ಕಾಂಗ್ರೆಸ್ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ. ಕಾಂಗ್ರೆಸ್ಗೆ ಮತಹಾಕಿದರೆ ಮುಸ್ಲಿಮರಿಗೆ ಮತ ಹಾಕಿದಂತೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಗದಗದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಯತ್ನಾಳ್, ಇದು ಹಿಂದೂ ವಿರೋಧಿ ಕಾಂಗ್ರೆಸ್ ಇದೆ. ಪಿಎಫ್ಐ ಸಂಘಟನೆಯ ಮೂಲ ಗುರಿ 2047ಕ್ಕೆ ಭಾರತವನ್ನು ಇಸ್ಲಾಂ ಧರ್ಮವನ್ನಾಗಿ ಮಾಡುವುದು. ಪಿಎಫ್ಐ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದ ಇದೆ. ಆ ದೃಷ್ಟಿಯಿಂದ ಕಾಂಗ್ರೆಸ್ನವರು ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ ಎಂದರು.
ಬಜರಂಗದಳ ಯಾವುದೇ ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಹಿಂದೂ ಧರ್ಮ, ಸಂಸ್ಕೃತಿ ಭಾರತದ ನಾಗರಿಕತೆ ಉಳಿಸುವ ಕೆಲಸ ಮಾಡುತ್ತಿದೆ. ಬಜರಂಗದಳ ನಿಷೇಧ ಮಾಡಲು ಜಗತ್ತಿನ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ. ಡಿಕೆಶಿಗೆ ಧಮ್ ಇದ್ರೆ ಮೀಸಲಾತಿ ತೆಗೆಯುವುದು, ಬಜರಂಗದಳ ನಿಷೇಧ ಮಾಡಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದಿಲ್ಲ. ಕೇವಲ ಬಜರಂಗದಳ ಅಷ್ಟೇ ಬಾಯ್ ಕಾಟ್ ಅಲ್ಲಾ, ಎಲ್ಲಾ ಹಿಂದೂಗಳು ಬಾಯ್ ಕಾಟ್ ಮಾಡುತ್ತೇವೆ. ಮುಸ್ಲಿಮರ ಮತ ಓಲೈಕೆಗಾಗಿ ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್ನವರಿಗೆ ಕೇವಲ ಮುಸ್ಲಿಂ ಮತಗಳು ಬೇಕಿದೆ, ಹಿಂದೂಗಳ ಮತ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು
ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಬೆಸೆಯುವ ಪರ್ಲಿಕಜೆ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗಾಗಿ ಎರಡು ದಶಕಗಳಿಂದ…
ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ…
ನಾಗಾಲ್ಯಾಂಡ್ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ…
ಕೇಂದ್ರ ಸರ್ಕಾರದ 100 ದಿನಗಳಲ್ಲಿ ಕೃಷಿ ಸಚಿವಾಲಯದಲ್ಲಿ ಸಾಧನೆಗಳ ಬಗ್ಗೆ ಕೇಂದ್ರ ಕೃಷಿ…
ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ…
ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ ಗಿರಿರಾಜ್ ಸಿಂಗ್…