Advertisement
MIRROR FOCUS

ಕಾವೇರಿ ಕಣಿವೆಯನ್ನು ಕಳೆದುಕೊಳ್ಳುವ ಮೊದಲು ಎಚ್ಚೆತ್ತುಕೊಳ್ಳಿ | ಕಾವೇರಿ ಸುತ್ತಮುತ್ತ ಕಾಡು ನಾಶ | ರಾಜ್ಯ ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

Share

ಇದು ನಿಜಕ್ಕೂ ರಾಜ್ಯದ(State) ಜನತೆಗೆ ಶಾಕಿಂಗ್‌ ನ್ಯೂಸ್.‌ ಕಾವೇರಿ(Cauvery) ನೀರಿಗಾಗಿ ಹೋರಾಡುವ ನಾವು ಮುಂದೊಂದು ದಿನ ಈ ನೀರಿನ ಮೂಲವನ್ನೇ ಕಳೆದುಕೊಳ್ಳುವ ಹಾದಿಯಲ್ಲಿದ್ದೇವೆ. 50 ವರ್ಷಗಳಲ್ಲಿ (1965ರಿಂದ 2016) ಕಾವೇರಿ ಕಣಿವೆಯ(Cauvery Vally) 12,850 ಚದರ ಕಿ.ಮೀ. ಹಸಿರು ನಾಶವಾಗಿದೆ(Greenery) ಎಂಬ ಭಾರತೀಯ ವಿಜ್ಞಾನ ಸಂಸ್ಥೆಯ(Indian institute of science) ವರದಿಯ ಆಧಾರದಲ್ಲಿ ಕರ್ನಾಟಕ(Karnataka), ತಮಿಳುನಾಡು(Tamilnadu) ಹಾಗೂ ಕೇರಳ(Kerala) ಸರ್ಕಾರಗಳಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠ ನೋಟಿಸ್ ನೀಡಿದೆ.

ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ತ್ರಿಸದಸ್ಯ ಪೀಠವು ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ಮಹಾನಿರ್ದೇಶಕರು, ಫಾರೆಸ್ಟ್ ಸರ್ವೆ ಆಫ್ ಇಂಡಿಯಾವನ್ನು ಪ್ರತಿವಾದಿಗಳನ್ನಾಗಿ ಮಾಡಿ ನೋಟಿಸ್‌ ಕೊಟ್ಟಿದೆ. ಕಾವೇರಿ ಕಣಿವೆಯ ಜಲಾನಯನ ಪ್ರದೇಶದ ಶೇ 73.5ರಲ್ಲಿ ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ. ಶೇ 18 ಪ್ರದೇಶದಲ್ಲಿ ಅರಣ್ಯವಿದೆ. ದಟ್ಟ ಅರಣ್ಯ ಇರುವುದು ಶೇ 13 ರಷ್ಟು ಪ್ರದೇಶದಲ್ಲಿ ಮಾತ್ರ. 1965ರಿಂದ 2016ರ ಅವಧಿಯಲ್ಲಿ ನೈಸರ್ಗಿಕ ಹಸಿರು ಪ್ರದೇಶ 28,154 ಚದರ ಕಿ.ಮೀ.ಯಿಂದ 15,345 ಚದರ ಕಿ.ಮೀ.ಗೆ ಇಳಿದಿದೆ.

ಕರ್ನಾಟಕದಲ್ಲಿ ಶೇ 57ರಷ್ಟು ಹಸಿರು (9,664 ಚ.ಕಿ.ಮೀ) ನಾಶವಾಗಿದೆ. ತಮಿಳುನಾಡಿನಲ್ಲಿ ಶೇ 29 (2905 ಚ.ಕಿ.ಮೀ) ಹಾಗೂ ಕೇರಳದಲ್ಲಿ ಶೇ 27 (279 ಚ.ಕಿ.ಮೀ) ಹಸಿರು ಕಣ್ಮರೆಯಾಗಿದೆ ಎಂದು ವರದಿಯಲ್ಲಿದೆ. 50 ವರ್ಷಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಶೇ 15.19ರಷ್ಟು ಅರಣ್ಯ ಪ್ರದೇಶ ಕಡಿಮೆಯಾಗಿದೆ. ಅಭಿವೃದ್ಧಿ ಚಟುವಟಿಕೆಗಳು ಹಾಗೂ ಕಾಳಿಚ್ಚಿನಿಂದಾಗಿ ರಾಷ್ಟ್ರೀಯ ಉದ್ಯಾನದ ಪೂರ್ವಭಾಗದಲ್ಲಿ ಅರಣ್ಯ ಗಣನೀಯವಾಗಿ ಕಡಿಮೆಯಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ಪ್ರಮಾಣ ಶೇ 11ರಷ್ಟು ಕಡಿಮೆಯಾಗಿದೆ. ಇದಕ್ಕೆ ಮಾನವನ ಹಸ್ತಕ್ಷೇಪ ಕಾರಣ. ಮೀಸಲು ಪ್ರದೇಶದಲ್ಲಿ ತೋಟಗಾರಿಕೆ ಚಟುವಟಿಕೆಗಳು ಭಾರಿ ಹೆಚ್ಚಳ ಆಗಿವೆ. ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಅಭಯಾರಣ್ಯದಲ್ಲಿ (ಬಿಆರ್‌ಟಿ) ಅರಣ್ಯ ಪ್ರದೇಶ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದ್ದು, ಕುರುಚಲು ಕಾಡುಗಳು ಹೆಚ್ಚುತ್ತಿವೆ. ಜತೆಗೆ ಅರಣ್ಯ ಒತ್ತುವರಿ ಜಾಸ್ತಿ ಆಗಿದೆ ಎಂದು ವರದಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಕಾವೇರಿ ವನ್ಯಜೀವಿ ಧಾಮದಲ್ಲಿ ಪರಿಸ್ಥಿತಿ ಭಿನ್ನವಾಗಿಲ್ಲ. ಜನಸಂಖ್ಯೆ ಹೆಚ್ಚಳ ಹಾಗೂ ಒತ್ತುವರಿಯಿಂದಾಗಿ ಕಾಡಿಗೆ ಆಪತ್ತು ಉಂಟಾಗಿದೆ. 1973ರಿಂದ 2016ರ ಅವಧಿಯಲ್ಲಿ ಶೇ 18.43ರಷ್ಟು ಹಸಿರು ನಾಶವಾಗಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ 1973ರಷ್ಟು ಶೇ 50.40ರಷ್ಟು ದಟ್ಟ ಕಾಡು ಇತ್ತು. 2016ರಲ್ಲಿ ಶೇ 28ಕ್ಕೆ ಕುಸಿದಿದೆ. ಇಲ್ಲಿ ಕೃಷಿ ಚಟುವಟಿಕೆ ಶೇ 7ರಿಂದ ಶೇ 15ಕ್ಕೆ ಏರಿದೆ. ಗಣಿಗಾರಿಕೆ, ಅಭಿವೃದ್ಧಿ ಚಟುವಟಿಕೆಗಳಿಂದಾಗಿ ಈ ಉದ್ಯಾನದ ಮೇಲೆ ಒತ್ತಡ ಹೆಚ್ಚಾಗಿದೆ ಎಂದೂ ವರದಿಯಲ್ಲಿ ಬೆಳಕು ಚೆಲ್ಲಲಾಗಿದೆ.

ಇದು ಪರಿಸರದ ಕಾನೂನಿನ ಸಂಬಂಧಿಸಿದ ವಿಚಾರ ಎಂದು ಅಭಿಪ್ರಾಯಪಟ್ಟಿರುವ ನ್ಯಾಯ ಮಂಡಳಿ, ‘ಇಂತಹ ಪ್ರಕರಣಗಳ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರತಿವಾದಿಗಳು ನ್ಯಾಯ ಮಂಡಳಿಗೆ ಆದಷ್ಟು ಶೀಘ್ರದಲ್ಲಿ ಪ್ರತಿಕ್ರಿಯೆ ನೀಡಬೇಕು” ಎಂದು ಸೂಚಿಸಿದೆ. ಈ ಪ್ರಕರಣ ನ್ಯಾಯ ಮಂಡಳಿಯ ಚೆನ್ನೈ ಪೀಠದ ವ್ಯಾಪ್ತಿಗೆ ಬರುತ್ತಿದೆ. ಹಾಗಾಗಿ ಮುಂದಿನ ವಿಚಾರಣೆಯನ್ನು ಚೆನ್ನೈ ಪೀಠ ನಡೆಸಲಿದೆ ಎಂದು ಪ್ರಧಾನಪೀಠ ತಿಳಿಸಿದೆ.

– ಅಂತರ್ಜಾಲ ಮಾಹಿತಿ

In 50 years (1965 to 2016) 12,850 sq km of Cauvery valley. The National Green Tribunal (NGT) has issued a notice to the governments of Karnataka, Tamil Nadu and Kerala based on the Indian Institute of Science’s report that the green has been destroyed.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago