ಕಾಂಗ್ರೆಸ್ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ. ಕಾಂಗ್ರೆಸ್ಗೆ ಮತಹಾಕಿದರೆ ಮುಸ್ಲಿಮರಿಗೆ ಮತ ಹಾಕಿದಂತೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಗದಗದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಯತ್ನಾಳ್, ಇದು ಹಿಂದೂ ವಿರೋಧಿ ಕಾಂಗ್ರೆಸ್ ಇದೆ. ಪಿಎಫ್ಐ ಸಂಘಟನೆಯ ಮೂಲ ಗುರಿ 2047ಕ್ಕೆ ಭಾರತವನ್ನು ಇಸ್ಲಾಂ ಧರ್ಮವನ್ನಾಗಿ ಮಾಡುವುದು. ಪಿಎಫ್ಐ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದ ಇದೆ. ಆ ದೃಷ್ಟಿಯಿಂದ ಕಾಂಗ್ರೆಸ್ನವರು ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ ಎಂದರು.
ಬಜರಂಗದಳ ಯಾವುದೇ ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಹಿಂದೂ ಧರ್ಮ, ಸಂಸ್ಕೃತಿ ಭಾರತದ ನಾಗರಿಕತೆ ಉಳಿಸುವ ಕೆಲಸ ಮಾಡುತ್ತಿದೆ. ಬಜರಂಗದಳ ನಿಷೇಧ ಮಾಡಲು ಜಗತ್ತಿನ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ. ಡಿಕೆಶಿಗೆ ಧಮ್ ಇದ್ರೆ ಮೀಸಲಾತಿ ತೆಗೆಯುವುದು, ಬಜರಂಗದಳ ನಿಷೇಧ ಮಾಡಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದಿಲ್ಲ. ಕೇವಲ ಬಜರಂಗದಳ ಅಷ್ಟೇ ಬಾಯ್ ಕಾಟ್ ಅಲ್ಲಾ, ಎಲ್ಲಾ ಹಿಂದೂಗಳು ಬಾಯ್ ಕಾಟ್ ಮಾಡುತ್ತೇವೆ. ಮುಸ್ಲಿಮರ ಮತ ಓಲೈಕೆಗಾಗಿ ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್ನವರಿಗೆ ಕೇವಲ ಮುಸ್ಲಿಂ ಮತಗಳು ಬೇಕಿದೆ, ಹಿಂದೂಗಳ ಮತ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…