Advertisement
ಪ್ರಮುಖ

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

Share

ಈ ಪ್ರಪಂಚದಲ್ಲಿ, ಅದರಲ್ಲೂ ನಮ್ಮ ಆಕಾಶಕಾಯದಲ್ಲಿ ಅದೇನೇನು ಕೌತುಕಗಳಿವೆ ಅನ್ನೋದನ್ನು ಈಗಾಗಲೇ ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆದರೆ ಅದೊಂದು ಮುಗಿಯದ ಯೋಜನೆ, ಬಗೆದಷ್ಟು ಮತ್ತಷ್ಟು ವಿಶೇಷಗಳು ಸಿಗುತ್ತಲೇ ಹೋಗುತ್ತದೆ. ವಿಜ್ಞಾನಿಗಳಿಗೆ ಅಲ್ಲಿನ ಕೌತುಕಗಳನ್ನು ಮತ್ತಷ್ಟು ತಿಳಿಯುವ ಉತ್ಸಾಹ. ಇದೀಗ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ #Vyommitra ಹೆಸರಿನ ಮಹಿಳಾ ರೋಬೋಟ್‌ #FemaleRobot ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ.

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಈ ಬಾಹ್ಯಾಕಾಶ  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು. 2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ. ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

5 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

6 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

21 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago