2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ(ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣದಂಪತಿ ಪುತ್ರಿ),
ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿದಂಪತಿ ಪುತ್ರ),
ಮನೋಜ್ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿದಂಪತಿ ಪುತ್ರ),
ಅವನೀಶ್ ಕೆ(ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾದಂಪತಿ ಪುತ್ರ),
ಚಿನ್ಮಯಿ(ವಿಟ್ಲದ ರಾಜನಾರಾಯಣ ಮತ್ತು ಗೀತಾದಂಪತಿ ಪುತ್ರಿ),
ಅಪರ್ಣ ಬಾಳಿಗ ಎಂ(ಪೆರ್ಲದರಾಜರಾಮ ಬಾಳಿಗ ಮತ್ತು ರಾಜಶ್ರೀ ಬಾಳಿಗ ದಂಪತಿ ಪುತ್ರಿ),
ಶ್ರೇಯಸ್ಎಚ್(ಬನ್ನೂರಿನ ಆನಂದ ಗೌಡಎಚ್ ಮತ್ತು ಸವಿತಾದಂಪತಿ ಪುತ್ರ),
ಶ್ರೀರಕ್ಷಾ ಬಿ(ಕಾಸರಗೋಡಿನಗಿರೀಶ ಮತ್ತು ವೀಣಾದಂಪತಿ ಪುತ್ರಿ),
ಸಿಂಚನಾ ಲಕ್ಷ್ಮಿ(ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿ ಪುತ್ರಿ),
ಅಭಿಜ್ಞಾಲಕ್ಷ್ಮಿ(ಮೀಯಪದವಿನ ಶಿವಕುಮಾರ್ ಮತ್ತು ವಾಣಿಶ್ರೀ ದಂಪತಿ ಪುತ್ರಿ) ಆರು ನೂರು ಅಂಕಗಳಲ್ಲಿ ಆರು ನೂರು ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿಜ್ಞಾನ ವಿಭಾಗದ ಒಟ್ಟು462 ಮಂದಿ ವಿದ್ಯಾರ್ಥಿಗಳಲ್ಲಿ 230ಮಂದಿ ಡಿಸ್ಟಿಂಕ್ಷನ್, 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರೆ ವಾಣಿಜ್ಯ ವಿಭಾಗದ ಒಟ್ಟು323 ವಿದ್ಯಾರ್ಥಿಗಳಲ್ಲಿ 67 ಮಂದಿ ಡಿಸ್ಟಿಂಕ್ಷನ್ ಹಾಗೂ 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಒಟ್ಟು 37 ವಿದ್ಯಾರ್ಥಿಗಳಲ್ಲಿ 6 ಮಂದಿ ಡಿಸ್ಟಿಂಕ್ಷನ್,21 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಹಾಗೂ ಅಧ್ಯಾಪಕ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…