ಪ್ರಮುಖ

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಪ್ರಪಂಚದಲ್ಲಿ, ಅದರಲ್ಲೂ ನಮ್ಮ ಆಕಾಶಕಾಯದಲ್ಲಿ ಅದೇನೇನು ಕೌತುಕಗಳಿವೆ ಅನ್ನೋದನ್ನು ಈಗಾಗಲೇ ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆದರೆ ಅದೊಂದು ಮುಗಿಯದ ಯೋಜನೆ, ಬಗೆದಷ್ಟು ಮತ್ತಷ್ಟು ವಿಶೇಷಗಳು ಸಿಗುತ್ತಲೇ ಹೋಗುತ್ತದೆ. ವಿಜ್ಞಾನಿಗಳಿಗೆ ಅಲ್ಲಿನ ಕೌತುಕಗಳನ್ನು ಮತ್ತಷ್ಟು ತಿಳಿಯುವ ಉತ್ಸಾಹ. ಇದೀಗ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ #Vyommitra ಹೆಸರಿನ ಮಹಿಳಾ ರೋಬೋಟ್‌ #FemaleRobot ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ.

Advertisement
Advertisement

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಈ ಬಾಹ್ಯಾಕಾಶ  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು. 2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ. ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

7 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

11 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

11 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

16 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

19 hours ago