Advertisement
ಪ್ರಮುಖ

#SowjanyaCase| ತನ್ನದಲ್ಲದ ತಪ್ಪಿಗೆ ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು | ಸಂತೋಷ್ ರಾವ್ ತಂದೆಯ ಪಾದ ಪೂಜೆ ಮಾಡಿ ಕ್ಷಮೆಯಾಚನೆ |

Share

ಅಪರಾಧಿ ತಪ್ಪಿಸಿಕೊಂಡರು ಪರವಾಗಿಲ್ಲ, ನಿರಪರಾಧಿಗೆ ಶಿಕ್ಷೆಯಾಗಬಾರದು ಅನ್ನೋ ಮಾತಿದೆ. ಆದರೆ ಸೌಜನ್ಯ ಕೇಸ್‌ನಲ್ಲಿ ತನಗೆ ಸಂಬಂಧವೇ ಇಲ್ಲದ ವಿಷಯಕ್ಕೆ ಸಂತೋಷ್‌ ರಾವ್‌ ಸುಮಾರು 11 ವರ್ಷಗಳ ಕಾಲ ಮಾನಸಿಕ, ದೈಹಿಕ, ಜೊತೆಗೆ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಇಡೀ ಸಮಾಜದಿಂದ ಅವಮಾನಗೊಂಡು ಏಕಾಂತ ಬದುಕನ್ನು ಬದುಕುತ್ತಿದೆ ಸಂತೋಷ್‌ ರಾವ್‌ ಕುಟುಂಬ. ನಿರ್ದೂಷಿ ಎಂದು ಜೈಲಿನಿಂದ ಬಿಡುಗಡೆಯಾದರೂ ಇಂದೂ ಕೂಡ ಸಮಾಜ ಅವರನ್ನು ಅನುಮಾನದಿಂದಲೇ ನೋಡುತ್ತಿದೆ.

ಈಗ ಸಂತೋಷ್‌ ರಾವ್ ಕುಟುಂಬಕ್ಕೆ ಬೇಕಾಗಿದ್ದು ಸಾಂತ್ವನ, ಜೀವನ ಕಟ್ಟಿಕೊಳ್ಳುವ ಧೈರ್ಯ ತುಂಬುವ ಮನಸ್ಸುಗಳು, ಸಹಾಯ ಹಸ್ತ ಚಾಚುವ ಕೈಗಳು. ಇದನ್ನೆಲ್ಲವನ್ನೂ ಎಂದೂ ನಿರೀಕ್ಷಿಸದ ಸಂತೋಷ್‌ ರಾವ್‌ ಕುಟುಂಬಕ್ಕೆ ಸ್ವ ಇಚ್ಚೆಯಿಂದ ಒಂದಷ್ಟು ಸಹಾಯ ಮಾಡಿ ಕ್ಷಮೆ ಕೇಳಿ, ಗುರುವಂದನೆ ಸಲ್ಲಿಸುವ ಕೆಲಸವನ್ನು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿಅವರ ತಂಡ ಭೇಟಿ ಮಾಡಿ ಬಂದಿದೆ.

Advertisement

ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಭೇಟಿ ಮಾಡಿ ಸಾಂತ್ವನವನ್ನು ಹೇಳಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಭೇಟಿ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ, ಸುಧಾಕರ ರಾವ್  ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಸಂತೋಷ್ ರಾವ್ ಅವರ ತಂದೆ  ಸುಧಾಕರ ರಾವ್ ಅವರಿಗೆ ಗುರುವಂದನೆ ಸಲ್ಲಿಸಿದ್ದಾರೆ.

ಇದಲ್ಲದೆ ಸುಧಾಕರ ಅವರಿಗೆ ತಲೆಗೂದಲು ಕ್ಷೌರ ಮಾಡಿಸಿ, ಹೊಸಬಟ್ಟೆ ತೊಡಿಸಿ ಪಾದಪೂಜೆ ಮಾಡಿದ್ದಾರೆ. ಬಳಿಕ ಅವರ ಮನೆಗೆ ಸುಣ್ಣಬಣ್ಣ ಬಳಿಯಲಾಗಿದೆ.ಬಳಿಕ ಮಾತನಾಡಿದ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ,ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸಂತೋಷ್‌ ರಾವ್ ಮತ್ತು ಕುಟುಂಬ ಮಾನಸಿಕವಾಗಿ, ದೈಹಿಕವಾಗಿ ನೊಂದುಕೊಂಡಿದೆ. ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು ಸಾಗಿಸಿದೆ.ಇಂತಹ ಪರಿಸ್ಥಿತಿಯಲ್ಲಿ ಸಮಾಜದ ಪರವಾಗಿ ಸಂತೋಷ್ ರಾವ್ ಕುಟುಂಬದ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement

ಸಂತೋಷ್ ರಾವ್ ವಿಚಾರದಲ್ಲಿ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸಂಸ್ಥೆ ನೆರವು ನೀಡಲಿದೆ. ಸಂಬಂಧಪಟ್ಟ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸಂತೋಷ್‌ರಾವ್‌ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

Source : TRM

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

10 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

12 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

18 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago