ಅಪರಾಧಿ ತಪ್ಪಿಸಿಕೊಂಡರು ಪರವಾಗಿಲ್ಲ, ನಿರಪರಾಧಿಗೆ ಶಿಕ್ಷೆಯಾಗಬಾರದು ಅನ್ನೋ ಮಾತಿದೆ. ಆದರೆ ಸೌಜನ್ಯ ಕೇಸ್ನಲ್ಲಿ ತನಗೆ ಸಂಬಂಧವೇ ಇಲ್ಲದ ವಿಷಯಕ್ಕೆ ಸಂತೋಷ್ ರಾವ್ ಸುಮಾರು 11 ವರ್ಷಗಳ ಕಾಲ ಮಾನಸಿಕ, ದೈಹಿಕ, ಜೊತೆಗೆ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಇಡೀ ಸಮಾಜದಿಂದ ಅವಮಾನಗೊಂಡು ಏಕಾಂತ ಬದುಕನ್ನು ಬದುಕುತ್ತಿದೆ ಸಂತೋಷ್ ರಾವ್ ಕುಟುಂಬ. ನಿರ್ದೂಷಿ ಎಂದು ಜೈಲಿನಿಂದ ಬಿಡುಗಡೆಯಾದರೂ ಇಂದೂ ಕೂಡ ಸಮಾಜ ಅವರನ್ನು ಅನುಮಾನದಿಂದಲೇ ನೋಡುತ್ತಿದೆ.
ಈಗ ಸಂತೋಷ್ ರಾವ್ ಕುಟುಂಬಕ್ಕೆ ಬೇಕಾಗಿದ್ದು ಸಾಂತ್ವನ, ಜೀವನ ಕಟ್ಟಿಕೊಳ್ಳುವ ಧೈರ್ಯ ತುಂಬುವ ಮನಸ್ಸುಗಳು, ಸಹಾಯ ಹಸ್ತ ಚಾಚುವ ಕೈಗಳು. ಇದನ್ನೆಲ್ಲವನ್ನೂ ಎಂದೂ ನಿರೀಕ್ಷಿಸದ ಸಂತೋಷ್ ರಾವ್ ಕುಟುಂಬಕ್ಕೆ ಸ್ವ ಇಚ್ಚೆಯಿಂದ ಒಂದಷ್ಟು ಸಹಾಯ ಮಾಡಿ ಕ್ಷಮೆ ಕೇಳಿ, ಗುರುವಂದನೆ ಸಲ್ಲಿಸುವ ಕೆಲಸವನ್ನು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿಅವರ ತಂಡ ಭೇಟಿ ಮಾಡಿ ಬಂದಿದೆ.
ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಭೇಟಿ ಮಾಡಿ ಸಾಂತ್ವನವನ್ನು ಹೇಳಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಭೇಟಿ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ, ಸುಧಾಕರ ರಾವ್ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಸಂತೋಷ್ ರಾವ್ ಅವರ ತಂದೆ ಸುಧಾಕರ ರಾವ್ ಅವರಿಗೆ ಗುರುವಂದನೆ ಸಲ್ಲಿಸಿದ್ದಾರೆ.
ಇದಲ್ಲದೆ ಸುಧಾಕರ ಅವರಿಗೆ ತಲೆಗೂದಲು ಕ್ಷೌರ ಮಾಡಿಸಿ, ಹೊಸಬಟ್ಟೆ ತೊಡಿಸಿ ಪಾದಪೂಜೆ ಮಾಡಿದ್ದಾರೆ. ಬಳಿಕ ಅವರ ಮನೆಗೆ ಸುಣ್ಣಬಣ್ಣ ಬಳಿಯಲಾಗಿದೆ.ಬಳಿಕ ಮಾತನಾಡಿದ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ,ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ಮತ್ತು ಕುಟುಂಬ ಮಾನಸಿಕವಾಗಿ, ದೈಹಿಕವಾಗಿ ನೊಂದುಕೊಂಡಿದೆ. ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು ಸಾಗಿಸಿದೆ.ಇಂತಹ ಪರಿಸ್ಥಿತಿಯಲ್ಲಿ ಸಮಾಜದ ಪರವಾಗಿ ಸಂತೋಷ್ ರಾವ್ ಕುಟುಂಬದ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…