ಪ್ರಮುಖ

#SowjanyaCase| ತನ್ನದಲ್ಲದ ತಪ್ಪಿಗೆ ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು | ಸಂತೋಷ್ ರಾವ್ ತಂದೆಯ ಪಾದ ಪೂಜೆ ಮಾಡಿ ಕ್ಷಮೆಯಾಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಪರಾಧಿ ತಪ್ಪಿಸಿಕೊಂಡರು ಪರವಾಗಿಲ್ಲ, ನಿರಪರಾಧಿಗೆ ಶಿಕ್ಷೆಯಾಗಬಾರದು ಅನ್ನೋ ಮಾತಿದೆ. ಆದರೆ ಸೌಜನ್ಯ ಕೇಸ್‌ನಲ್ಲಿ ತನಗೆ ಸಂಬಂಧವೇ ಇಲ್ಲದ ವಿಷಯಕ್ಕೆ ಸಂತೋಷ್‌ ರಾವ್‌ ಸುಮಾರು 11 ವರ್ಷಗಳ ಕಾಲ ಮಾನಸಿಕ, ದೈಹಿಕ, ಜೊತೆಗೆ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಇಡೀ ಸಮಾಜದಿಂದ ಅವಮಾನಗೊಂಡು ಏಕಾಂತ ಬದುಕನ್ನು ಬದುಕುತ್ತಿದೆ ಸಂತೋಷ್‌ ರಾವ್‌ ಕುಟುಂಬ. ನಿರ್ದೂಷಿ ಎಂದು ಜೈಲಿನಿಂದ ಬಿಡುಗಡೆಯಾದರೂ ಇಂದೂ ಕೂಡ ಸಮಾಜ ಅವರನ್ನು ಅನುಮಾನದಿಂದಲೇ ನೋಡುತ್ತಿದೆ.

Advertisement
Advertisement

ಈಗ ಸಂತೋಷ್‌ ರಾವ್ ಕುಟುಂಬಕ್ಕೆ ಬೇಕಾಗಿದ್ದು ಸಾಂತ್ವನ, ಜೀವನ ಕಟ್ಟಿಕೊಳ್ಳುವ ಧೈರ್ಯ ತುಂಬುವ ಮನಸ್ಸುಗಳು, ಸಹಾಯ ಹಸ್ತ ಚಾಚುವ ಕೈಗಳು. ಇದನ್ನೆಲ್ಲವನ್ನೂ ಎಂದೂ ನಿರೀಕ್ಷಿಸದ ಸಂತೋಷ್‌ ರಾವ್‌ ಕುಟುಂಬಕ್ಕೆ ಸ್ವ ಇಚ್ಚೆಯಿಂದ ಒಂದಷ್ಟು ಸಹಾಯ ಮಾಡಿ ಕ್ಷಮೆ ಕೇಳಿ, ಗುರುವಂದನೆ ಸಲ್ಲಿಸುವ ಕೆಲಸವನ್ನು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿಅವರ ತಂಡ ಭೇಟಿ ಮಾಡಿ ಬಂದಿದೆ.

ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಭೇಟಿ ಮಾಡಿ ಸಾಂತ್ವನವನ್ನು ಹೇಳಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಭೇಟಿ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ, ಸುಧಾಕರ ರಾವ್  ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಸಂತೋಷ್ ರಾವ್ ಅವರ ತಂದೆ  ಸುಧಾಕರ ರಾವ್ ಅವರಿಗೆ ಗುರುವಂದನೆ ಸಲ್ಲಿಸಿದ್ದಾರೆ.

ಇದಲ್ಲದೆ ಸುಧಾಕರ ಅವರಿಗೆ ತಲೆಗೂದಲು ಕ್ಷೌರ ಮಾಡಿಸಿ, ಹೊಸಬಟ್ಟೆ ತೊಡಿಸಿ ಪಾದಪೂಜೆ ಮಾಡಿದ್ದಾರೆ. ಬಳಿಕ ಅವರ ಮನೆಗೆ ಸುಣ್ಣಬಣ್ಣ ಬಳಿಯಲಾಗಿದೆ.ಬಳಿಕ ಮಾತನಾಡಿದ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ,ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸಂತೋಷ್‌ ರಾವ್ ಮತ್ತು ಕುಟುಂಬ ಮಾನಸಿಕವಾಗಿ, ದೈಹಿಕವಾಗಿ ನೊಂದುಕೊಂಡಿದೆ. ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು ಸಾಗಿಸಿದೆ.ಇಂತಹ ಪರಿಸ್ಥಿತಿಯಲ್ಲಿ ಸಮಾಜದ ಪರವಾಗಿ ಸಂತೋಷ್ ರಾವ್ ಕುಟುಂಬದ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಸಂತೋಷ್ ರಾವ್ ವಿಚಾರದಲ್ಲಿ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸಂಸ್ಥೆ ನೆರವು ನೀಡಲಿದೆ. ಸಂಬಂಧಪಟ್ಟ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸಂತೋಷ್‌ರಾವ್‌ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

Advertisement

Source : TRM

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

3 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

4 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

4 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

4 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

5 hours ago