಪ್ರಾಣಿ ಜೀವಿಗಳನ್ನು
ಸೃಷ್ಟಿಸಿತು.
ಹೇಗೋ ಕಾಡು ಮೇಡು ಅಲೆದುಕೊಂಡು ಬದುಕುತ್ತಿದ್ದ ಈ ಪ್ರಾಣಿ ಯಾವ ಮಾಯದಲ್ಲೋ ದುರಾಸೆಗೆ ಬಿದ್ದ. ಸೃಷ್ಟಿಯ ಇತರ ಜೀವರಾಶಿಗಳ ಮೇಲೆಯೇ ನಿಯಂತ್ರಣ ಸಾಧಿಸುತ್ತಾ ಕೊನೆಗೆ ಅವನ ಸಂಖ್ಯೆ ಹೆಚ್ಚಾದಂತೆ ಭೂಮಿಯ ಬೇರೆ ಬೇರೆ ಅನುಕೂಲಕರ ವಾತಾವರಣದಲ್ಲಿ ನೆಲೆಸಿ ಅದು ನಿನ್ನದು ಇದು ನನ್ನದು ಎಂದು ಪ್ರದೇಶಗಳನ್ನೇ ಹಂಚಿಕೊಂಡು ಬೇಲಿಯೋ ಕೋಟೆಯೋ ನಿರ್ಮಿಸಿಕೊಂಡ.
ನನ್ನನ್ನು ಕೆಲವು ಮಿತಿಗಳಿಗೆ ಒಳಪಡಿಸಿ ಆದರೆ ಸರ್ವಾಂತರ್ಯಾಮಿಯಾಗಿ ಪರಿವರ್ತಿಸಿ ಎಲ್ಲೂ ಪ್ರತ್ಯಕ್ಷನಾಗದೆ ಆದರೆ ಪರೋಕ್ಷವಾಗಿ ಇಡೀ ಮಾನವ ಸಂಕುಲವನ್ನು ನಿಯಂತ್ರಿಸುವ ಹೊಣೆ ಹೊರಿಸಲಾಯಿತು.
ಓ ಹೋ ನಮ್ಮನ್ನು ನಿಯಂತ್ರಿಸುವ ಒಂದು ಶಕ್ತಿಯಿದೆ ನಾವು ಅದನ್ನು ಗೌರವಿಸಲೇಬೇಕು ಎಂಬ ನಂಬಿಕೆ ಅವರಲ್ಲಿ ಉಂಟಾಯಿತು. ನನ್ನ ಮೊದಲ ಪ್ರಯೋಗ ಯಶಸ್ವಿಯಾಯಿತು.
ನಾನು ಬಹಳ ವರ್ಷಗಳು ಇಡೀ ವ್ಯವಸ್ಥೆಯನ್ನು ಗಮನಿಸಿದೆ. ಸ್ವಲ್ಪ ಲೋಪಗಳಿದ್ದರೂ ಹೇಗೋ ಸಮಾಜ ನಡೆಯುತ್ತಿತ್ತು. ಆದ್ದರಿಂದ ನಾನೇ ಸೃಷ್ಟಿಗೆ ಮನವಿ ಮಾಡಿಕೊಂಡು ಹೇಗೂ ಮನುಷ್ಯರು ಇನ್ನು ಭೂಮಂಡಲವನ್ನು ಕಾಪಾಡಿಕೊಳ್ಳುತ್ತಾರೆ. ನಾನು ಇಲ್ಲಿದ್ದು ಪ್ರಯೋಜನವಿಲ್ಲ. ಅವಶ್ಯಕತೆ ಬಂದಾಗ ಮತ್ತೆ ಬಂದರಾಯಿತು ಎಂದು ಹೇಳಿ ಪುನಃ ಸೃಷ್ಟಿಯಲ್ಲಿ ಐಕ್ಯನಾದೆ.
ಯಪ್ಪಾ ಯಪ್ಪಾ ಯಪ್ಪಾ ಎಂತ ಕಿರಾತಕರಯ್ಯ ನೀವು. ನಾನೇ ಭಯ ಪಡಿಸಿದ ವಿಷಯಗಳನ್ನೇ ಇಟ್ಟುಕೊಂಡು ಜನರನ್ನು ನಂಬಿಸಿ ಜೀವನ ಸಾಗಿಸುತ್ತಿದ್ದವರು ಈಗ ಅದೇ ದೇವರು ಧರ್ಮದ ಹೆಸರೇಳಿ ನಿಮ್ಮ ಸ್ವಾರ್ಥಕ್ಕಾಗಿ ಇಡೀ ಭೂಮಂಡಲವನ್ನೇ ವಿನಾಶದ ಅಂಚಿಗೆ ತಂದು ನಿಲ್ಲಿಸಿದ್ದೀರಿ. ಧರ್ಮದ ಹೆಸರಿನಲ್ಲಿ ಯುದ್ಧ ಮಾಡುತ್ತಿರುವಿರಿ.
ನಾನೀಗ ಮತ್ತೆ ಬಂದಿದ್ದೇನೆ. ಇನ್ನು ನಿಮ್ಮ ಆಟ ನಡೆಯುವುದಿಲ್ಲ. ಯಾವ ಶಿವ ಅಲ್ಲಾ ಜೀಸಸ್ ಯಾರೂ ಇಲ್ಲ.ಇರುವುದು ಸೃಷ್ಟಿ ಮಾತ್ರ.
ಮರ್ಯಾದೆಯಿಂದ ಮನುಷ್ಯರಾಗಿ ಬದುಕಿ. ಈ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಅದು ಇದು ಸುಡುಗಾಡು ಎಲ್ಲಾ ಬಿಟ್ಟಾಕಿ.
ಇಲ್ಲದಿದ್ದರೆ ನಿಮ್ಮ ಜಾಗದಲ್ಲಿ ಕತ್ತೆಗಳಿಗೆ ಯೋಚಿಸುವ ಶಕ್ತಿ ಕೊಟ್ಟು ಮನುಷ್ಯ ಪ್ರಾಣಿಯನ್ನು ಕತ್ತೆಗಳಾಗಿ ಮಾರ್ಪಡಿಸಲಾಗುತ್ತದೆ ಎಚ್ಚರ.
# ವಿವೇಕಾನಂದ ಎಚ್ ಕೆ
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…