ಸ್ಫರ್ಧಾತ್ಮಕ ಜಗದಲ್ಲಿ ವೇಗದ ಕೆಲಸಕ್ಕೆ ಪ್ರಾಶಸ್ತ್ಯ ಹೆಚ್ಚು. ಉದ್ಯೋಗ ಕ್ಷೇತ್ರದಲ್ಲಿ ಸಮಯಪಾಲನೆ, ಶಿಸ್ತು ಮುಖ್ಯ. ಲೇಖನಗಳಲ್ಲಿ ಉಪಯೋಗಿಸುವ ಬರವಣಿಗೆಗಳು ಆಕರ್ಷಣಿಯವಾಗಿರಬೇಕು ಮತ್ತು ಜನರಿಗೆ ಅರ್ಥವಾಗುವಂತೆ ಇರಬೇಕು. ಅಂತೆಯೇ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಜ್ಞಾನವಿರಬೇಕು. ವಿಷಯ ವಸ್ತುಗಳ ಅಭಿವೃದ್ಧಿ ಮಾಡುವುದನ್ನು ಕಲಿತುಕೊಳ್ಳಬೇಕು.ಈ ನಿಟ್ಟಿನಲ್ಲಿ ಭಾವಿ ಪತ್ರಕರ್ತರು ಪೂರ್ವತಯಾರಿ ಮಾಡಿಕೊಂಡಿರಬೇಕು ಎಂದು ಪುತ್ತೂರು ವಿವೇಕಾನಂದಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಬೆಂಗಳೂರಿನ ಟೈಮ್ಸ್ ಇಂಟರ್ನೆಟ್ ಡಿಜಿಟಲ್ನ ಪರ್ತಕರ್ತೆ ಪವಿತ್ರ ಭಟ್ ಜಿಗಳೆಮಣೆ ಹೇಳಿದರು.
ಅವರು ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ‘ಪತ್ರಕರ್ತ ಮೇಷ್ಟ್ರು’ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಮಾತನಾಡಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ತಾರಾ, ಸೀಮಾ ಪೋನಡ್ಕ, ಭರತ್ಕುಮಾರ್ ಕೆ. ಬಿ.ಉಪಸ್ಥಿತರಿದ್ದರು. ದ್ವಿತೀಯ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಜಗದೀಶ ಜೆ ಸ್ವಾಗತಿಸಿ, ವಿದ್ಯಾರ್ಥಿನಿ ಜಯಶ್ರೀ ಆರ್ಯಾಪು ವಂದಿಸಿದರು. ಕಾರ್ಯದರ್ಶಿ ಅರುಣ್ ಕಿರಿಮಂಜೇಶ್ವರ ಕಾರ್ಯಕ್ರಮವನ್ನು ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…