(ಸಾಂದರ್ಭಿಕ ಚಿತ್ರ)
ನನ್ನ ಬೆಂಬಲ ಇವರುಗಳಿಗಾಗಿ………ನೀವೂ ಸಹ ಒಮ್ಮೆ ಯೋಚಿಸಿ…..
ಬಂದ್ ಗಳಿಗಿಂತಲೂ ಜನ ಜಾಗೃತಿ ಇಂದಿನ ಅತ್ಯವಶ್ಯಕ ಅಗತ್ಯ………
ಅದಕ್ಕಾಗಿಯೇ…….ಭಾರತ್ ಬಂದ್ ಅನ್ನೂ ಬೆಂಬಲಿಸುವುದಿಲ್ಲ,
ನರೇಂದ್ರ ಮೋದಿಯನ್ನೂ ಬೆಂಬಲಿಸುವುದಿಲ್ಲ,
ಇವುಗಳನ್ನು ಬೆಂಬಲಿಸಲು ಕೋಟ್ಯಾನುಕೋಟಿ ಜನರಿದ್ದಾರೆ………
ಇವುಗಳನ್ನು ಉಳಿಸಲು ಕೋಟ್ಯಾನುಕೋಟಿ ಹೋರಾಟಗಾರರಿದ್ದಾರೆ…………
ಯಾವ ಧರ್ಮವನ್ನೂ ಬೆಂಬಲಿಸುವುದಿಲ್ಲ,ಆದರೆ ನನ್ನ ಬೆಂಬಲ,…….
ಅಗೋ ಅಲ್ಲಿ ನೋಡಿ ನನ್ನ ಪುಟ್ಟ ಕಂದ ಸಮೋಸ ತಿನ್ನಲು ಕಾಸಿಲ್ಲದೆ ಬಾಯಲ್ಲಿ ಜೊಲ್ಲು ಸುರಿಸುತ್ತಾ ಆಸೆ ಕಣ್ಣುಗಳಿಂದ ನೋಡುತ್ತಾ ಬೇಕರಿಯ ಮುಂದೆ ನಿಂತಿದೆ. ಅದರ ಆಸೆ ಪೂರೈಸುವವರಿಗೆ ನನ್ನ ಬೆಂಬಲ……
ಚಳಿಗೆ ಮುದುಡಿ ಬೀದಿಯಲ್ಲಿ ಮಲಗಿದ ನನ್ನ ತಾತನಿಗೆ ಕಂಬಳಿ ಹೊದಿಸಿ ಬಿಸಿ ಕಾಫಿ ಕುಡಿಸುವವರಿಗೆ ನನ್ನ ಬೆಂಬಲ…….
ಹಳೆಯ ನೋಟಾದರೂ ಸಿಗಲಿ ಎಂದು ತನ್ನ ದೇಹ ಮಾರಿ ಕೆನ್ನೆ ಕಚ್ಚಿಸಿಕೊಂಡು ರಕ್ತ ಒರೆಸಿಕೊಳ್ಳುತ್ತಿರುವ ನನ್ನ ತಂಗಿಗೆ ಬಾಳು ಕೊಡುವವರಿಗೆ ನನ್ನ ಬೆಂಬಲ…….
ಹತ್ತು ವರ್ಷಗಳಿಂದಲೂ ಕೊನೆಗಾಲಕ್ಕೆ ಇರಲೆಂದು ಕೂಡಿಟ್ಟಿದ್ದ ನೂರರ 50 ನೋಟಿಡಿದು ಇನ್ನು ನನ್ನ ಅಂತ್ಯ ಸಮೀಪಿಸಿತು ಹಣವಿಲ್ಲದ ನಾನು ಹೆಣಕ್ಕೆ ಸಮಾನ ಎಂದು ಸಾವಿನ ನಿರೀಕ್ಷೆಯಲ್ಲಿ ಚಿಂತಾಕ್ರಾಂತಳಾದ ನನ್ನ ಅಜ್ಜಿಗೆ ಧೈರ್ಯ ಹೇಳಿ ನಾನಿದ್ದೇನೆಂದು ತಬ್ಬಿ ಸಮಾಧಾನ ಮಾಡುವವರಿಗೆ ನನ್ನ ಬೆಂಬಲ…..
ರೇಪ್ ಮಾಡಿದವನನ್ನು ಕತ್ತರಿಸುವವರಿಗಿಂತ ಅತ್ಯಾಚಾರಕ್ಕೆ ಒಳಗಾದ ನನ್ನ ಅಕ್ಕನ ನೋವಿಗೆ ಸ್ಪಂದಿಸಿ ಆಕೆಯ ಜೀವನಕ್ಕೆ ಆಧಾರವಾಗುವ ಮನಸುಗಳಿಗೆ ನನ್ನ ಬೆಂಬಲ……
ಅಕ್ಷರಗಳಲ್ಲಿ ಮಹಲುಗಳನ್ನು ಕಟ್ಟಿ, ಭಾವನೆಗಳಲ್ಲಿ ತೇಲಿ ಮೇರಾ ಭಾರತ್ ಮಹಾನ್ ಎನ್ನುವವರಿಗಿಂತ ತನ್ನ ಜೊತೆಗಾರರ ಸ್ನೇಹಿತರ ಕಷ್ಟಗಳಿಗೆ ಹೆಗಲಾಗುವ, ಅವರಿಗೆ ನಾವಿದ್ದೇವೆ ಎಂದು ಆತ್ಮವಿಶ್ವಾಸ ತುಂಬುವ ಮನುಜರಿಗೆ ನನ್ನ ಬೆಂಬಲ……
ಯಾವ ಕಾನೂನು ಬಂದರೂ ಅದರೊಳಗೆ ನುಸುಳಿ ತಮಗೆ ಅನುಕೂಲವಾಗುವಂತೆ ಅರ್ಥೈಸಿ ಈಗಾಗಲೇ ಇರುವ ಹಿಡಿತದಿಂದ ಅದರ ಮೇಲೆ ಸವಾರಿ ಮಾಡಿ ಬೇರೆ ರೀತಿ ಅದೇ ದಂಧೆಗೆ ಇಳಿಯುವವರಿಗಿಂತ,
ಆ ಕಾನೂನಿನಿಂದ ಬದುಕು ಕಳೆದುಕೊಳ್ಳುವವರಿಗೆ ಆಶ್ರಯವಾಗುವ ಆತ್ಮಗಳಿಗೆ ನನ್ನ ಬೆಂಬಲ…….
ಏಕೆಂದರೆ,
ಫಲಿತಾಂಶ ಮತ್ತು ಜನಪ್ರಿಯತೆಯ ಬಾಲದ ಹಿಂದೆ ಓಡಲು ನಾನು ಕುದುರೆ ವ್ಯಾಪಾರಿಯಲ್ಲ. ಬದುಕಿನ ಅರ್ಥ ಹುಡುಕ ಹೊರಟ ಜೀವಕೋಶಗಳ ರಾಶಿ…..
ಸಮಾಜದ ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ನಗು ನೋಡುವವರೆಗೂ ಪ್ರತಿ ಕ್ಷಣವೂ ಆಕ್ರೋಶದ ಕ್ಷಣವೇ……..
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…