Advertisement
MIRROR FOCUS

ಕಾವೇರಿ ಕಣಿವೆಯನ್ನು ಕಳೆದುಕೊಳ್ಳುವ ಮೊದಲು ಎಚ್ಚೆತ್ತುಕೊಳ್ಳಿ | ಕಾವೇರಿ ಸುತ್ತಮುತ್ತ ಕಾಡು ನಾಶ | ರಾಜ್ಯ ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

Share

ಇದು ನಿಜಕ್ಕೂ ರಾಜ್ಯದ(State) ಜನತೆಗೆ ಶಾಕಿಂಗ್‌ ನ್ಯೂಸ್.‌ ಕಾವೇರಿ(Cauvery) ನೀರಿಗಾಗಿ ಹೋರಾಡುವ ನಾವು ಮುಂದೊಂದು ದಿನ ಈ ನೀರಿನ ಮೂಲವನ್ನೇ ಕಳೆದುಕೊಳ್ಳುವ ಹಾದಿಯಲ್ಲಿದ್ದೇವೆ. 50 ವರ್ಷಗಳಲ್ಲಿ (1965ರಿಂದ 2016) ಕಾವೇರಿ ಕಣಿವೆಯ(Cauvery Vally) 12,850 ಚದರ ಕಿ.ಮೀ. ಹಸಿರು ನಾಶವಾಗಿದೆ(Greenery) ಎಂಬ ಭಾರತೀಯ ವಿಜ್ಞಾನ ಸಂಸ್ಥೆಯ(Indian institute of science) ವರದಿಯ ಆಧಾರದಲ್ಲಿ ಕರ್ನಾಟಕ(Karnataka), ತಮಿಳುನಾಡು(Tamilnadu) ಹಾಗೂ ಕೇರಳ(Kerala) ಸರ್ಕಾರಗಳಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠ ನೋಟಿಸ್ ನೀಡಿದೆ.

ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ತ್ರಿಸದಸ್ಯ ಪೀಠವು ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ಮಹಾನಿರ್ದೇಶಕರು, ಫಾರೆಸ್ಟ್ ಸರ್ವೆ ಆಫ್ ಇಂಡಿಯಾವನ್ನು ಪ್ರತಿವಾದಿಗಳನ್ನಾಗಿ ಮಾಡಿ ನೋಟಿಸ್‌ ಕೊಟ್ಟಿದೆ. ಕಾವೇರಿ ಕಣಿವೆಯ ಜಲಾನಯನ ಪ್ರದೇಶದ ಶೇ 73.5ರಲ್ಲಿ ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ. ಶೇ 18 ಪ್ರದೇಶದಲ್ಲಿ ಅರಣ್ಯವಿದೆ. ದಟ್ಟ ಅರಣ್ಯ ಇರುವುದು ಶೇ 13 ರಷ್ಟು ಪ್ರದೇಶದಲ್ಲಿ ಮಾತ್ರ. 1965ರಿಂದ 2016ರ ಅವಧಿಯಲ್ಲಿ ನೈಸರ್ಗಿಕ ಹಸಿರು ಪ್ರದೇಶ 28,154 ಚದರ ಕಿ.ಮೀ.ಯಿಂದ 15,345 ಚದರ ಕಿ.ಮೀ.ಗೆ ಇಳಿದಿದೆ.

