Advertisement
ಅನುಕ್ರಮ

ಮನಸ್ಸಿನ ಕನ್ನಡಿಯಲ್ಲಿ ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…| ಬಂದ್ ಗಳಿಗಿಂತಲೂ ಜನಜಾಗೃತಿ ಇಂದಿನ ಅತ್ಯವಶ್ಯಕ ಅಗತ್ಯ |

Share

ನನ್ನ ಬೆಂಬಲ ಇವರುಗಳಿಗಾಗಿ………ನೀವೂ ಸಹ ಒಮ್ಮೆ ಯೋಚಿಸಿ…..

ಬಂದ್ ಗಳಿಗಿಂತಲೂ ಜನ ಜಾಗೃತಿ ಇಂದಿನ ಅತ್ಯವಶ್ಯಕ ಅಗತ್ಯ………

ಅದಕ್ಕಾಗಿಯೇ…….

ಭಾರತ್ ಬಂದ್ ಅನ್ನೂ ಬೆಂಬಲಿಸುವುದಿಲ್ಲ,
ನರೇಂದ್ರ ಮೋದಿಯನ್ನೂ ಬೆಂಬಲಿಸುವುದಿಲ್ಲ,
ಇವುಗಳನ್ನು ಬೆಂಬಲಿಸಲು ಕೋಟ್ಯಾನುಕೋಟಿ ಜನರಿದ್ದಾರೆ………

ಜೈಕಾರಗಳನ್ನೂ ಬೆಂಬಲಿಸುವುದಿಲ್ಲ,
ಧಿಕ್ಕಾರಗಳನ್ನೂ ಬೆಂಬಲಿಸುವುದಿಲ್ಲ,
ಬಲಪಂಥವನ್ನೂ ಬೆಂಬಲಿಸುವುದಿಲ್ಲ,
ಎಡಪಂಥವನ್ನೂ ಬೆಂಬಲಿಸುವುದಿಲ್ಲ,

ಇವುಗಳನ್ನು ಉಳಿಸಲು ಕೋಟ್ಯಾನುಕೋಟಿ ಹೋರಾಟಗಾರರಿದ್ದಾರೆ…………

ಯಾವ ಧರ್ಮವನ್ನೂ ಬೆಂಬಲಿಸುವುದಿಲ್ಲ,
ಯಾವ ದೇವರನ್ನೂ ಬೆಂಬಲಿಸುವುದಿಲ್ಲ,
ಯಾವ ಗ್ರಂಥವನ್ನೂ ಬೆಂಬಲಿಸುವುದಿಲ್ಲ,
ಯಾವ ಸಿದ್ಧಾಂತವನ್ನೂ ಬೆಂಬಲಿಸುವುದಿಲ್ಲ
ಇವುಗಳನ್ನು ರಕ್ಷಿಸಲೂ ಕೋಟ್ಯಾನುಕೋಟಿ ಭಕ್ತರಿದ್ದಾರೆ.

ಆದರೆ ನನ್ನ ಬೆಂಬಲ,…….

ಅಗೋ ಅಲ್ಲಿ ನೋಡಿ ನನ್ನ ಪುಟ್ಟ ಕಂದ ಸಮೋಸ ತಿನ್ನಲು ಕಾಸಿಲ್ಲದೆ ಬಾಯಲ್ಲಿ ಜೊಲ್ಲು ಸುರಿಸುತ್ತಾ ಆಸೆ ಕಣ್ಣುಗಳಿಂದ ನೋಡುತ್ತಾ ಬೇಕರಿಯ ಮುಂದೆ ನಿಂತಿದೆ. ಅದರ ಆಸೆ ಪೂರೈಸುವವರಿಗೆ ನನ್ನ ಬೆಂಬಲ……

ಚಳಿಗೆ ಮುದುಡಿ ಬೀದಿಯಲ್ಲಿ ಮಲಗಿದ ನನ್ನ ತಾತನಿಗೆ ಕಂಬಳಿ ಹೊದಿಸಿ ಬಿಸಿ ಕಾಫಿ ಕುಡಿಸುವವರಿಗೆ ನನ್ನ ಬೆಂಬಲ…….

ಹಳೆಯ ನೋಟಾದರೂ ಸಿಗಲಿ ಎಂದು ತನ್ನ ದೇಹ ಮಾರಿ ಕೆನ್ನೆ ಕಚ್ಚಿಸಿಕೊಂಡು ರಕ್ತ ಒರೆಸಿಕೊಳ್ಳುತ್ತಿರುವ ನನ್ನ ತಂಗಿಗೆ ಬಾಳು ಕೊಡುವವರಿಗೆ ನನ್ನ ಬೆಂಬಲ…….

ಹತ್ತು ವರ್ಷಗಳಿಂದಲೂ ಕೊನೆಗಾಲಕ್ಕೆ ಇರಲೆಂದು ಕೂಡಿಟ್ಟಿದ್ದ ನೂರರ 50 ನೋಟಿಡಿದು ಇನ್ನು ನನ್ನ ಅಂತ್ಯ ಸಮೀಪಿಸಿತು ಹಣವಿಲ್ಲದ ನಾನು ಹೆಣಕ್ಕೆ ಸಮಾನ ಎಂದು ಸಾವಿನ ನಿರೀಕ್ಷೆಯಲ್ಲಿ ಚಿಂತಾಕ್ರಾಂತಳಾದ ನನ್ನ ಅಜ್ಜಿಗೆ ಧೈರ್ಯ ಹೇಳಿ ನಾನಿದ್ದೇನೆಂದು ತಬ್ಬಿ ಸಮಾಧಾನ ಮಾಡುವವರಿಗೆ ನನ್ನ ಬೆಂಬಲ…..

ರೇಪ್ ಮಾಡಿದವನನ್ನು ಕತ್ತರಿಸುವವರಿಗಿಂತ ಅತ್ಯಾಚಾರಕ್ಕೆ ಒಳಗಾದ ನನ್ನ ಅಕ್ಕನ ನೋವಿಗೆ ಸ್ಪಂದಿಸಿ ಆಕೆಯ ಜೀವನಕ್ಕೆ ಆಧಾರವಾಗುವ ಮನಸುಗಳಿಗೆ ನನ್ನ ಬೆಂಬಲ……

ಅಕ್ಷರಗಳಲ್ಲಿ ಮಹಲುಗಳನ್ನು ಕಟ್ಟಿ, ಭಾವನೆಗಳಲ್ಲಿ ತೇಲಿ ಮೇರಾ ಭಾರತ್ ಮಹಾನ್ ಎನ್ನುವವರಿಗಿಂತ ತನ್ನ ಜೊತೆಗಾರರ ಸ್ನೇಹಿತರ ಕಷ್ಟಗಳಿಗೆ ಹೆಗಲಾಗುವ, ಅವರಿಗೆ ನಾವಿದ್ದೇವೆ ಎಂದು ಆತ್ಮವಿಶ್ವಾಸ ತುಂಬುವ ಮನುಜರಿಗೆ ನನ್ನ ಬೆಂಬಲ……

ಯಾವ ಕಾನೂನು ಬಂದರೂ ಅದರೊಳಗೆ ನುಸುಳಿ ತಮಗೆ ಅನುಕೂಲವಾಗುವಂತೆ ಅರ್ಥೈಸಿ ಈಗಾಗಲೇ ಇರುವ ಹಿಡಿತದಿಂದ ಅದರ ಮೇಲೆ ಸವಾರಿ ಮಾಡಿ ಬೇರೆ ರೀತಿ ಅದೇ ದಂಧೆಗೆ ಇಳಿಯುವವರಿಗಿಂತ,
ಆ ಕಾನೂನಿನಿಂದ ಬದುಕು ಕಳೆದುಕೊಳ್ಳುವವರಿಗೆ ಆಶ್ರಯವಾಗುವ ಆತ್ಮಗಳಿಗೆ ನನ್ನ ಬೆಂಬಲ…….

ಏಕೆಂದರೆ,
ಫಲಿತಾಂಶ ಮತ್ತು ಜನಪ್ರಿಯತೆಯ ಬಾಲದ ಹಿಂದೆ ಓಡಲು ನಾನು ಕುದುರೆ ವ್ಯಾಪಾರಿಯಲ್ಲ. ಬದುಕಿನ ಅರ್ಥ ಹುಡುಕ ಹೊರಟ ಜೀವಕೋಶಗಳ ರಾಶಿ…..

ಸಮಾಜದ ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ನಗು ನೋಡುವವರೆಗೂ ಪ್ರತಿ ಕ್ಷಣವೂ ಆಕ್ರೋಶದ ಕ್ಷಣವೇ……..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

12 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

14 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

19 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago