Advertisement
ಅನುಕ್ರಮ

ಮನಸ್ಸಿನ ಕನ್ನಡಿಯಲ್ಲಿ ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…| ಬಂದ್ ಗಳಿಗಿಂತಲೂ ಜನಜಾಗೃತಿ ಇಂದಿನ ಅತ್ಯವಶ್ಯಕ ಅಗತ್ಯ |

Share

ನನ್ನ ಬೆಂಬಲ ಇವರುಗಳಿಗಾಗಿ………ನೀವೂ ಸಹ ಒಮ್ಮೆ ಯೋಚಿಸಿ…..

ಬಂದ್ ಗಳಿಗಿಂತಲೂ ಜನ ಜಾಗೃತಿ ಇಂದಿನ ಅತ್ಯವಶ್ಯಕ ಅಗತ್ಯ………

ಅದಕ್ಕಾಗಿಯೇ…….

ಭಾರತ್ ಬಂದ್ ಅನ್ನೂ ಬೆಂಬಲಿಸುವುದಿಲ್ಲ,
ನರೇಂದ್ರ ಮೋದಿಯನ್ನೂ ಬೆಂಬಲಿಸುವುದಿಲ್ಲ,
ಇವುಗಳನ್ನು ಬೆಂಬಲಿಸಲು ಕೋಟ್ಯಾನುಕೋಟಿ ಜನರಿದ್ದಾರೆ………

ಜೈಕಾರಗಳನ್ನೂ ಬೆಂಬಲಿಸುವುದಿಲ್ಲ,
ಧಿಕ್ಕಾರಗಳನ್ನೂ ಬೆಂಬಲಿಸುವುದಿಲ್ಲ,
ಬಲಪಂಥವನ್ನೂ ಬೆಂಬಲಿಸುವುದಿಲ್ಲ,
ಎಡಪಂಥವನ್ನೂ ಬೆಂಬಲಿಸುವುದಿಲ್ಲ,

ಇವುಗಳನ್ನು ಉಳಿಸಲು ಕೋಟ್ಯಾನುಕೋಟಿ ಹೋರಾಟಗಾರರಿದ್ದಾರೆ…………

ಯಾವ ಧರ್ಮವನ್ನೂ ಬೆಂಬಲಿಸುವುದಿಲ್ಲ,
ಯಾವ ದೇವರನ್ನೂ ಬೆಂಬಲಿಸುವುದಿಲ್ಲ,
ಯಾವ ಗ್ರಂಥವನ್ನೂ ಬೆಂಬಲಿಸುವುದಿಲ್ಲ,
ಯಾವ ಸಿದ್ಧಾಂತವನ್ನೂ ಬೆಂಬಲಿಸುವುದಿಲ್ಲ
ಇವುಗಳನ್ನು ರಕ್ಷಿಸಲೂ ಕೋಟ್ಯಾನುಕೋಟಿ ಭಕ್ತರಿದ್ದಾರೆ.

ಆದರೆ ನನ್ನ ಬೆಂಬಲ,…….

ಅಗೋ ಅಲ್ಲಿ ನೋಡಿ ನನ್ನ ಪುಟ್ಟ ಕಂದ ಸಮೋಸ ತಿನ್ನಲು ಕಾಸಿಲ್ಲದೆ ಬಾಯಲ್ಲಿ ಜೊಲ್ಲು ಸುರಿಸುತ್ತಾ ಆಸೆ ಕಣ್ಣುಗಳಿಂದ ನೋಡುತ್ತಾ ಬೇಕರಿಯ ಮುಂದೆ ನಿಂತಿದೆ. ಅದರ ಆಸೆ ಪೂರೈಸುವವರಿಗೆ ನನ್ನ ಬೆಂಬಲ……

ಚಳಿಗೆ ಮುದುಡಿ ಬೀದಿಯಲ್ಲಿ ಮಲಗಿದ ನನ್ನ ತಾತನಿಗೆ ಕಂಬಳಿ ಹೊದಿಸಿ ಬಿಸಿ ಕಾಫಿ ಕುಡಿಸುವವರಿಗೆ ನನ್ನ ಬೆಂಬಲ…….

ಹಳೆಯ ನೋಟಾದರೂ ಸಿಗಲಿ ಎಂದು ತನ್ನ ದೇಹ ಮಾರಿ ಕೆನ್ನೆ ಕಚ್ಚಿಸಿಕೊಂಡು ರಕ್ತ ಒರೆಸಿಕೊಳ್ಳುತ್ತಿರುವ ನನ್ನ ತಂಗಿಗೆ ಬಾಳು ಕೊಡುವವರಿಗೆ ನನ್ನ ಬೆಂಬಲ…….

ಹತ್ತು ವರ್ಷಗಳಿಂದಲೂ ಕೊನೆಗಾಲಕ್ಕೆ ಇರಲೆಂದು ಕೂಡಿಟ್ಟಿದ್ದ ನೂರರ 50 ನೋಟಿಡಿದು ಇನ್ನು ನನ್ನ ಅಂತ್ಯ ಸಮೀಪಿಸಿತು ಹಣವಿಲ್ಲದ ನಾನು ಹೆಣಕ್ಕೆ ಸಮಾನ ಎಂದು ಸಾವಿನ ನಿರೀಕ್ಷೆಯಲ್ಲಿ ಚಿಂತಾಕ್ರಾಂತಳಾದ ನನ್ನ ಅಜ್ಜಿಗೆ ಧೈರ್ಯ ಹೇಳಿ ನಾನಿದ್ದೇನೆಂದು ತಬ್ಬಿ ಸಮಾಧಾನ ಮಾಡುವವರಿಗೆ ನನ್ನ ಬೆಂಬಲ…..

ರೇಪ್ ಮಾಡಿದವನನ್ನು ಕತ್ತರಿಸುವವರಿಗಿಂತ ಅತ್ಯಾಚಾರಕ್ಕೆ ಒಳಗಾದ ನನ್ನ ಅಕ್ಕನ ನೋವಿಗೆ ಸ್ಪಂದಿಸಿ ಆಕೆಯ ಜೀವನಕ್ಕೆ ಆಧಾರವಾಗುವ ಮನಸುಗಳಿಗೆ ನನ್ನ ಬೆಂಬಲ……

ಅಕ್ಷರಗಳಲ್ಲಿ ಮಹಲುಗಳನ್ನು ಕಟ್ಟಿ, ಭಾವನೆಗಳಲ್ಲಿ ತೇಲಿ ಮೇರಾ ಭಾರತ್ ಮಹಾನ್ ಎನ್ನುವವರಿಗಿಂತ ತನ್ನ ಜೊತೆಗಾರರ ಸ್ನೇಹಿತರ ಕಷ್ಟಗಳಿಗೆ ಹೆಗಲಾಗುವ, ಅವರಿಗೆ ನಾವಿದ್ದೇವೆ ಎಂದು ಆತ್ಮವಿಶ್ವಾಸ ತುಂಬುವ ಮನುಜರಿಗೆ ನನ್ನ ಬೆಂಬಲ……

ಯಾವ ಕಾನೂನು ಬಂದರೂ ಅದರೊಳಗೆ ನುಸುಳಿ ತಮಗೆ ಅನುಕೂಲವಾಗುವಂತೆ ಅರ್ಥೈಸಿ ಈಗಾಗಲೇ ಇರುವ ಹಿಡಿತದಿಂದ ಅದರ ಮೇಲೆ ಸವಾರಿ ಮಾಡಿ ಬೇರೆ ರೀತಿ ಅದೇ ದಂಧೆಗೆ ಇಳಿಯುವವರಿಗಿಂತ,
ಆ ಕಾನೂನಿನಿಂದ ಬದುಕು ಕಳೆದುಕೊಳ್ಳುವವರಿಗೆ ಆಶ್ರಯವಾಗುವ ಆತ್ಮಗಳಿಗೆ ನನ್ನ ಬೆಂಬಲ…….

ಏಕೆಂದರೆ,
ಫಲಿತಾಂಶ ಮತ್ತು ಜನಪ್ರಿಯತೆಯ ಬಾಲದ ಹಿಂದೆ ಓಡಲು ನಾನು ಕುದುರೆ ವ್ಯಾಪಾರಿಯಲ್ಲ. ಬದುಕಿನ ಅರ್ಥ ಹುಡುಕ ಹೊರಟ ಜೀವಕೋಶಗಳ ರಾಶಿ…..

ಸಮಾಜದ ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ನಗು ನೋಡುವವರೆಗೂ ಪ್ರತಿ ಕ್ಷಣವೂ ಆಕ್ರೋಶದ ಕ್ಷಣವೇ……..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

39 minutes ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

8 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

15 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

16 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

17 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

23 hours ago