MIRROR FOCUS

ವಕ್ಫ್ ವಿವಾದ | ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್ | ಪಹಣಿಯಲ್ಲಿ ಆಗಿರುವ ತಿದ್ದುಪಡಿ ರದ್ದುಗೊಳಿಸಿ ಸರ್ಕಾರ ತೀರ್ಮಾನ

Share

ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಬೆಂಗಳೂರಿನಲ್ಲಿ ಕಂದಾಯ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ನಿರ್ದೇಶನ ನೀಡಿದ್ದಾರೆ. ರೈತರಿಗೆ ನೋಟಿಸ್ ನೀಡಿರುವ ವಿಚಾರದಲ್ಲಿ ಕೆಲ ಅಧಿಕಾರಿಗಳ ಕಾರ್ಯವೈಖರಿಗೆ ಮುಖ್ಯಮಂತ್ರಿ ಸಭೆಯಲ್ಲಿ ಅಸಮಾದಾನ ವ್ಯಕ್ತಪಡಿಸಿದ್ದಾರೆ. ರೈತರಿಗೆ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡುವಂತೆ ತಿಳಿಸಿದ್ದಾರೆ.

ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ನೀಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.  ಈಗಾಗಲೇ ನೀಡಿರುವ ನೋಟಿಸ್ ವಾಪಸ್ ಪಡೆಯಲು ಸೂಚನೆ ನೀಡಲಾಗಿದೆ. ತುಮಕೂರಿನಲ್ಲಿ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ ವಕ್ಫ್ ದಾಖಲಾತಿಯಲ್ಲಿ ಒಂದೇ ಇದ್ದರೆ ಯಾವುದೇ ಗೊಂದಲ ಆಗುವುದಿಲ್ಲ. ಅಂತಿಮವಾಗಿ ಕಂದಾಯ ದಾಖಲಾತಿ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

3 hours ago

ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್

ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…

3 hours ago

2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಅಡಿಕೆಯ ನಾಡಿಗೆ ಬೇಕು ತರಕಾರಿ

https://youtu.be/6cCsJF4gW7g?si=57F6ddYN0stDBYbK

8 hours ago

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ…

8 hours ago

ಹೊಸರುಚಿ | ಎಳೆಯ ಹಲಸಿನ ಕಾಯಿ ಪಕೋಡ

ಎಳೆಯ ಹಲಸಿನ ಕಾಯಿ ಪಕೋಡ(Tender Jack Fruit)ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…

8 hours ago