ಮನಸ್ಸಿನ ಕನ್ನಡಿಯಲ್ಲಿ ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…| ಬಂದ್ ಗಳಿಗಿಂತಲೂ ಜನಜಾಗೃತಿ ಇಂದಿನ ಅತ್ಯವಶ್ಯಕ ಅಗತ್ಯ |

September 28, 2021
9:26 AM

ನನ್ನ ಬೆಂಬಲ ಇವರುಗಳಿಗಾಗಿ………ನೀವೂ ಸಹ ಒಮ್ಮೆ ಯೋಚಿಸಿ…..

Advertisement
Advertisement
Advertisement
Advertisement
Advertisement

ಬಂದ್ ಗಳಿಗಿಂತಲೂ ಜನ ಜಾಗೃತಿ ಇಂದಿನ ಅತ್ಯವಶ್ಯಕ ಅಗತ್ಯ………

Advertisement
ಅದಕ್ಕಾಗಿಯೇ…….

ಭಾರತ್ ಬಂದ್ ಅನ್ನೂ ಬೆಂಬಲಿಸುವುದಿಲ್ಲ,
ನರೇಂದ್ರ ಮೋದಿಯನ್ನೂ ಬೆಂಬಲಿಸುವುದಿಲ್ಲ,
ಇವುಗಳನ್ನು ಬೆಂಬಲಿಸಲು ಕೋಟ್ಯಾನುಕೋಟಿ ಜನರಿದ್ದಾರೆ………

Advertisement

ಜೈಕಾರಗಳನ್ನೂ ಬೆಂಬಲಿಸುವುದಿಲ್ಲ,
ಧಿಕ್ಕಾರಗಳನ್ನೂ ಬೆಂಬಲಿಸುವುದಿಲ್ಲ,
ಬಲಪಂಥವನ್ನೂ ಬೆಂಬಲಿಸುವುದಿಲ್ಲ,
ಎಡಪಂಥವನ್ನೂ ಬೆಂಬಲಿಸುವುದಿಲ್ಲ,

ಇವುಗಳನ್ನು ಉಳಿಸಲು ಕೋಟ್ಯಾನುಕೋಟಿ ಹೋರಾಟಗಾರರಿದ್ದಾರೆ…………

Advertisement

ಯಾವ ಧರ್ಮವನ್ನೂ ಬೆಂಬಲಿಸುವುದಿಲ್ಲ,
ಯಾವ ದೇವರನ್ನೂ ಬೆಂಬಲಿಸುವುದಿಲ್ಲ,
ಯಾವ ಗ್ರಂಥವನ್ನೂ ಬೆಂಬಲಿಸುವುದಿಲ್ಲ,
ಯಾವ ಸಿದ್ಧಾಂತವನ್ನೂ ಬೆಂಬಲಿಸುವುದಿಲ್ಲ
ಇವುಗಳನ್ನು ರಕ್ಷಿಸಲೂ ಕೋಟ್ಯಾನುಕೋಟಿ ಭಕ್ತರಿದ್ದಾರೆ.

ಆದರೆ ನನ್ನ ಬೆಂಬಲ,…….

Advertisement

ಅಗೋ ಅಲ್ಲಿ ನೋಡಿ ನನ್ನ ಪುಟ್ಟ ಕಂದ ಸಮೋಸ ತಿನ್ನಲು ಕಾಸಿಲ್ಲದೆ ಬಾಯಲ್ಲಿ ಜೊಲ್ಲು ಸುರಿಸುತ್ತಾ ಆಸೆ ಕಣ್ಣುಗಳಿಂದ ನೋಡುತ್ತಾ ಬೇಕರಿಯ ಮುಂದೆ ನಿಂತಿದೆ. ಅದರ ಆಸೆ ಪೂರೈಸುವವರಿಗೆ ನನ್ನ ಬೆಂಬಲ……

ಚಳಿಗೆ ಮುದುಡಿ ಬೀದಿಯಲ್ಲಿ ಮಲಗಿದ ನನ್ನ ತಾತನಿಗೆ ಕಂಬಳಿ ಹೊದಿಸಿ ಬಿಸಿ ಕಾಫಿ ಕುಡಿಸುವವರಿಗೆ ನನ್ನ ಬೆಂಬಲ…….

Advertisement

ಹಳೆಯ ನೋಟಾದರೂ ಸಿಗಲಿ ಎಂದು ತನ್ನ ದೇಹ ಮಾರಿ ಕೆನ್ನೆ ಕಚ್ಚಿಸಿಕೊಂಡು ರಕ್ತ ಒರೆಸಿಕೊಳ್ಳುತ್ತಿರುವ ನನ್ನ ತಂಗಿಗೆ ಬಾಳು ಕೊಡುವವರಿಗೆ ನನ್ನ ಬೆಂಬಲ…….

ಹತ್ತು ವರ್ಷಗಳಿಂದಲೂ ಕೊನೆಗಾಲಕ್ಕೆ ಇರಲೆಂದು ಕೂಡಿಟ್ಟಿದ್ದ ನೂರರ 50 ನೋಟಿಡಿದು ಇನ್ನು ನನ್ನ ಅಂತ್ಯ ಸಮೀಪಿಸಿತು ಹಣವಿಲ್ಲದ ನಾನು ಹೆಣಕ್ಕೆ ಸಮಾನ ಎಂದು ಸಾವಿನ ನಿರೀಕ್ಷೆಯಲ್ಲಿ ಚಿಂತಾಕ್ರಾಂತಳಾದ ನನ್ನ ಅಜ್ಜಿಗೆ ಧೈರ್ಯ ಹೇಳಿ ನಾನಿದ್ದೇನೆಂದು ತಬ್ಬಿ ಸಮಾಧಾನ ಮಾಡುವವರಿಗೆ ನನ್ನ ಬೆಂಬಲ…..

Advertisement

ರೇಪ್ ಮಾಡಿದವನನ್ನು ಕತ್ತರಿಸುವವರಿಗಿಂತ ಅತ್ಯಾಚಾರಕ್ಕೆ ಒಳಗಾದ ನನ್ನ ಅಕ್ಕನ ನೋವಿಗೆ ಸ್ಪಂದಿಸಿ ಆಕೆಯ ಜೀವನಕ್ಕೆ ಆಧಾರವಾಗುವ ಮನಸುಗಳಿಗೆ ನನ್ನ ಬೆಂಬಲ……

ಅಕ್ಷರಗಳಲ್ಲಿ ಮಹಲುಗಳನ್ನು ಕಟ್ಟಿ, ಭಾವನೆಗಳಲ್ಲಿ ತೇಲಿ ಮೇರಾ ಭಾರತ್ ಮಹಾನ್ ಎನ್ನುವವರಿಗಿಂತ ತನ್ನ ಜೊತೆಗಾರರ ಸ್ನೇಹಿತರ ಕಷ್ಟಗಳಿಗೆ ಹೆಗಲಾಗುವ, ಅವರಿಗೆ ನಾವಿದ್ದೇವೆ ಎಂದು ಆತ್ಮವಿಶ್ವಾಸ ತುಂಬುವ ಮನುಜರಿಗೆ ನನ್ನ ಬೆಂಬಲ……

Advertisement

ಯಾವ ಕಾನೂನು ಬಂದರೂ ಅದರೊಳಗೆ ನುಸುಳಿ ತಮಗೆ ಅನುಕೂಲವಾಗುವಂತೆ ಅರ್ಥೈಸಿ ಈಗಾಗಲೇ ಇರುವ ಹಿಡಿತದಿಂದ ಅದರ ಮೇಲೆ ಸವಾರಿ ಮಾಡಿ ಬೇರೆ ರೀತಿ ಅದೇ ದಂಧೆಗೆ ಇಳಿಯುವವರಿಗಿಂತ,
ಆ ಕಾನೂನಿನಿಂದ ಬದುಕು ಕಳೆದುಕೊಳ್ಳುವವರಿಗೆ ಆಶ್ರಯವಾಗುವ ಆತ್ಮಗಳಿಗೆ ನನ್ನ ಬೆಂಬಲ…….

ಏಕೆಂದರೆ,
ಫಲಿತಾಂಶ ಮತ್ತು ಜನಪ್ರಿಯತೆಯ ಬಾಲದ ಹಿಂದೆ ಓಡಲು ನಾನು ಕುದುರೆ ವ್ಯಾಪಾರಿಯಲ್ಲ. ಬದುಕಿನ ಅರ್ಥ ಹುಡುಕ ಹೊರಟ ಜೀವಕೋಶಗಳ ರಾಶಿ…..

Advertisement

ಸಮಾಜದ ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ನಗು ನೋಡುವವರೆಗೂ ಪ್ರತಿ ಕ್ಷಣವೂ ಆಕ್ರೋಶದ ಕ್ಷಣವೇ……..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಕಟ್ಲೇಟ್
March 6, 2025
11:27 AM
by: ದಿವ್ಯ ಮಹೇಶ್
ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು
March 6, 2025
10:23 AM
by: ಡಾ.ಚಂದ್ರಶೇಖರ ದಾಮ್ಲೆ
ಕುಂಭಸ್ನಾನ ಮತ್ತು ವಿಜ್ಞಾನ
February 27, 2025
9:25 PM
by: ಡಾ.ಚಂದ್ರಶೇಖರ ದಾಮ್ಲೆ
“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…
February 26, 2025
8:21 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror