ಭಾವೀ ಪತ್ರಕರ್ತರು ಹೇಗಿರಬೇಕು ? | ವಿವೇಕಾನಂದ ಕಾಲೇಜಿನಲ್ಲಿ ‘ಪತ್ರಕರ್ತ ಮೇಷ್ಟ್ರು| ಪವಿತ್ರ ಭಟ್ ಜಿಗಳೆಮನೆ ಸಲಹೆ|

March 26, 2022
10:39 PM

ಸ್ಫರ್ಧಾತ್ಮಕ ಜಗದಲ್ಲಿ ವೇಗದ ಕೆಲಸಕ್ಕೆ ಪ್ರಾಶಸ್ತ್ಯ ಹೆಚ್ಚು. ಉದ್ಯೋಗ ಕ್ಷೇತ್ರದಲ್ಲಿ ಸಮಯಪಾಲನೆ, ಶಿಸ್ತು ಮುಖ್ಯ. ಲೇಖನಗಳಲ್ಲಿ ಉಪಯೋಗಿಸುವ ಬರವಣಿಗೆಗಳು ಆಕರ್ಷಣಿಯವಾಗಿರಬೇಕು ಮತ್ತು ಜನರಿಗೆ ಅರ್ಥವಾಗುವಂತೆ ಇರಬೇಕು. ಅಂತೆಯೇ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಜ್ಞಾನವಿರಬೇಕು. ವಿಷಯ ವಸ್ತುಗಳ ಅಭಿವೃದ್ಧಿ ಮಾಡುವುದನ್ನು ಕಲಿತುಕೊಳ್ಳಬೇಕು.ಈ ನಿಟ್ಟಿನಲ್ಲಿ ಭಾವಿ ಪತ್ರಕರ್ತರು ಪೂರ್ವತಯಾರಿ ಮಾಡಿಕೊಂಡಿರಬೇಕು ಎಂದು ಪುತ್ತೂರು ವಿವೇಕಾನಂದಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಬೆಂಗಳೂರಿನ ಟೈಮ್ಸ್ ಇಂಟರ್ನೆಟ್‍ ಡಿಜಿಟಲ್‍ನ ಪರ್ತಕರ್ತೆ ಪವಿತ್ರ ಭಟ್ ಜಿಗಳೆಮಣೆ ಹೇಳಿದರು.

Advertisement

ಅವರು ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ‘ಪತ್ರಕರ್ತ ಮೇಷ್ಟ್ರು’ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಮಾತನಾಡಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ತಾರಾ, ಸೀಮಾ ಪೋನಡ್ಕ, ಭರತ್‍ಕುಮಾರ್ ಕೆ. ಬಿ.ಉಪಸ್ಥಿತರಿದ್ದರು. ದ್ವಿತೀಯ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಜಗದೀಶ ಜೆ ಸ್ವಾಗತಿಸಿ, ವಿದ್ಯಾರ್ಥಿನಿ ಜಯಶ್ರೀ ಆರ್ಯಾಪು ವಂದಿಸಿದರು. ಕಾರ್ಯದರ್ಶಿ ಅರುಣ್‍ ಕಿರಿಮಂಜೇಶ್ವರ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group