Advertisement
ಪ್ರಮುಖ

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

Share

ಈ ಪ್ರಪಂಚದಲ್ಲಿ, ಅದರಲ್ಲೂ ನಮ್ಮ ಆಕಾಶಕಾಯದಲ್ಲಿ ಅದೇನೇನು ಕೌತುಕಗಳಿವೆ ಅನ್ನೋದನ್ನು ಈಗಾಗಲೇ ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆದರೆ ಅದೊಂದು ಮುಗಿಯದ ಯೋಜನೆ, ಬಗೆದಷ್ಟು ಮತ್ತಷ್ಟು ವಿಶೇಷಗಳು ಸಿಗುತ್ತಲೇ ಹೋಗುತ್ತದೆ. ವಿಜ್ಞಾನಿಗಳಿಗೆ ಅಲ್ಲಿನ ಕೌತುಕಗಳನ್ನು ಮತ್ತಷ್ಟು ತಿಳಿಯುವ ಉತ್ಸಾಹ. ಇದೀಗ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ #Vyommitra ಹೆಸರಿನ ಮಹಿಳಾ ರೋಬೋಟ್‌ #FemaleRobot ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ.

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಈ ಬಾಹ್ಯಾಕಾಶ  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು. 2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ. ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

9 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

16 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

16 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

24 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago