Advertisement
ಪ್ರಮುಖ

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

Share

ಈ ಪ್ರಪಂಚದಲ್ಲಿ, ಅದರಲ್ಲೂ ನಮ್ಮ ಆಕಾಶಕಾಯದಲ್ಲಿ ಅದೇನೇನು ಕೌತುಕಗಳಿವೆ ಅನ್ನೋದನ್ನು ಈಗಾಗಲೇ ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆದರೆ ಅದೊಂದು ಮುಗಿಯದ ಯೋಜನೆ, ಬಗೆದಷ್ಟು ಮತ್ತಷ್ಟು ವಿಶೇಷಗಳು ಸಿಗುತ್ತಲೇ ಹೋಗುತ್ತದೆ. ವಿಜ್ಞಾನಿಗಳಿಗೆ ಅಲ್ಲಿನ ಕೌತುಕಗಳನ್ನು ಮತ್ತಷ್ಟು ತಿಳಿಯುವ ಉತ್ಸಾಹ. ಇದೀಗ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ #Vyommitra ಹೆಸರಿನ ಮಹಿಳಾ ರೋಬೋಟ್‌ #FemaleRobot ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ.

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಈ ಬಾಹ್ಯಾಕಾಶ  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು. 2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ. ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

20 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

20 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

22 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

23 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago