Advertisement
ಸುದ್ದಿಗಳು

ಭಾವೀ ಪತ್ರಕರ್ತರು ಹೇಗಿರಬೇಕು ? | ವಿವೇಕಾನಂದ ಕಾಲೇಜಿನಲ್ಲಿ ‘ಪತ್ರಕರ್ತ ಮೇಷ್ಟ್ರು| ಪವಿತ್ರ ಭಟ್ ಜಿಗಳೆಮನೆ ಸಲಹೆ|

Share

ಸ್ಫರ್ಧಾತ್ಮಕ ಜಗದಲ್ಲಿ ವೇಗದ ಕೆಲಸಕ್ಕೆ ಪ್ರಾಶಸ್ತ್ಯ ಹೆಚ್ಚು. ಉದ್ಯೋಗ ಕ್ಷೇತ್ರದಲ್ಲಿ ಸಮಯಪಾಲನೆ, ಶಿಸ್ತು ಮುಖ್ಯ. ಲೇಖನಗಳಲ್ಲಿ ಉಪಯೋಗಿಸುವ ಬರವಣಿಗೆಗಳು ಆಕರ್ಷಣಿಯವಾಗಿರಬೇಕು ಮತ್ತು ಜನರಿಗೆ ಅರ್ಥವಾಗುವಂತೆ ಇರಬೇಕು. ಅಂತೆಯೇ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಜ್ಞಾನವಿರಬೇಕು. ವಿಷಯ ವಸ್ತುಗಳ ಅಭಿವೃದ್ಧಿ ಮಾಡುವುದನ್ನು ಕಲಿತುಕೊಳ್ಳಬೇಕು.ಈ ನಿಟ್ಟಿನಲ್ಲಿ ಭಾವಿ ಪತ್ರಕರ್ತರು ಪೂರ್ವತಯಾರಿ ಮಾಡಿಕೊಂಡಿರಬೇಕು ಎಂದು ಪುತ್ತೂರು ವಿವೇಕಾನಂದಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಬೆಂಗಳೂರಿನ ಟೈಮ್ಸ್ ಇಂಟರ್ನೆಟ್‍ ಡಿಜಿಟಲ್‍ನ ಪರ್ತಕರ್ತೆ ಪವಿತ್ರ ಭಟ್ ಜಿಗಳೆಮಣೆ ಹೇಳಿದರು.

ಅವರು ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ‘ಪತ್ರಕರ್ತ ಮೇಷ್ಟ್ರು’ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಮಾತನಾಡಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ತಾರಾ, ಸೀಮಾ ಪೋನಡ್ಕ, ಭರತ್‍ಕುಮಾರ್ ಕೆ. ಬಿ.ಉಪಸ್ಥಿತರಿದ್ದರು. ದ್ವಿತೀಯ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಜಗದೀಶ ಜೆ ಸ್ವಾಗತಿಸಿ, ವಿದ್ಯಾರ್ಥಿನಿ ಜಯಶ್ರೀ ಆರ್ಯಾಪು ವಂದಿಸಿದರು. ಕಾರ್ಯದರ್ಶಿ ಅರುಣ್‍ ಕಿರಿಮಂಜೇಶ್ವರ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

58 seconds ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

9 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

14 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

14 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago