ಅಪರಾಧಿ ತಪ್ಪಿಸಿಕೊಂಡರು ಪರವಾಗಿಲ್ಲ, ನಿರಪರಾಧಿಗೆ ಶಿಕ್ಷೆಯಾಗಬಾರದು ಅನ್ನೋ ಮಾತಿದೆ. ಆದರೆ ಸೌಜನ್ಯ ಕೇಸ್ನಲ್ಲಿ ತನಗೆ ಸಂಬಂಧವೇ ಇಲ್ಲದ ವಿಷಯಕ್ಕೆ ಸಂತೋಷ್ ರಾವ್ ಸುಮಾರು 11 ವರ್ಷಗಳ ಕಾಲ ಮಾನಸಿಕ, ದೈಹಿಕ, ಜೊತೆಗೆ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಇಡೀ ಸಮಾಜದಿಂದ ಅವಮಾನಗೊಂಡು ಏಕಾಂತ ಬದುಕನ್ನು ಬದುಕುತ್ತಿದೆ ಸಂತೋಷ್ ರಾವ್ ಕುಟುಂಬ. ನಿರ್ದೂಷಿ ಎಂದು ಜೈಲಿನಿಂದ ಬಿಡುಗಡೆಯಾದರೂ ಇಂದೂ ಕೂಡ ಸಮಾಜ ಅವರನ್ನು ಅನುಮಾನದಿಂದಲೇ ನೋಡುತ್ತಿದೆ.
ಈಗ ಸಂತೋಷ್ ರಾವ್ ಕುಟುಂಬಕ್ಕೆ ಬೇಕಾಗಿದ್ದು ಸಾಂತ್ವನ, ಜೀವನ ಕಟ್ಟಿಕೊಳ್ಳುವ ಧೈರ್ಯ ತುಂಬುವ ಮನಸ್ಸುಗಳು, ಸಹಾಯ ಹಸ್ತ ಚಾಚುವ ಕೈಗಳು. ಇದನ್ನೆಲ್ಲವನ್ನೂ ಎಂದೂ ನಿರೀಕ್ಷಿಸದ ಸಂತೋಷ್ ರಾವ್ ಕುಟುಂಬಕ್ಕೆ ಸ್ವ ಇಚ್ಚೆಯಿಂದ ಒಂದಷ್ಟು ಸಹಾಯ ಮಾಡಿ ಕ್ಷಮೆ ಕೇಳಿ, ಗುರುವಂದನೆ ಸಲ್ಲಿಸುವ ಕೆಲಸವನ್ನು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿಅವರ ತಂಡ ಭೇಟಿ ಮಾಡಿ ಬಂದಿದೆ.
ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಭೇಟಿ ಮಾಡಿ ಸಾಂತ್ವನವನ್ನು ಹೇಳಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಭೇಟಿ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ, ಸುಧಾಕರ ರಾವ್ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಸಂತೋಷ್ ರಾವ್ ಅವರ ತಂದೆ ಸುಧಾಕರ ರಾವ್ ಅವರಿಗೆ ಗುರುವಂದನೆ ಸಲ್ಲಿಸಿದ್ದಾರೆ.
ಇದಲ್ಲದೆ ಸುಧಾಕರ ಅವರಿಗೆ ತಲೆಗೂದಲು ಕ್ಷೌರ ಮಾಡಿಸಿ, ಹೊಸಬಟ್ಟೆ ತೊಡಿಸಿ ಪಾದಪೂಜೆ ಮಾಡಿದ್ದಾರೆ. ಬಳಿಕ ಅವರ ಮನೆಗೆ ಸುಣ್ಣಬಣ್ಣ ಬಳಿಯಲಾಗಿದೆ.ಬಳಿಕ ಮಾತನಾಡಿದ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ,ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ಮತ್ತು ಕುಟುಂಬ ಮಾನಸಿಕವಾಗಿ, ದೈಹಿಕವಾಗಿ ನೊಂದುಕೊಂಡಿದೆ. ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು ಸಾಗಿಸಿದೆ.ಇಂತಹ ಪರಿಸ್ಥಿತಿಯಲ್ಲಿ ಸಮಾಜದ ಪರವಾಗಿ ಸಂತೋಷ್ ರಾವ್ ಕುಟುಂಬದ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಸಂತೋಷ್ ರಾವ್ ವಿಚಾರದಲ್ಲಿ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸಂಸ್ಥೆ ನೆರವು ನೀಡಲಿದೆ. ಸಂಬಂಧಪಟ್ಟ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸಂತೋಷ್ರಾವ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.
Source : TRM
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…