ಕರ್ನಾಟಕದಲ್ಲಿ ಶೇ 57ರಷ್ಟು ಹಸಿರು (9,664 ಚ.ಕಿ.ಮೀ) ನಾಶವಾಗಿದೆ. ತಮಿಳುನಾಡಿನಲ್ಲಿ ಶೇ 29 (2905 ಚ.ಕಿ.ಮೀ) ಹಾಗೂ ಕೇರಳದಲ್ಲಿ ಶೇ 27 (279 ಚ.ಕಿ.ಮೀ) ಹಸಿರು ಕಣ್ಮರೆಯಾಗಿದೆ ಎಂದು ವರದಿಯಲ್ಲಿದೆ. 50 ವರ್ಷಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಶೇ 15.19ರಷ್ಟು ಅರಣ್ಯ ಪ್ರದೇಶ ಕಡಿಮೆಯಾಗಿದೆ. ಅಭಿವೃದ್ಧಿ ಚಟುವಟಿಕೆಗಳು ಹಾಗೂ ಕಾಳಿಚ್ಚಿನಿಂದಾಗಿ ರಾಷ್ಟ್ರೀಯ ಉದ್ಯಾನದ ಪೂರ್ವಭಾಗದಲ್ಲಿ ಅರಣ್ಯ ಗಣನೀಯವಾಗಿ ಕಡಿಮೆಯಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ಪ್ರಮಾಣ ಶೇ 11ರಷ್ಟು ಕಡಿಮೆಯಾಗಿದೆ. ಇದಕ್ಕೆ ಮಾನವನ ಹಸ್ತಕ್ಷೇಪ ಕಾರಣ. ಮೀಸಲು ಪ್ರದೇಶದಲ್ಲಿ ತೋಟಗಾರಿಕೆ ಚಟುವಟಿಕೆಗಳು ಭಾರಿ ಹೆಚ್ಚಳ ಆಗಿವೆ. ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಅಭಯಾರಣ್ಯದಲ್ಲಿ (ಬಿಆರ್‌ಟಿ) ಅರಣ್ಯ ಪ್ರದೇಶ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದ್ದು, ಕುರುಚಲು ಕಾಡುಗಳು ಹೆಚ್ಚುತ್ತಿವೆ. ಜತೆಗೆ ಅರಣ್ಯ ಒತ್ತುವರಿ ಜಾಸ್ತಿ ಆಗಿದೆ ಎಂದು ವರದಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಕಾವೇರಿ ವನ್ಯಜೀವಿ ಧಾಮದಲ್ಲಿ ಪರಿಸ್ಥಿತಿ ಭಿನ್ನವಾಗಿಲ್ಲ. ಜನಸಂಖ್ಯೆ ಹೆಚ್ಚಳ ಹಾಗೂ ಒತ್ತುವರಿಯಿಂದಾಗಿ ಕಾಡಿಗೆ ಆಪತ್ತು ಉಂಟಾಗಿದೆ. 1973ರಿಂದ 2016ರ ಅವಧಿಯಲ್ಲಿ ಶೇ 18.43ರಷ್ಟು ಹಸಿರು ನಾಶವಾಗಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ 1973ರಷ್ಟು ಶೇ 50.40ರಷ್ಟು ದಟ್ಟ ಕಾಡು ಇತ್ತು. 2016ರಲ್ಲಿ ಶೇ 28ಕ್ಕೆ ಕುಸಿದಿದೆ. ಇಲ್ಲಿ ಕೃಷಿ ಚಟುವಟಿಕೆ ಶೇ 7ರಿಂದ ಶೇ 15ಕ್ಕೆ ಏರಿದೆ. ಗಣಿಗಾರಿಕೆ, ಅಭಿವೃದ್ಧಿ ಚಟುವಟಿಕೆಗಳಿಂದಾಗಿ ಈ ಉದ್ಯಾನದ ಮೇಲೆ ಒತ್ತಡ ಹೆಚ್ಚಾಗಿದೆ ಎಂದೂ ವರದಿಯಲ್ಲಿ ಬೆಳಕು ಚೆಲ್ಲಲಾಗಿದೆ.

ಇದು ಪರಿಸರದ ಕಾನೂನಿನ ಸಂಬಂಧಿಸಿದ ವಿಚಾರ ಎಂದು ಅಭಿಪ್ರಾಯಪಟ್ಟಿರುವ ನ್ಯಾಯ ಮಂಡಳಿ, ‘ಇಂತಹ ಪ್ರಕರಣಗಳ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರತಿವಾದಿಗಳು ನ್ಯಾಯ ಮಂಡಳಿಗೆ ಆದಷ್ಟು ಶೀಘ್ರದಲ್ಲಿ ಪ್ರತಿಕ್ರಿಯೆ ನೀಡಬೇಕು” ಎಂದು ಸೂಚಿಸಿದೆ. ಈ ಪ್ರಕರಣ ನ್ಯಾಯ ಮಂಡಳಿಯ ಚೆನ್ನೈ ಪೀಠದ ವ್ಯಾಪ್ತಿಗೆ ಬರುತ್ತಿದೆ. ಹಾಗಾಗಿ ಮುಂದಿನ ವಿಚಾರಣೆಯನ್ನು ಚೆನ್ನೈ ಪೀಠ ನಡೆಸಲಿದೆ ಎಂದು ಪ್ರಧಾನಪೀಠ ತಿಳಿಸಿದೆ.

– ಅಂತರ್ಜಾಲ ಮಾಹಿತಿ

In 50 years (1965 to 2016) 12,850 sq km of Cauvery valley. The National Green Tribunal (NGT) has issued a notice to the governments of Karnataka, Tamil Nadu and Kerala based on the Indian Institute of Science’s report that the green has been destroyed.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

13 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

17 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

23 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago