ಮನಸ್ಸಿನ ಕನ್ನಡಿಯಲ್ಲಿ ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…. | ಜಾತಿ-ಧರ್ಮದ ಅಮಲಿನಲ್ಲಿ ಗೌಣವಾಗುತ್ತಿರುವ ಅನ್ನದಾತ |

October 5, 2021
9:22 AM

ಜಾತಿ ಧರ್ಮದ ಅಮಲಿನಲ್ಲಿ ಗೌಣವಾಗುತ್ತಿರುವ ಅನ್ನದಾತ……….. , ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗುತ್ತಿರುವ ಆಕ್ರಮಣಕಾರಿ ನೀತಿಗಳು………, ಇಡೀ ವ್ಯವಸ್ಥೆಯನ್ನು ವಿರುದ್ಧ ದಿಕ್ಕಿನಲ್ಲಿ ಮುನ್ನಡೆಸುವ ದ್ವೇಷಮಯ ನೀತಿಗಳು ಎಲ್ಲಾ ಕಾಲಕ್ಕೂ ಸಮಾಜಕ್ಕೆ ಮಾರಕವೇ…… , ಬಹುಮತವೇ ಆಡಳಿತ ನಡೆಸುವ ಮಾನದಂಡವಾಗಬಾರದು. ಬಹುಮತ ಅಧಿಕಾರಕ್ಕೇರಲು ಒಂದು ಸಾಧನ ಮಾತ್ರ……

Advertisement
Advertisement

ಇತಿಹಾಸ, ಸಂಸ್ಕೃತಿ, ಸಂಪ್ರದಾಯ, ಬದಲಾಗುತ್ತಿರುವ ಸನ್ನಿವೇಶ, ವಾಸ್ತವ ಪ್ರಜ್ಞೆ ಮತ್ತು ದೇಶ – ಜನರ ಹಿತಾಸಕ್ತಿ ಆಡಳಿತಗಾರ ಬಹುಮುಖ್ಯ ಗುರಿಯಾಗಿರಬೇಕು.

ಹಠ, ಸರ್ವಾಧಿಕಾರಿ, ಚುನಾವಣೆ ಗೆಲ್ಲುವ ತಂತ್ರಗಾರಿಕೆ ಮುಖ್ಯವಾಗದೆ ತಾಳ್ಮೆ ಕ್ಷಮಾಗುಣ ಎಲ್ಲರನ್ನೂ ಪ್ರೀತಿಸುವ ಮನೋಭಾವ ತಮ್ಮ ನೀತಿಯಾಗಬೇಕು.

ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಹರಿದ ವಾಹನ ಮತ್ತು ತದನಂತರ ಅವರ ಮೇಲೆ ಮಾಡಿದ ಹಲ್ಲೆ ನಿಧಾನವಾಗಿ ಭುಗಿಲೇಳುತ್ತಿರುವ ಅಸಹನೆಯ ಸಂಕೇತವಾಗಿ ಗೋಚರಿಸುತ್ತಿದೆ.

ವಿರೋಧ ಪಕ್ಷಗಳಿಗಿಂತ ಹತ್ತು ಪಟ್ಟು ಹೆಚ್ಚು ಜವಾಬ್ದಾರಿ ಆಡಳಿತ ಮಾಡುವವರಿಗೆ ಇರಬೇಕು.

Advertisement

ದೇಶವೆಂಬುದು ಕುಟುಂಬದ ವಿಸೃತ ರೂಪ. ಅನೇಕ ಕುಟುಂಬಗಳೇ ಸಮಾಜ. ಸಮಾಜದ ಪ್ರತಿನಿಧಿಗಳೇ ಸರ್ಕಾರ. ಅದು ಎಲ್ಲರಿಗೂ ಸೇರಿದ್ದು. ಯಾವುದೋ ಒಂದು ಪಕ್ಷದ ಆಸ್ತಿಯಲ್ಲ.

ಕಾಂಗ್ರೆಸ್ ಬಿಜೆಪಿನ್ನು ದ್ವೇಷಿಸುವುದು, ಬಿಜೆಪಿ ಕಮ್ಯುನಿಸ್ಟರನ್ನು ದ್ವೇಷಿಸುವುದು ಹೀಗೆ ಒಬ್ಬರಿಗೊಬ್ಬರು ದ್ವೇಷಿಸಿದರೆ ಆಯಾ ಪಕ್ಷಗಳಿಗೆ ಲಾಭ ಆದರೆ ಅದೇ ಸಮಯದಲ್ಲಿ ಇಡೀ ದೇಶ ಈ ದ್ವೇಷದಿಂದ ಹಾಳುಗುತ್ತಿದೆ ಎನ್ನುವ ಯೋಚನೆ ಮತ್ತು ಜವಾಬ್ದಾರಿ ಈ ಪಕ್ಷಗಳಿಗೆ ಇರುವುದಿಲ್ಲ. ಅದರ ಪರಿಣಾಮವೇ ಈ ಹಿಂಸಾಚಾರಗಳು.

ಕೊರೊನಾದಿಂದ ಇನ್ನೂ ಚೇತರಿಸಿಕೊಳ್ಳಲೇ ಒದ್ದಾಡುತ್ತಿರುವಾಗ ಆಡಳಿತಗಾರರು ಅತ್ಯಂತ ವಿವೇಚನೆ ತಾಳ್ಮೆ ಪ್ರೀತಿಯಿಂದ ಆಡಳಿತ ಮಾಡಬೇಕಾದ ಸಂದರ್ಭದಲ್ಲಿ ಈ ರೀತಿಯ ಪ್ರಚೋದನಕಾರಿ ಕ್ರಿಯೆಗಳು ಇಡೀ ದೇಶದ ಜನರ ಮಾನಸಿಕ ಆರೋಗ್ಯವನ್ನೇ ಹಾಳು ಮಾಡುವ ಸಾಧ್ಯತೆ ಇದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ,
ಚುನಾವಣಾ ರಾಜಕೀಯದಲ್ಲಿ,
ಪಕ್ಷಗಳ ಅಧಿಕಾರದ ದುರಾಸೆಯಲ್ಲಿ,
ಜಾತಿಗಳ ನೆರಳಿನಲ್ಲಿ,
ಧರ್ಮಗಳ ಅಮಲಿನಲ್ಲಿ,
ಅನ್ನದಾತರು ಗೌಣವಾಗುತ್ತಿರುವ ಸಂದರ್ಭದಲ್ಲಿ………

ಮೌನ ಮುರಿಯಬೇಕಾದದ್ದು ಎಲ್ಲರ ಕರ್ತವ್ಯ.

Advertisement

ಪೀಜಾ ಬರ್ಗರ್ ಗಳು ದುಬಾರಿಯಾಗುತ್ತಿವೆ,
ಲಿಪ್ ಸ್ಟಿಕ್ ಶೂಗಳು ಕೊಸರು ಮುಕ್ತವಾಗುತ್ತಿವೆ,
ಸೈಟು ಚಿನ್ನಗಳು ಭ್ರಷ್ಟತೆಯ ಕೂಪಗಳಾಗುತ್ತಿವೆ,
ಶಾಲೆ ಆಸ್ಪತ್ರೆಗಳು ದಂಧೆಗಳಾಗುತ್ತಿವೆ,

ತಿನ್ನುವ ಅನ್ನ ಬೆಳೆವ ರೈತರು ಮಾತ್ರ ಬೀದಿಯ ಹೆಣವಾಗುತ್ತಿದ್ದಾರೆ…….

ಇದೀಗ ಅನ್ನ ತಿನ್ನುವ, ದೇಶ ಪ್ರೀತಿಸುವ, ಜನರನ್ನು ಇಷ್ಟಪಡುವ ಎಲ್ಲರ ಕರ್ತವ್ಯ ಎಂದರೆ,
ಆಡಳಿತಗಾರರನ್ನು ಎಚ್ಚರಿಸುವ, ಹಠಕ್ಕಿಂತ ತಾಳ್ಮೆಗೆ ಮಹತ್ವ ಕೊಡುವ, ದ್ವೇಷಕ್ಕಿಂತ ಪ್ರೀತಿಗೆ ಪ್ರಾಮುಖ್ಯತೆ ನೀಡುವ, ಘರ್ಷಣೆಗಿಂತ ಸಹನೀಯ ವಾತಾವರಣ ನಿರ್ಮಿಸುವ ಒತ್ತಡವನ್ನು ಹಾಕಬೇಕಿದೆ.

ದೇಶ ವಿಭಜಕ ಶಕ್ತಿಗಳು ಇಡೀ ಘಟನಾವಳಿಗಳನ್ನು ದೇಶದ ಒಳಗೆ ಮತ್ತು ಹೊರಗೆ ತದೇಕಚಿತ್ತದಿಂದ ಗಮನಿಸುತ್ತಾ ಅದರ ಲಾಭ ಪಡೆಯಲು ಹೊಂಚು ಹಾಕುತ್ತಾ ಕಾಯುತ್ತಿರುತ್ತವೆ ಎಂಬ ಪ್ರಜ್ಞೆಯನ್ನು ಭಾರತೀಯ ಪ್ರಜೆಗಳಾದ, ಎಲ್ಲಾ ಪಕ್ಷ ಸಿದ್ದಾಂತಗಳ ಮತದಾರರಾದ ನಾವುಗಳು ಸದಾ ನೆನಪಿನಲ್ಲಿ ಇಟ್ಟುಕೊಂಡಿರಬೇಕು. ಇಲ್ಲದಿದ್ದರೆ ಇದೇ ರೀತಿ ಕಚ್ಚಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ……

ಅಲೆಗ್ಸಾಂಡರ್, ಘಜ್ನಿ ಘೋರಿ ಮಹಮದ್, ಬ್ರಿಟಿಷ್ ಫ್ರೆಂಚ್ ಡಚ್ಚರ ರೀತಿಯಲ್ಲಿ ಮತ್ಯಾರೋ‌ ಈ ದೇಶಕ್ಕೆ ನುಗ್ಗಬಹುದು. ಆಗ ಅದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುವುದು ಕಾಂಗ್ರೆಸ್, ಬಿಜೆಪಿ, ಕಮ್ಯುನಿಸ್ಟರಲ್ಲ ಸಾಮಾನ್ಯ ಜನ ಎಂದು ಎಚ್ವರಿಸುತ್ತಾ…..

Advertisement

ಸಂವಿಧಾನದ ಮೂಲ ಪೀಠಿಕೆಯನ್ನು ಉಲ್ಲೇಖಿಸುತ್ತಾ……

” ಭಾರತೀಯ ಪ್ರಜೆಗಳಾದ ನಾವು…………..”

# ವಿವೇಕಾನಂದ ಎಚ್‌ ಕೆ

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

ಇದನ್ನೂ ಓದಿ

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?
June 22, 2025
7:00 AM
by: ನಾ.ಕಾರಂತ ಪೆರಾಜೆ
ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್
June 21, 2025
7:00 AM
by: ದಿವ್ಯ ಮಹೇಶ್
ಸಸ್ಯ ಪರಿಚಯ | ಕರ್ಲೆಂಕಿ
June 20, 2025
11:18 PM
by: ಜಯಲಕ್ಷ್ಮಿ ದಾಮ್ಲೆ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group