Advertisement
ಪ್ರಮುಖ

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

Share

ಈ ಪ್ರಪಂಚದಲ್ಲಿ, ಅದರಲ್ಲೂ ನಮ್ಮ ಆಕಾಶಕಾಯದಲ್ಲಿ ಅದೇನೇನು ಕೌತುಕಗಳಿವೆ ಅನ್ನೋದನ್ನು ಈಗಾಗಲೇ ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆದರೆ ಅದೊಂದು ಮುಗಿಯದ ಯೋಜನೆ, ಬಗೆದಷ್ಟು ಮತ್ತಷ್ಟು ವಿಶೇಷಗಳು ಸಿಗುತ್ತಲೇ ಹೋಗುತ್ತದೆ. ವಿಜ್ಞಾನಿಗಳಿಗೆ ಅಲ್ಲಿನ ಕೌತುಕಗಳನ್ನು ಮತ್ತಷ್ಟು ತಿಳಿಯುವ ಉತ್ಸಾಹ. ಇದೀಗ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ #Vyommitra ಹೆಸರಿನ ಮಹಿಳಾ ರೋಬೋಟ್‌ #FemaleRobot ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ.

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಈ ಬಾಹ್ಯಾಕಾಶ  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು. 2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ. ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

3 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

7 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

8 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

17 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago